ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಬೆಳಗಾವಿಯ ‘ಲಕ್ಷ್ಮಿ’ಗೆ ಮಾತ್ರ ಗೌರವವೆಂದು ಬಿಜೆಪಿ ಟೀಕಿಸಿದೆ. #CONgressAgainstWomenEmpowerment ಹ್ಯಾಶ್ ಟ್ಯಾಗ್ ಬಳಸಿ ಗುರುವಾರ ಬಿಜೆಪಿ ಸರಣಿ ಟ್ವೀಟ್‍ಗಳನ್ನು ಮಾಡಿದೆ.


COMMERCIAL BREAK
SCROLL TO CONTINUE READING

‘ಉತ್ತರಪ್ರದೇಶದಲ್ಲಿ ‘ಮೈ ಲಡ್ಕಿ ಹೂ, ಮೈ ಲಡ್ ಸಕ್ತಿ ಹೂ’ ಎಂದಾದರೆ, ಕರ್ನಾಟಕದಲ್ಲಿ ‘ನಾ ನಾಯಕಿ’ ಎನ್ನುವಂತಾಗಿದೆ. ಮಹಿಳಾ ಸಬಲೀಕರಣ ಬಗ್ಗೆ ಉದ್ದುದ್ದ ಭಾಷಣ ಮಾಡುವ ಕಾಂಗ್ರೆಸ್ ನಾಯಕರು ಒಬ್ಬ ಮಹಿಳಾ ಅಭ್ಯರ್ಥಿಯನ್ನೂ ಪರಿಷತ್ತಿಗೆ ಆಯ್ಕೆ ಮಾಡಿಲ್ಲ. ಮಹಿಳಾ ಸಬಲೀಕರಣ ಬರೇ ಭಾಷಣಕ್ಕೆ ಸೀಮಿತವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.


Karnataka Textbook Revision: ಪಠ್ಯದಿಂದ ತನ್ನ ಕಥೆ ಕೈಬಿಡಿ ಎಂದು ಸರ್ಕಾರಕ್ಕೆ ದೇವನೂರು ಪತ್ರ


‘ಧೈರ್ಯಕ್ಕೆ ದುರ್ಗೆ, ಶಕ್ತಿಗೆ ಪಾರ್ವತಿ ಸಹನೆಗೆ ಸೀತೆ, ವಿದ್ಯೆಗೆ ಸರಸ್ವತಿ ಎಂದು ಸ್ತ್ರೀಯರಿಗೆ ಗೌರವ ಕೊಡುವ ಸಂಸ್ಕೃತಿ ನಮ್ಮದು. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಬೆಳಗಾವಿಯ ‘ಲಕ್ಷ್ಮಿ’ಗೆ ಮಾತ್ರ ಗೌರವ. ಇದು ಮಹಿಳಾ ಸಬಲೀಕರಣ ವಿಚಾರಕ್ಕೆ ಕಾಂಗ್ರೆಸ್‌ ಮಾಡುತ್ತಿರುವ ಅವಮಾನವಲ್ಲದೆ ಮತ್ತೇನು?’ ಎಂದು ಬಿಜೆಪಿ ಕುಟುಕಿದೆ.


ಮಳಲಿ ಮಸೀದಿ ಜಾಗದಲ್ಲಿ ಶಿವ ಸಾನಿಧ್ಯ ಗೋಚರ!


ಬೆಳಗಾವಿಯ ಬೇನಾಮಿ ಅಧ್ಯಕ್ಷೆ ಮಾತ್ರ. ಡಿಕೆಶಿಯವರೇ ಲಕ್ಷ್ಮೀ ಜಪ ಮಾಡುವುದೇ ಮಹಿಳಾ ಸಬಲೀಕರಣವೇ? ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹೊಂದಿರುವ  ಮಹಿಳಾ ನಾಯಕಿಯೇ ‘ಕೈ’ ಪಕ್ಷದ ಮಹಿಳಾ ವಿರೋಧಿ ನೀತಿಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ, ಕಾಂಗ್ರೆಸ್‌ ಪಕ್ಷದಲ್ಲಿ ಸಾಮಾನ್ಯ ಮಹಿಳಾ ಕಾರ್ಯಕರ್ತರ ಪಾಡೇನು?’ ಎಂದು ಬಿಜೆಪಿ ಪ್ರಶ್ನಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.