ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಹೊಸ ಕೋವಿಡ್ JN.1 ಸೊಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದ ಸ್ಥಿತಿಗತಿ ಹಾಗೂ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಚರ್ಚಿಸಲು ಗುರುವಾರ ಸಿಎಂ ಸಿದ್ದರಾಮಯ್ಯನವರು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಸಭೆ ನಡೆಸಿದರು.


COMMERCIAL BREAK
SCROLL TO CONTINUE READING

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯ ಮುಖ್ಯಾಂಶಗಳು


  • ಕೋವಿಡ್‌- 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಅದರಲ್ಲೂ JN.1 ಎಂಬ ಹೊಸ ತಳಿಯ ವೈರಸ್‌ ಪತ್ತೆಯಾಗಿದೆ.

  • ಕಳೆದ 1 ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ.

  • ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಕೊರೊನಾ ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ 2,041, ತಮಿಳುನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 ಸಕ್ರಿಯ ಪ್ರಕರಣಗಳಿವೆ.

  • ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿವೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. (Home Isolation). 20 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. 7 ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ.

  • ರಾಜ್ಯದಲ್ಲಿ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ನಿತ್ಯ 5000ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1,500 Rapid Antigen Test ಹಾಗೂ 3,500 RTPCR ಪರೀಕ್ಷೆಗಳಾಗಿವೆ. ಬೆಂಗಳೂರು ನಗರದಲ್ಲಿ 1,000 ಪರೀಕ್ಷೆಗಳನ್ನು ನಡೆಸಲಾಗುವುದು. ಗಡಿ ಭಾಗಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುವುದು.

  • ಕರ್ನಾಟಕದಲ್ಲಿ ಡಿಸೆಂಬರ್‌ 15ರಂದು 1 ಹಾಗೂ ಡಿಸೆಂಬರ್‌ 20ರಂದು 2 ಸಾವುಗಳು ಸಂಭವಿಸಿವೆ. ಈ 3 ಪ್ರಕರಣಗಳಲ್ಲಿ ಎಲ್ಲರೂ ಇತರ ಆರೋಗ್ಯ ಸಮಸ್ಯೆಗಳಿಂದ (Co-Morbidity) ಬಳಲುತ್ತಿದ್ದರು.

  • ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ. ಕೋವಿಡ್‌ -19 ಈಗ Pandemic ಆಗಿ ಉಳಿದಿಲ್ಲ. Endemic ಆಗಿದೆ. ಸರ್ಕಾರವೂ ಸಹ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ.

  • ಕೊರೊನಾದಿಂದ ಮೃತರಾದವರು Co-morbidity ಇರುವವರು, ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ, ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದವರ ಜಿನೋಮ್‌ ಸಿಕ್ವೆನ್ಸಿಂಗ್‌ ಮಾಡಲಾಗುತ್ತಿದೆ.


ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ


ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಸಲಹೆಗಳ ಕುರಿತು ಇಂದಿನ ಸಭೆಯಲ್ಲಿ ಈ ಕೆಳಕಂಡ ತೀರ್ಮಾನ ಕೈಗೊಳ್ಳಲಾಗಿದೆ


  • ಹಿಂದಿನ ಕೋವಿಡ್‌ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು.

  • ಆಕ್ಸಿಜನ್‌, ವೆಂಟಿಲೇಟರ್‌ & ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನರು ಮೃತಪಟ್ಟರು. ಆಕ್ಸಿಜನ್‌ ಲಭ್ಯತೆಯನ್ನು ಖಾತರಿ ಪಡಿಸಬೇಕು.

  • ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಈ ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು.

  • ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು.

  • ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು.

  • ಕೋವಿಡ್‍ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.

  • ಎಲ್ಲಾ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ಮಾಡಲಾಗಿದೆ. ಎಲ್ಲಾ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ.


ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳು ಹಾಗೂ ರಾಜ್ಯದಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು


ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು 20ರಲ್ಲಿ 1 ಜ್ವರ (ILI)ದ ಪ್ರಕರಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚಿಸಿದೆ.


ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ರಣತಂತ್ರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.