ಗುತ್ತಿಗೆದಾರರ 40% ಆರೋಪ ಸತ್ಯ, 15% ಆರೋಪ ಸುಳ್ಳು : ಸಚಿವ ರಾಮಲಿಂಗಾ ರೆಡ್ಡಿ

ವಿಧಾನಸೌಧದಲ್ಲಿ ಗುರುವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆಗೆ ನಾಲ್ಕು ತಂಡ ರಚನೆ ಮಾಡಲಾಗಿದೆ. ಅವರ ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ ಎಂದರು.

Written by - RACHAPPA SUTTUR | Edited by - Yashaswini V | Last Updated : Aug 10, 2023, 01:01 PM IST
  • ಬಿಬಿಎಂಪಿ ಗುತ್ತಿಗೆದಾರರ ಸಂಘ ಡಿಸಿಎಂ ಡಿಕೆಶಿ ವಿರುದ್ಧ ಆರೋಪ ಮಾಡಿದೆ.
  • ಬಾಕಿ ಬಿಲ್ ಬಿಡುಗಡೆ ಮಾಡಲು 15 ಶೇ. ಕಮಿಷನ್ ಬೇಡಿಕೆ ಇಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
  • ಇನ್ನು ಗುತ್ತಿಗೆದಾರರು ಈ ಬಗ್ಗೆ ರಾಜ್ಯಪಾಲರಿಗೆ ದೂರನ್ನು ನೀಡಿದ್ದಾರೆ.
ಗುತ್ತಿಗೆದಾರರ 40% ಆರೋಪ ಸತ್ಯ, 15% ಆರೋಪ ಸುಳ್ಳು : ಸಚಿವ ರಾಮಲಿಂಗಾ ರೆಡ್ಡಿ title=

ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿದ್ದ 40% ಆರೋಪ ಸತ್ಯ. ಆದರೆ ಇವಾಗ ಕಾಂಗ್ರೆಸ್ ವಿರುದ್ಧ ಮಾಡುತ್ತಿರುವ  15% ಆರೋಪ ಸುಳ್ಳು ಎಂದು ಸಚಿವ ರಾಮಲಿಂಗಾ ರೆಡ್ಡಿ ಸಮರ್ಥನೆ ಮಾಡಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆಗೆ ನಾಲ್ಕು ತಂಡ ರಚನೆ ಮಾಡಲಾಗಿದೆ. ಅವರ ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ ಎಂದರು.

ಇದನ್ನೂ ಓದಿ- 1 ರೂ.ಗೆ ರಾಗಿ ಮುದ್ದೆ ನೀಡಿ ಹೋಟೇಲ್‌ ತಿಂಡಿಗಳ ಬೆಲೆ ಏರಿಕೆ ಖಂಡಿಸಿದ ವಾಟಾಳ್..!

ವರದಿ ಕೊಡುವ ಮೊದಲೇ ಕಮಿಷನ್ ಆರೋಪ ಮಾಡುತ್ತಿದ್ದಾರೆ. ಅವರು ‌ಮಾಡಿರುವ ಅಪಾದನೆ ಸತ್ಯಕ್ಕೆ ದೂರವಾಗಿದೆ. ಬಿಜೆಪಿ ಇದ್ದಾಗ 40% ಕಮಿಷನ್ ಆಯಿತು. ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ ಎಂದವರು ಇದೇ ವೇಳೆ ವಿರೋಧ ಪಕ್ಷದ ವಿರುದ್ದ ವಾಗ್ಧಾಲಿ ನಡೆಸಿದರು. 

ಬಿಜೆಪಿ ಅವರ ಮಾತಿಗೆ ಕಿಮ್ಮತ್ತಿಲ್ಲ. ಐದು ವರ್ಷ ವಿರೋಧ ಪಕ್ಷದಲ್ಲಿ ಇದ್ದು ಕೆಲಸ ಮಾಡಲಿ ಎಂದು ಸಲಹೆ ನೀಡಿದರು. ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕು.‌ ಬೇಗ ಬಿಲ್ ಬಿಡುಗಡೆಯಾದರೆ ಕೆಲಸ ಮಾಡಲು ಅನುಕೂಲ ಆಗುತ್ತೆ. ಆನ್ ಲೈನ್ ನಲ್ಲಿ ಬಿಲ್ ಪೇಮೆಂಟ್ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ- ಬಣ್ಣದ ಲೋಕದ ಬಗ್ಗೆ ಹಾಸ್ಯನಟ ಚೇತನ್ ದುರ್ಗಾ ಹೇಳಿದ್ದೇನು?

ಬಿಬಿಎಂಪಿ ಗುತ್ತಿಗೆದಾರರ ಸಂಘ ಡಿಸಿಎಂ ಡಿಕೆಶಿ ವಿರುದ್ಧ ಆರೋಪ ಮಾಡಿದೆ. ಬಾಕಿ ಬಿಲ್ ಬಿಡುಗಡೆ ಮಾಡಲು 15 ಶೇ. ಕಮಿಷನ್ ಬೇಡಿಕೆ ಇಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇನ್ನು ಗುತ್ತಿಗೆದಾರರು ಈ ಬಗ್ಗೆ ರಾಜ್ಯಪಾಲರಿಗೆ ದೂರನ್ನು ನೀಡಿದ್ದಾರೆ. ಬಾಕಿ ಪಾವತಿ ಆಗುವ ವರೆಗೆ ಕೆಲಸ ನಿಲ್ಲಿಸುವ ಬೆದರಿಕೆಯನ್ನು ಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News