ಬೆಂಗಳೂರು: ಪ್ರಸಿದ್ಧ  ತಿರುಪತಿ ಲಾಡು ತಯಾರಿಗೆ ನಂದಿನಿ ತುಪ್ಪ ಪೂರೈಕೆ ಬಂದ್ ಮಾಡಿರುವ ವಿಚಾರವಾಗಿ ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಕರ್ನಾಟಕ ಮಿಲ್ಕ್ ಫೆಡರೇಷನ್ (KMG) ಸಲ್ಲಿಸಿರುವ ತುಪ್ಪದ ದರ ಪ್ರಸ್ತಾವನೆಯನ್ನುತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿ(TTD)ಯು ತಿರಸ್ಕರಿಸಿರುವ ಹಿನ್ನೆಲೆ ಟ್ವೀಟ್ ಮಾಡಿರುವ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.  


"ತಿರುಪತಿಗೆ ಗುಣಮಟ್ಟದ ತುಪ್ಪ ನೀಡಲು ಕೆಎಂಎಫ್ ಸಿದ್ದ"


‘ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ನಂದಿನಿ ವಿಷಯವನ್ನು ನಾಚಿಕೆಯಿಲ್ಲದೆ ಕೆದಕಿ ರಾಜಕೀಯ ಮಾಡಿ ಅಮುಲ್‌ ದೂಷಿಸಿತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರವು ಹಾಲಿನ ದರವನ್ನು ಹೆಚ್ಚಿಸಿದೆ. ಇದರಿಂದಾಗಿ ನಂದಿನಿಯು ಟಿಟಿಡಿ ಮಂಡಳಿಗೆ ಅದರ ತುಪ್ಪವನ್ನು ಹಿಂದಿನ ಬೆಲೆಗೆ ಪೂರೈಸಲು ಸಾಧ್ಯವಾಗಲಿಲ್ಲ’ವೆಂದು ಸಿಟಿ ರವಿ ಟೀಕಿಸಿದ್ದಾರೆ.  


‘ಅಸಮರ್ಥ ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದಗಳು, ನಂದಿನಿ ಇನ್ನು ಮುಂದೆ ಪ್ರಸಿದ್ಧ ತಿರುಪತಿ ಲಡ್ಡುಗಳನ್ನು ತಯಾರಿಸಲು ತುಪ್ಪವನ್ನು ಪೂರೈಸುವುದಿಲ್ಲ. ಕಾಂಗ್ರೆಸ್ ತನ್ನ ಅಜೆಂಡಾವನ್ನು ಅನುಸರಿಸಲು ಸುವರ್ಣ ಕರ್ನಾಟಕವನ್ನು ನಾಶಮಾಡಲು ಹವಣಿಸುತ್ತಿದೆ ಎಂಬುದು ಸ್ಪಷ್ಟವಾಗಿದೆ’ ಎಂದು ಸಿಟಿ ರವಿ ಆರೋಪಿಸಿದ್ದಾರೆ.


ಇದನ್ನೂ ಓದಿ:  ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಗ್ಯಾರಂಟಿಗೆ ಭವಿಷ್ಯವೇ ಇಲ್ಲ: ಬಿಜೆಪಿ  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.