ಕಾಲಿಗೆ ನಮಸ್ಕರಿಸಿದ ಸಿಟಿ ರವಿ ಕಿವಿ ಹಿಂಡಿ, ಬೆನ್ನು ತಟ್ಟಿ ಆಶೀರ್ವಾದ ಮಾಡಿದ ಸಿಎಂ ಸಿದ್ದರಾಮಯ್ಯ

MLA Oath Ceremony: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌.ಕೆ.ಪಾಟೀಲ್ ಸೇರಿದರಂತೆ ರಾಜಕೀಯ ಗಣ್ಯರು ಭಾಗಿಯಾಗಿದ್ದರು.

Written by - Puttaraj K Alur | Last Updated : Jun 24, 2024, 05:32 PM IST
  • ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ
  • ಪ್ರಮಾಣ ವಚನದ ಬಳಿಕ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ನಮಸ್ಕರಿಸಿದ ಸಿಟಿ ರವಿ
  • ಸಿಟಿ ರವಿಯವರ ಕಿವಿ ಹಿಂಡಿ, ಬೆನ್ನುತಟ್ಟಿ ಆಶೀರ್ವಾದ ಮಾಡಿದ ಸಿಎಂ ಸಿದ್ದರಾಮಯ್ಯ
ಕಾಲಿಗೆ ನಮಸ್ಕರಿಸಿದ ಸಿಟಿ ರವಿ ಕಿವಿ ಹಿಂಡಿ, ಬೆನ್ನು ತಟ್ಟಿ ಆಶೀರ್ವಾದ ಮಾಡಿದ ಸಿಎಂ ಸಿದ್ದರಾಮಯ್ಯ title=
ಸಿದ್ದರಾಮಯ್ಯ ಕಾಲು ಮುಟ್ಟಿ ನಮಸ್ಕರಿಸಿದ ಸಿಟಿ ರವಿ

MLA Oath Ceremony: ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿತ್ತು. ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಅನೇಕ ಸದಸ್ಯರು ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು. 

ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿಯವರು ಪ್ರಮಾಣ ವಚನ ಬೋಧಿಸಿದರು. ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಕೇಸರಿ ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರು ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ನಮಸ್ಕರಿಸಿದರು. ಈ ವೇಳೆ ಸಿಟಿ ರವಿಯವರ ಕಿವಿ ಹಿಂಡಿದ ಸಿದ್ದರಾಮಯ್ಯನವರು ಬೆನ್ನು ತಟ್ಟಿ ಅಭಿನಂದಿಸಿದರು.

ಇದನ್ನೂ ಓದಿ: 11 ದಿನ ಕಸ್ಟಡಿಯಲ್ಲಿದ್ರೂ ದರ್ಶನ್‌ ದೇಹದ ತೂಕದಲ್ಲಿ ವ್ಯತ್ಯಾಸವಿಲ್ಲ

ಇದೇ ಸಂದರ್ಭದಲ್ಲಿ ಭಾರತ ಮಾತೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಪರಿಷತ್ ಸದಸ್ಯ ಎನ್.ರವಿಕುಮಾರ್‌ ಸಹ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಇದಲ್ಲದೆ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್‌ ಸದಸ್ಯ ಭೋಜೇಗೌಡರೂ ಸಹ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು.

ಇದೇ ವೇಳೆ ಭಗವಂತ ಹಾಗೂ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಯತೀಂದ್ರ ಸಿದ್ದರಾಮಯ್ಯನವರು ಸಹ ತಂದೆ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಕೆ.ಗೋವಿಂದ ರಾಜ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು.  

ಇದನ್ನೂ ಓದಿ:  ರೇಣುಕಾಸ್ವಾಮಿ ಹತ್ಯೆ ಪ್ರಕರಣ : 139 ವಸ್ತುಗಳು ಖಾಕಿ ವಶಕ್ಕೆ

ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌.ಕೆ.ಪಾಟೀಲ್ ಸೇರಿದರಂತೆ ರಾಜಕೀಯ ಗಣ್ಯರು ಭಾಗಿಯಾಗಿದ್ದರು. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ 11 ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ಇದೇ ವೇಳೆ ನಡೆಯಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News