Covid-19:ಸಚಿವ ಮಾಧುಸ್ವಾಮಿ, ಸಿಎಂ ಪುತ್ರನಿಗೆ ಕೊರೊನಾ ಪಾಸಿಟಿವ್

Covid-19: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಹಾಗೂ ಸಿಎಂ ಪುತ್ರ ಭರತ್ ಬೊಮ್ಮಾಯಿಗೆ ಕೊರೊನಾ ಸೋಂಕು ತಗುಲಿದೆ. 

Edited by - Zee Kannada News Desk | Last Updated : Jan 11, 2022, 12:58 PM IST
  • ಸಚಿವ ಜೆ.ಸಿ.ಮಾಧುಸ್ವಾಮಿಗೆ ಕೊವಿಡ್ ದೃಢ
  • ಸಿಎಂ ಪುತ್ರ ಭರತ್ ಬೊಮ್ಮಾಯಿಗೆ ಕೊರೊನಾ ಸೋಂಕು
Covid-19:ಸಚಿವ ಮಾಧುಸ್ವಾಮಿ, ಸಿಎಂ ಪುತ್ರನಿಗೆ ಕೊರೊನಾ ಪಾಸಿಟಿವ್   title=
ಕೃಪೆ: ಟ್ವಿಟರ್

ಬೆಂಗಳೂರು: ನಿನ್ನೆಯಷ್ಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅವರ ಬೆನ್ನಲ್ಲೇ ಪುತ್ರ ಭರತ್ ಬೊಮ್ಮಾಯಿ (Bharat Bommai) ಸಹ ಕೊವಿಡ್ ಸೋಂಕಿಗೆ ಒಳಗಾಗಿದ್ದಾರೆ. 

ಸಿಎಂ ಬೊಮ್ಮಾಯಿಗೆ ಕೊವಿಡ್ ಪಾಸಿಟಿವ್ (Corona Positive) ಬಂದ ಹಿನ್ನೆಲೆ ಕುಟುಂಬ ಸದಸ್ಯರ ಕೊರೊನಾ ಪರಿಕ್ಷೆ ನಡೆಸಲಾಗಿತ್ತು.  ಈ ವೇಳೆ ಸಿಎಂ ಪುತ್ರ ಭರತ್ ಬೊಮ್ಮಾಯಿ ಅವರ ವರದಿ ಪಾಸಿಟಿವ್ ಬಂದಿದೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ತಮಗೆ ಕೊರೊನಾ ತಗುಲಿದ್ದು, ಸೌಮ್ಯ ರೋಗ ಲಕ್ಷಣಗಳೊಂದಿಗೆ ಮನೆಯಲ್ಲಿಯೇ ಪ್ರತ್ಯೆಕವಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ತಪಾಸಣೆಗೆ ತೆಗೆದುಕೊಳ್ಳಿ" ಎಂದು ಹೇಳಿದ್ದಾರೆ.

 

 

ಸಚಿವ ಮಾಧುಸ್ವಾಮಿಗೂ ತಗುಲಿದ ಕೊವಿಡ್:

ಸಚಿವ ಜೆ.ಸಿ.ಮಾಧುಸ್ವಾಮಿ (Madhuswamy) ಅವರಿಗೆ ಸಹ ಕೊರೊನಾ ಸೋಂಕು ತಗುಲಿದೆ. Asymptomatic ಆಗಿರುವ ಸಚಿವರು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮೇಲೆ ಕೊರೊನಾ ಕರಿನೆರೆಳು: ಒಂದೇ ವಾರದಲ್ಲಿ ಹೆಚ್ಚಾಯ್ತು ಕಂಟೈನ್ಮೆಂಟ್ ಜೋನ್ ಗಳ ಸಂಖ್ಯೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News