ಜನರ ಕಿವಿಗೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

CT Ravi Slams Congress Government: ʼಸಿಎಂ ಸಿದ್ದರಾಮಯ್ಯ ಅವರೇ ಕೆಲ ದಿನದ ಹಿಂದೆ "ರಾಜ್ಯ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ" ಎಂದ ನೀವು, ಈಗ ಧಿಢೀರ್‌ ಅಂತ ಮಾಡಿದ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ..? ಎಂದು ಪ್ರಶ್ನಿಸಿದ್ದಾರೆ.

Written by - Puttaraj K Alur | Last Updated : Jun 16, 2024, 03:33 PM IST
  • ಕಾಂಗ್ರೆಸ್ ಸರ್ಕಾರವು ಪೆಟ್ರೋಲ್ ಮೇಲೆ 3 ರೂ. ಮತ್ತು ಡಿಸೇಲ್ ಬೆಲೆಯಲ್ಲಿ 3.50 ರೂ. ಏರಿಕೆ
  • ಕಿವಿಯಲ್ಲಿ ದಾಸವಾಳ ಮುಡಿದು, ಕೈಯಲ್ಲಿ ತೆಂಗಿನ ಚಿಪ್ಪು ಹಿಡಿದು ಬಿಜೆಪಿಯಿಂದ ವಿನೂತನ ಪ್ರತಿಭಟನೆ
  • ರಾಜ್ಯದ ಜನತೆಯ ಕಿವಿಯ ಮೇಲೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ
ಜನರ ಕಿವಿಗೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ಕಾಂಗ್ರೆಸ್ ಸರ್ಕಾರ: ಸಿಟಿ ರವಿ title=
ಬಿಜೆಪಿಯಿಂದ ವಿನೂತನ ಪ್ರತಿಭಟನೆ!

CT Ravi Slams Congress Government: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪೆಟ್ರೋಲ್ ಮೇಲೆ 3 ರೂ. ಮತ್ತು ಡಿಸೇಲ್ ಬೆಲೆಯಲ್ಲಿ 3.50 ರೂ. ಏರಿಕೆ ಮಾಡಿದೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡ ಸಿಟಿ ರವಿ ಮತ್ತು ಬಿಜೆಪಿ ಕಾರ್ಯಕರ್ತರು ಕಿವಿಯಲ್ಲಿ ದಾಸವಾಳ ಮುಡಿದು, ಕೈಯಲ್ಲಿ ತೆಂಗಿನ ಚಿಪ್ಪು ಹಿಡಿದು ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡರುವ ಸಿಟಿ ರವಿ, "ರಾಜ್ಯದ ಜನತೆಯ ಕಿವಿಯ ಮೇಲೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ". ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ ಕಾಂಗ್ರೆಸ್ ಸರ್ಕಾರದ ಅಸಲಿ "ಕರ್ನಾಟಕ ಮಾಡೆಲ್"ʼ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ರೇಣುಕಸ್ವಾಮಿ ಏನ್‌ ಸತ್ಯ ಹರಿಶ್ಚದ್ರನಾ..? ಬುದ್ದಿ ಕಲಿಸಲು ಹೊಡೆದಿರಬೇಕು, ಅವನು ಸತ್ತ : ನಟಿ ಕಸ್ತೂರಿ

ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್‌ ಬೆಲೆಯನ್ನು ಪ್ರತಿ ಲೀಟರಿಗೆ 3 ರೂ. ಹಾಗೂ ಡಿಸೇಲ್‌ ಬೆಲೆಯನ್ನು ಪ್ರತಿ ಲೀಟರಿಗೆ 3.50 ರೂ.ನಷ್ಟು ಹೆಚ್ಚಿಸಿದೆ. ಇದನ್ನು ವಿರೋಧಿಸಿ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ ಅಂತಾ ಹೇಳಿದ್ದಾರೆ. 

ʼಸಿಎಂ ಸಿದ್ದರಾಮಯ್ಯ ಅವರೇ ಕೆಲ ದಿನದ ಹಿಂದೆ "ರಾಜ್ಯ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ" ಎಂದ ನೀವು, ಈಗ ಧಿಢೀರ್‌ ಅಂತ ಮಾಡಿದ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ..? ನಿಮಗೆ ನಿಜಕ್ಕೂ ಬಡವರ ಮೇಲೆ ಕಾಳಜಿ ಇದ್ದರೆ, ಕೂಡಲೇ ಬೆಲೆ ಏರಿಕೆ ಆದೇಶವನ್ನು ಹಿಂಪಡೆಯಿರಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಬಗ್ಗೆ ಸಹೋದರ ದಿನಕರ್ ತೂಗುದೀಪ ಮೊದಲ ರಿಯಾಕ್ಷನ್

ಪ್ರತಿಭಟನೆ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಸಂತೋಷ್ ಕೋಟ್ಯಾನ್, ಪಕ್ಷದ ಮುಖಂಡರಾದ ಮಧು ಕುಮಾರ್, ಟಿ.ರಾಜಶೇಖರ್, ಜೀವನ್ ಸೇರಿದಂತೆ ಪಕ್ಷದ ಮುಖಂಡರು, ಹಿರಿಯರು ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News