ತಿರುಪತಿ ಲಡ್ಡು ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಕೆ ಆರೋಪ! ಈ ಬಗ್ಗೆ ಸಿ.ಟಿ ರವಿ ಹೇಳಿದ್ದೇನು?

"ಇದು ನಮ್ಮ ಭಾವನೆ, ನಂಬಿಕೆ, ಶ್ರದ್ಧೆಯ ಪ್ರಶ್ನೆ. ಅದಕ್ಕೆ ಧಕ್ಕೆಯಾಗುತ್ತದೆ. ಸಮಗ್ರ ತನಿಖೆಯಾದರೆ ಭಕ್ತರ ಮನಸ್ಸಿಗೆ ಸ್ಪಷ್ಟತೆ ಬರಲಿದೆ" ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿದರು.

Written by - Bhavishya Shetty | Last Updated : Sep 19, 2024, 07:39 PM IST
    • ತಿರುಪತಿ ಎಂದರೆ ಇಡೀ ಜಗತ್ತಿನಲ್ಲೇ ವಿಶೇಷ ಸ್ಥಾನಮಾನ ಪಡೆದ ಅತಿ ಪುರಾತನ ದೇವಾಲಯ
    • ಇಲ್ಲಿನ ಪ್ರಸಾದವಾಗಿ ಸಿಗುವ ಲಡ್ಡು ವಿಶ್ವಪ್ರಖ್ಯಾತಿಯನ್ನು ಪಡೆದಿದೆ.
    • ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂಬ ಆರೋಪ
ತಿರುಪತಿ ಲಡ್ಡು ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಕೆ ಆರೋಪ! ಈ ಬಗ್ಗೆ ಸಿ.ಟಿ ರವಿ ಹೇಳಿದ್ದೇನು? title=
File Photo

ಬೆಂಗಳೂರು: ತಿರುಪತಿ ಎಂದರೆ ಇಡೀ ಜಗತ್ತಿನಲ್ಲೇ ವಿಶೇಷ ಸ್ಥಾನಮಾನ ಪಡೆದ ಅತಿ ಪುರಾತನ ದೇವಾಲಯ. ಇಲ್ಲಿನ ಪ್ರಸಾದವಾಗಿ ಸಿಗುವ ಲಡ್ಡು ವಿಶ್ವಪ್ರಖ್ಯಾತಿಯನ್ನು ಪಡೆದಿದೆ. ಆದರೆ ಇದೀಗ ಈ ಲಡ್ಡು ತಯಾರಿಸಲು ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂಬ ಆರೋಪವನ್ನು ಅಲ್ಲಿನ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಾಡಿದ್ದಾರೆ.

ಇದನ್ನೂ ಓದಿ: ಮಧುಮೇಹಿಗಳು ಈರುಳ್ಳಿಯನ್ನು ಇದರಲ್ಲಿ ನೆನೆಸಿಟ್ಟು ತಿಂದರೆ ಸಾಕು... ಬ್ಲಡ್‌ ಶುಗರ್‌ ದಿನವಿಡಿ ಹೆಚ್ಚಾಗಲ್ಲ! ಒಮ್ಮೆ ಟ್ರೈ ಮಾಡಿ

ಈ ವಿಚಾರದ ಬಗ್ಗೆ ಇದೀಗ ಮಾತನಾಡಿರುವ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅವರು, "ತಿರುಪತಿ ಕೋಟ್ಯಾಂತರ ಭಕ್ತರ ಶ್ರದ್ಧೆಯ ಧಾರ್ಮಿಕ ಸ್ಥಳ. ಸಾವಿರಾರು ವರ್ಷಗಳಿಂದ ಬಾಲಾಜಿ ಜೊತೆ ಅವಿನಾಭಾವ ಸಂಬಂಧವಿದೆ. ವಾರಕ್ಕೊಮ್ಮೆ ಬಾಲಾಜಿ ದರ್ಶನಕ್ಕೆ ಹೋಗುವವರು ಇದ್ದಾರೆ. ಅಷ್ಟೇ ಅಲ್ಲದೆ ತಿರುಪತಿ ಲಡ್ಡು ಪ್ರಸಾದಕ್ಕೆ ಇರುವ ಭಾವನೆಯೇ ಬೇರೆ. ಅದು ಕೋಟ್ಯಾಂತರ ಭಕ್ತರಿಗೆ ಕೇವಲ ಸಿಹಿ ಅಲ್ಲ ಭಕ್ತಿಯ ಪ್ರಸಾದ" ಎಂದರು.

"ಇಂತಹ ಪ್ರಸಾದ ತಯಾರಿಸುವಾಗ ಧಾರ್ಮಿಕ ಸ್ಯಾಂಟಿಟಿ ಕಾಪಾಡಿಕೊಳ್ಳಬೇಕು. ಕರ್ನಾಟಕದಿಂದಲೇ ನಂದಿನಿ ತುಪ್ಪ ಅಲ್ಲಿಗೆ ಸರಬರಾಜಾಗುವುದನ್ನ ಕೇಳಿದ್ದೇನೆ. ಆದರೆ ಇದೀಗ ಪ್ರಸಾದಕ್ಕೆ ಪ್ರಾಣಿಯ ಕೊಬ್ಬು ಬಳಕೆ ಮಾಡಲಾಗುತ್ತಿದೆ ಎಂಬ ಮಾತು ಆಶ್ಚರ್ಯ ಮತ್ತು ಆಘಾತ ಎರಡನ್ನೂ ಉಂಟುಮಾಡಿದೆ. ಧಾರ್ಮಿಕ ಶ್ರದ್ಧಾ ಕೇಂದ್ರದಲ್ಲಿ ಈ ರೀತಿ ಮಾಡುವ ಯೋಚನೆಯಾದರೂ ಯಾರಿಗೆ ಬರುತ್ತೆ? ಯಾರಿಗೆ ಗುತ್ತಿಗೆ ನೀಡಿದ್ದರು? ಎಲ್ಲವನ್ನು ಗಂಭೀರವಾಗಿ ತನಿಖೆ ನಡೆಸಬೇಕು" ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವರ್ಷದಲ್ಲಿ ಒಂದೇ ಬಾರಿ ಬೆಳೆಯುವ ಈ ಸೊಪ್ಪು ಸಿಕ್ಕರೆ ಬಿಡಲೇಬೇಡಿ... ಇದನ್ನು ಸೇವಿಸಿದರೆ ಕಣ್ಣು ಎಷ್ಟೇ ಮಂಜಾಗುತ್ತಿದ್ದರೂ ಶಾರ್ಪ್‌ ಆಗುತ್ತೆ! ಕನ್ನಡಕದ ಅವಶ್ಯಕತೆಯೇ ಇರಲ್ಲ

"ಇದು ನಮ್ಮ ಭಾವನೆ, ನಂಬಿಕೆ, ಶ್ರದ್ಧೆಯ ಪ್ರಶ್ನೆ. ಅದಕ್ಕೆ ಧಕ್ಕೆಯಾಗುತ್ತದೆ. ಸಮಗ್ರ ತನಿಖೆಯಾದರೆ ಭಕ್ತರ ಮನಸ್ಸಿಗೆ ಸ್ಪಷ್ಟತೆ ಬರಲಿದೆ" ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News