ಒಂದೇ ವರ್ಷದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ: ಸಿಎಂ ಬೊಮ್ಮಾಯಿ

ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.‌ ರಾಜ್ಯದಲ್ಲಿ 2500 ಪೊಲೀಸ್ ಮನೆ ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣ ಹಂತದಲ್ಲಿವೆ ಎಂದು ಬೊಮ್ಮಾಯಿ ಹೇಳಿದರು.

Written by - Prashobh Devanahalli | Edited by - Puttaraj K Alur | Last Updated : Dec 28, 2022, 01:27 PM IST
  • ರಾಜ್ಯದಲ್ಲಿ ಒಂದೇ ವರ್ಷದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಠಾಣೆ ನಿರ್ಮಾಣ
  • 80 ಕೋಟಿ ರೂ. ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೋ ಖರೀದಿ
  • ಗೃಹ ಇಲಾಖೆ ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದೆ ಎಂದ ಸಿಎಂ ಬೊಮ್ಮಾಯಿ
ಒಂದೇ ವರ್ಷದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ: ಸಿಎಂ ಬೊಮ್ಮಾಯಿ title=
100ಕ್ಕೂ ಹೆಚ್ಚು ಪೊಲೀಸ್ ಠಾಣೆ ನಿರ್ಮಾಣ!

ಬೆಳಗಾವಿ: ರಾಜ್ಯದಲ್ಲಿ ಒಂದೇ ವರ್ಷದಲ್ಲಿ 100ಕ್ಕೂ ಹೆಚ್ಚು ಪೊಲೀಸ್  ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬುಧವಾರ ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ವಾಹನ ಖರೀದಿ

ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.‌ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣ ಹಂತದಲ್ಲಿವೆ. ‌ಒಂದೇ ವರ್ಷದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 80 ಕೋಟಿ ರೂ. ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೋ ಖರೀದಿ ಮಾಡಲಾಗುತ್ತಿದೆ. ‌ಡಿವೈಎಸ್ಪಿಗಳಿಗೆ ಸ್ಕಾರ್ಪಿಯೋ ವಾಹನಗಳನ್ನು  ನೀಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: "ಅಮಿತ್ ಶಾ ಯಾವ ಪಿಚ್ ನಲ್ಲಿ‌ ಬೇಕಾದ್ರೂ ಆಡ್ತಾರೆ"

ಜನರೊಂದಿಗೆ ನಿಕಟ ಸಂಪರ್ಕ

ಗೃಹ ಇಲಾಖೆ ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಪೊಲೀಸ್ ಪಡೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ, ಗಡಿಭಾಗದಲ್ಲಿ ಕೇವಲ ಶಕ್ತಿ ಪ್ರದರ್ಶನ ಮಾಡುವುದಲ್ಲ.‌ ಜನರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಅವರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು‌.‌ ಗಡಿ ಭಾಗದ ಸಮಸ್ಯೆ ಪರಿಹರಿಸಿದರೆ ಹೆಚ್ಚು ಅನುಕೂಲ. ಇತ್ತೀಚೆಗೆ ವಿದ್ವಂಸಕ ಕೃತ್ಯಗಳು ನಡೆಯುತ್ತಿದ್ದು, ಅವುಗಳನ್ನು ಅತ್ಯಂತ ವೇಗವಾಗಿ ಪತ್ತೆ ಹಚ್ಚುವ ಕೆಲಸ ಆಗುತ್ತಿದೆ. ದಕ್ಷತೆಯಿಂದ ನಮ್ಮ ಪೊಲಿಸರು ಕೆಲಸ ಮಾಡುತ್ತಿದ್ದಾರೆ‌. ನಾನು ಗೃಹ ಸಚಿವನಾಗಿದ್ದಾಗ ಅಡಿಗಲ್ಲು ಹಾಕಿದ ಕಟ್ಟಡಗಳು ಈಗ ಉದ್ಘಾಟನೆಯಾಗುತ್ತಿವೆ‌. FSL ರಿಪೋರ್ಟ್ 15 ದಿನದಲ್ಲಿ ಬಂದರೆ ಅಪರಾಧ ನಿಯಂತ್ರಣಕ್ಕೆ ಹೆಚ್ಚು ಅನುಕೂಲ ಆಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಶಾಸಕ ಅನಿಲ್ ಬೆನಕೆ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: New Year 2023: ಮಹಾಕುಡುಕರಿಗೆ ಪೊಲೀಸರಿಂದ ಇಲ್ಲೊಂದು ಬಂಪರ್ ಆಫರ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News