ಚಿಕ್ಕಮಗಳೂರು : ಕಾಂಗ್ರೆಸ್ಸಿಗರು ಕಾಂಗ್ರೆಸ್ ಅಲೆಯಲ್ಲಿ ಗೆದ್ದಿಲ್ಲ, ಬಿಜೆಪಿಯ ತಪ್ಪಿನಿಂದ ಗೆದ್ದಿದ್ದಾರೆ ಅಷ್ಟೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಮಾತನಾಡುತ್ತಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ:ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌


ಬಿಜೆಪಿಯ ಮೀಸಲಾತಿ, ಹಿಜಬ್ ನಂತಹ ನಿರ್ಧಾರದಿಂದ ಗೆದ್ದಿರೋದು ಅಷ್ಟೆ,ಈಗ ಏನೇ ಮಾತನಾಡಿದ್ರು ಹತಾಶೆಯ ಮಾತು ಅಂತಾರೆ.ಸಿದ್ದರಾಮಯ್ಯ, ಡಿಕೆಶಿ ಅವರಿಗೆ  ಅಭಿನಂದನೆಗಳು, ಅವರಿಗೆ ದೊಡ್ಡ ಜವಾಬ್ದಾರಿ ಇದೆ. ಮಹಿಳೆಯರಿಗೆ 2000, ಫ್ರೀ ಬಸ್, ಯುವಕರಿಗೆ ಸ್ಟೇ ಫಂಡ್, ವಿದ್ಯುತ್ ಫ್ರೀ ಎಲ್ಲಾ ಜಾರಿಗೆ ಬರಲಿ. ನಂಬಿಕೆ ಇಟ್ಟು ಕಾಂಗ್ರೆಸ್ಸಿಗೆ ಮತ ಹಾಕಿದ್ದಾರೆ, ಜನ ಕಾಯ್ತಿದ್ದಾರೆ ಕೊಟ್ಟ ಮಾತನ್ನ ಉಳಿಸಿಕೊಂಡು ಹೇಗೆ ನಿಭಾಯಿಸುತ್ತಾರೋ ನೋಡೋಣ ಎಂದು ಹೇಳಿದರು.


ಇದನ್ನೂ ಓದಿ: Karnataka CM: ಯಾರಾಗ್ತಾರೆ ಕರುನಾಡ ಮುಂದಿನ ಸಿಎಂ? ಇಂದು ಹೊರಬೀಳಲಿದೆ ಮುಖ್ಯಮಂತ್ರಿ ಹೆಸರು!


ಸರ್ಕಾರ ಬಂದು 48 ಗಂಟೆಯೂ ಕಳೆದಿಲ್ಲ, ಹರಿಪ್ರಸಾದ್ ಈಗಲೇ ಯೂಟರ್ನ್ ಹೊಡೀತಿದ್ದಾರೆ,ಎಪಿಎಲ್ ಕಾರ್ಡ್ ನವರಿಗೆ, ಟ್ಯಾಕ್ಸ್ ಕಟ್ಟೋರ್ಗೆ ಇಲ್ಲ, ಬಿಪಿಎಲ್ ನವರಿಗೆ ಮಾತ್ರ ಅಂತಿದ್ದಾರೆ.ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಬರಲಿ ಎಂದು ಹಾರೈಸೋಣ.ಈಗಲೇ ಚರ್ಚೆ ಬೇಡ, ಸರ್ಕಾರದ ನಿಜ ರೂಪ ಹೊರಬರಬೇಕು.ಎರಡು ತಿಂಗಳು ಕಳೆಯಲಿ, ಸಿಎಂ, ಸಚಿವರು ಎಲ್ಲರೂ ಪ್ರಮಾಣ ವಚನ ಸ್ವೀಕರಿಸಲಿ ಕೊಟ್ಟ ಮಾತನ್ನ ಹೇಗೆ ಉಳಿಸಿಕೊಳ್ಳುತ್ತಾರೆ ನೋಡಿ ಚರ್ಚಿಸೋಣ ಎಂದು ಅವರು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.