ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹೆಸರಿನಲ್ಲಿ ಕೇಂದ್ರ ಸರ್ಕಾರವು ಇ.ಡಿಯನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಗೆ ಕಿರುಕುಳ ನೀಡುತ್ತಿದೆ. ಇದನ್ನು ಖಂಡಿಸಿ ಜುಲೈ 21ರಂದು ಕಾಂಗ್ರೆಸ್ ಬೆಂಗಳೂರಿನಲ್ಲಿ ಬಹೃತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ‘ರಾಜಭವನ’ಕ್ಕೆ ಮುತ್ತಿಗೆ ಹಾಕಲು ಯೋಜನೆ ರೂಪಿಸಿದೆ. ಅಂದು ರಾಜ್ಯದ 22 ಜಿಲ್ಲೆಗಳಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಇದಕ್ಕೆ #ಕಾಂಗ್ರೆಸ್‌ಇಟಲಿಪಾದಯಾತ್ರೆ ಎಂದು ಬಿಜೆಪಿ ಟೀಕಿಸಿದೆ.


COMMERCIAL BREAK
SCROLL TO CONTINUE READING

‘ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಹಾಗೂ ರಾಹುಲ್ ಗಾಂಧಿ‌ ನಡೆಸಿದ ಲೂಟಿಯನ್ನು "ಮನೆಗಳ್ಳತನ" ಎಂದು ಹೇಳಿದರೆ ಕಾಂಗ್ರೆಸ್ಸಿಗರಿಗೆ ರೋಷ ಉಕ್ಕಬಹುದು, ಆದರೆ ಅದೇ ಸತ್ಯ! ಈ ಮನೆಗಳ್ಳತನವನ್ನು ಸಮರ್ಥಿಸಿ ಕಾಂಗ್ರೆಸ್‌ ನಾಯಕರು ಪಾದಯಾತ್ರೆ ನಡೆಸುತ್ತಿರುವುದರ ಅರ್ಥವೇನು?’ ಎಂದು ಬಿಜೆಪಿ ಪ್ರಶ್ನಿಸಿದೆ.


ಇದನ್ನೂ ಓದಿ: GST Rates Hike: ಬಡವರ ಹೊಟ್ಟೆಗೆ ಒದೆಯುವುದೇ ಪ್ರಧಾನಿ ಮೋದಿಯವರ ‘ಅಚ್ಚೇ ದಿನ್’- ಸಿದ್ದರಾಮಯ್ಯ


‘ಜೈ ಭೀಮ್ʼ ಮತ್ತು ‘ಜನ ಗಣ ಮನ’ ಸಿನಿಮಾಗಳು ನನ್ನ ಮನ ಕಲಕಿವೆ: ಎಚ್‌ಡಿಕೆ


ಇಟಲಿ ಮಾತೆಗಾಗಿ" ಕಾಂಗ್ರೆಸ್ಸಿಗರು ಭಾರತ ಬಿಟ್ಟು ತೊಲಗಿ ಅಭಿಯಾನ ಮಾಡಿದರೆ ನಮ್ಮ ಅಭ್ಯಂತರವಿಲ್ಲ’ವೆಂದು ಬಿಜೆಪಿ ಟೀಕಿಸಿದೆ.  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.