ಧಾರವಾಡ: ಬಾಗಲಕೋಟೆಯ ನಿವಾಸಿ ಗೀತಾ ಗೌಡರ ಎಂಬುವವರು ಧಾರವಾಡದ ಎಮ್.ಎಸ್. ಗ್ರೀನ್ ಕೌಂಟಿಯ ಮಾಲೀಕರಾದ ಶ್ರೀನಿವಾಸ ನಾಯ್ಡು ಎಂಬುವವರು ಈಟಿಗಟ್ಟಿಯ ಪ್ಲಾಟ್‍ನಂ.108 ನ್ನು ರೂ.4,80,000/-ಗಳಿಗೆ 2014ರಲ್ಲಿ ಖರೀದಿಸುವ ಕರಾರು ಒಪ್ಪಂದ ಮಾಡಿಕೊಂಡಿದ್ದರು. ಆ ಪೈಕಿ ಬೇರೆ ಬೇರೆ ದಿನಾಂಕಗಳಂದು ದೂರುದಾರಳು ಒಟ್ಟು ರೂ.3,66,000/- ಅಡವಾನ್ಸ್ ಹಣ ಎದುರುದಾರ/ಬಿಲ್ಡರಗೆ ಕೊಟ್ಟಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು?


ಬಾಕಿ ಮೊತ್ತವನ್ನು ತೆಗೆದುಕೊಂಡು ಖರೀದಿ ಪತ್ರ ನೋಂದಣಿ ಮಾಡಿಕೊಡುವಂತೆ ದೂರುದಾರ ಹಲವಾರು ಬಾರಿ ಎದುರುದಾರರಿಗೆ ಕೇಳಿಕೊಂಡರೂ ಸಹ ಎದುರುದಾರರು ಖರೀದಿ ಪತ್ರ ನೋಂದಣಿ ಮಾಡಿ ಕೊಟ್ಟಿರಲಿಲ್ಲ. ಎದುರುದಾರರ ಇಂತಹ ನಡಾವಳಿಯಿಂದ ತನಗೆ ಮೋಸವಾಗಿದೆ ಮತ್ತು ಅವರು ಸೇವಾನ್ಯೂನ್ಯತೆ ಎಸಗಿದ್ದಾರೆ ಅಂತ ಹೇಳಿ ಬಿಲ್ಡರ ವಿರುದ್ಧ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.


ಇದನ್ನೂ ಓದಿ: ರಮ್ಯಾ ಸಾವಿನ ಸುದ್ದಿ ಸುಳ್ಳು : ಸ್ಯಾಂಡಲ್‌ವುಡ್‌ ಕ್ವೀನ್‌ ಜಿನೀವಾದಲ್ಲಿ ಕ್ಷೇಮ


ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗ ಅಧ್ಯಕ್ಷ ಈಶಪ್ಪ. ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ.ಅ. ಬೋಳಶೆಟ್ಟಿ ಮತ್ತು ಪ್ರಭು. ಸಿ. ಹಿರೇಮಠ ಅವರು ದೂರುದಾರನಿಂದ ಬಾಕಿ ಹಣವನ್ನು ಪಡೆದುಕೊಂಡು ಎದುರುದಾರ ಅವರಿಗೆ ಪ್ಲಾಟ್ ಖರೀದಿ ಪತ್ರ ನೋಂದಣಿ ಮಾಡಿಕೊಡಲು ವಿಫಲರಾಗಿರುವುದು ಮತ್ತು ದೂರುದಾರನಿಗೆ ಹಣವನ್ನು ಹಿಂತಿರುಗಿಸದೆ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.


ದೂರುದಾರರು ಸಂದಾಯ ಮಾಡಿದ ರೂ.3,66,000/- ಮತ್ತು ಅದರ ಮೇಲೆ ಪೂರ್ತಿ ಹಣ ಸಂದಾಯವಾಗುವವರೆಗೆ ಶೇ.8 ರಂತೆ ವಾರ್ಷಿಕ ಬಡ್ಡಿ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಎದುರುದಾರರಿಗೆ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ ರೂ.50,000/- ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ಅಂತಾ ರೂ.10,000/- ನೀಡುವಂತೆ ಆರ್.ಎಮ್.ಬಿಲ್ಡ್‍ರ್ಸ್/ಎದುರುದಾರರಿಗೆ ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.