ಬೆಂಗಳೂರು: ಬಿಜೆಪಿ ಸರ್ಕಾರದ 40% ಕಮೀಷನ್ ಭ್ರಷ್ಟಾಚಾರ ನಿಸರ್ಗದಿಂದಲೇ ಬಯಲಾಗುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿದ್ದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘ಮುಖ್ಯಮಂತ್ರಿಗಳು ಕಾಂಗ್ರೆಸ್ ದೂಷಣೆಯಿಂದ ತಮ್ಮ ಹಗರಣ ಮುಚ್ಚಿಕೊಳ್ಳಬಹುದು ಎಂದುಕೊಂಡಿದ್ದಾರೆ. ಆದರೆ, ಅವರ ಸರ್ಕಾರದ 40% ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ. ವಾಜಪೇಯಿ ಕ್ರೀಡಾಂಗಣದ ಛಾವಣಿ ಕುಸಿದಿದೆ, ತೇಲು ಸೇತುವೆ ತೇಲಿಹೋಗಿದೆ! ಇದು 40% ಕಮಿಷನ್ ಪ್ರಭಾವವಲ್ಲದೆ ಇನ್ನೇನು ಬಿಜೆಪಿ?’ ಎಂದು ಪ್ರಶ್ನಿಸಿದೆ.


ಶಿಕ್ಷಕರ ನೇಮಕಾತಿ ಪರೀಕ್ಷೆ ಮೇಲೆ ಶಿಕ್ಷಣ ಇಲಾಖೆ ಹದ್ದಿನ ಕಣ್ಣು: ಸಚಿವ ಬಿ.ಸಿ.ನಾಗೇಶ್‌


‘ಮೊನ್ನೆಯಷ್ಟೇ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೊಬ್ಬರು "ಟಿಕೆಟ್‌ಗಾಗಿ ಸೀರೆ, ಪಂಚೆ ಹಿಡಿದು ಬರಬೇಡಿ" ಎಂದು ತಮ್ಮ ಪಕ್ಷದವರಿಗೆ ಹೇಳಿದ್ದರು. ಹಿಡಿದು ಬರಬೇಕಿರುವುದು "ಸೂಟ್ ಕೇಸ್" ಎಂಬುದನ್ನು ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಟಿಕೆಟಿಗಾದರೂ ಸರಿ, ಮಂತ್ರಿಗಿರಿ, ಸಿಎಂ ಹುದ್ದೆಗದರೂ ಸರಿ ಬಿಜೆಪಿಯಲ್ಲಿ "ಸೂಟ್ ಕೇಸ್" ಮುಖ್ಯ!’ವೆಂದು ಕುಟುಕಿದೆ.


ಬಸವರಾಜ್ ಬೊಮ್ಮಾಯಿಯವರಿಂದ ಸ್ಟೇಡಿಯಂ ಉದ್ಘಾಟನೆ ! ಮೇ 9ರಂದು ಕ್ರೀಡಾಂಗಣ ಕುಸಿತ! ಇದು 40% ಕಮಿಷನ್ ಪ್ರಭಾವ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವ್ಯಾಪಕವಾದ ಭ್ರಷ್ಟಾಚಾರವು "ಬ್ರಾಂಡ್ ಕರ್ನಾಟಕ"ವನ್ನು ನಾಶಪಡಿಸುತ್ತಿದೆ’ ಎಂಬ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲರ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.


ಕ್ರೀಡಾಂಗಣದಲ್ಲಿ ಕುಸಿಯಲು 40% ಕಮಿಷನ್ ಕಾರಣ: ಆಪ್ ಆರೋಪ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.