ಮನೆ ಕಟ್ಟಿಕೊಡದ ಬಿಲ್ಡರ್ ಗೆ ಬಡ್ಡಿ ಸಹಿತ ಪರಿಹಾರ ನೀಡಲು ಗ್ರಾಹಕ ಆಯೋಗದ ಆದೇಶ

  ಮನೆ ಕಟ್ಟಿಕೊಡದ ಬಿಲ್ಡರ್ ದೂರುದಾರರಿಂದ ಪಡೆದ ಮುಂಗಡ ಹಣ ರೂ.13 ಲಕ್ಷ 95 ಸಾವಿರದ 97 ರೂಪಾಯಿ ಬಡ್ಡಿಸಮೇತ, ಪರಿಹಾರ ಮತ್ತು ದಂಡ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಆದೇಶ ನೀಡಿದೆ.

Written by - Zee Kannada News Desk | Last Updated : Nov 23, 2022, 03:07 PM IST
  • ಮುಂಗಡ ಹಣಕೊಟ್ಟು ಒಪ್ಪಂದ ಆಗಿದ್ದರೂ ಬಿಲ್ಡರ್ ತನಗೆ ಮನೆ ನಿರ್ಮಾಣ ಮಾಡಿಕೊಡದೇ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆ.
  • ಅಂತಾ ಬಿಲ್ಡರ್ ಮೇಲೆ ಕ್ರಮ ಕೈಗೊಳ್ಳುವಂತೆ ಫಿರ್ಯಾದಿದಾರ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಮನೆ ಕಟ್ಟಿಕೊಡದ ಬಿಲ್ಡರ್ ಗೆ ಬಡ್ಡಿ ಸಹಿತ ಪರಿಹಾರ ನೀಡಲು ಗ್ರಾಹಕ ಆಯೋಗದ ಆದೇಶ  title=

ಕಾರವಾರ:  ಮನೆ ಕಟ್ಟಿಕೊಡದ ಬಿಲ್ಡರ್ ದೂರುದಾರರಿಂದ ಪಡೆದ ಮುಂಗಡ ಹಣ ರೂ.13 ಲಕ್ಷ 95 ಸಾವಿರದ 97 ರೂಪಾಯಿ ಬಡ್ಡಿಸಮೇತ, ಪರಿಹಾರ ಮತ್ತು ದಂಡ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಆದೇಶ ನೀಡಿದೆ.

ಇದನ್ನೂ ಓದಿ : Mangaluru auto blast : ನಾಳೆ ಮಂಗಳೂರಿಗೆ ಗೃಹ ಸಚಿವರ ಭೇಟಿ, ಹಿರಿಯ ಅಧಿಕಾರಿಗಳ ಜೊತೆ ಸಭೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಾ ಬನವಾಸಿ ಗ್ರಾಮದ ಪರಮೇಶ್ವರ ವಿಘ್ನೇಶ್ವರ ಭಟ್ ಎಂಬುವವರು ಧಾರವಾಡದ ಶ್ರೀ. ವೀರಭದ್ರೇಶ್ವರ ಇನ್‍ಪ್ರಾಸ್ಟ್ರಕ್ಚರ್ ಮತ್ತು ಹೌಸಿಂಗ್ ಪ್ರೈ.ಲಿ. ಇದರ ಆಡಳಿತಾತ್ಮಕ ನಿರ್ದೇಶಕರಾದ ನಾಗನಗೌಡ ಶಿವನಗೌಡ ನೀರಲಗಿ ರವರ ಜೊತೆ ಪೂರ್ಣಿಮಾ ಲೇಔಟ್‍ನಲ್ಲಿ 1200 ಚ.ಅ. ವಿಸ್ತೀರ್ಣದ ಜಾಗೆಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಡಲು ರೂ.16,86,167/- ಗಳಿಗೆ ದಿ: 05/02/2007 ರಂದು ಒಪ್ಪಂದ ಮಾಡಿಕೊಂಡಿದ್ದು ಆ ಪೈಕಿ ರೂ.13,95,097/-ಮುಂಗಡವಾಗಿ ನೀಡಿದ್ದರು. ಮುಂಗಡ ಹಣಕೊಟ್ಟು ಒಪ್ಪಂದ ಆಗಿದ್ದರೂ ಬಿಲ್ಡರ್ ತನಗೆ ಮನೆ ನಿರ್ಮಾಣ ಮಾಡಿಕೊಡದೇ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆ ಅಂತಾ ಬಿಲ್ಡರ್ ಮೇಲೆ ಕ್ರಮ ಕೈಗೊಳ್ಳುವಂತೆ ಫಿರ್ಯಾದಿದಾರ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ : ಬಳ್ಳಾರಿ ‘ನವಶಕ್ತಿ ಸಮಾವೇಶ’ದ ಯಶಸ್ಸು ಕಾಂಗ್ರೆಸ್ ಪಕ್ಷಕ್ಕೆ ತಳಮಳ ಮೂಡಿಸಿದೆ: ಬಿಜೆಪಿ

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಹಾಗೂ ವಿಶಾಲಾಕ್ಷಿ ಬೋಳಶೆಟ್ಟಿ, ಪ್ರಭು ಹಿರೇಮಠ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಹಣವನ್ನು ಡೆವಲಪರ್ ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ಅವರಿಗೆ ಮನೆ ಕಟ್ಟಿಕೊಡದೇ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿರುತ್ತಾರೆ ಅಂತಾ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ. ಈ ಬಗ್ಗೆ ವೀರಭದ್ರೇಶ್ವರ ಹೌಸಿಂಗ್ ಪ್ರೈ.ಲಿ. ಆಡಳಿತಗಾರ ಎನ್.ಎಸ್. ನೀರಲಗಿ ದೂರುದಾರರಿಂದ ಪಡೆದ ರೂ.13,95,097/- ಗಳನ್ನು ದಿ:04/06/2015ರಿಂದ ಶೇ.9% ರಂತೆ ಬಡ್ಡಿ ಲೆಕ್ಕ ಹಾಕಿ ಹಾಗೂ ಮಾನಸಿಕ ತೊಂದರೆಗೆ ರೂ.1,00,000/- ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚ ರೂ.10,000/-ಗಳನ್ನು ಈ ಆದೇಶದ ದಿನಾಂಕದಿಂದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ತೀರ್ಪು ನೀಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News