ಬೆಂಗಳೂರು: ಉಕ್ರೇನ್ ನಲ್ಲಿ ಕನ್ನಡಿಗ ನವೀನ್ ಸಾವಿನ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧಕ್ಷ ಡಿಕೆ.ಶಿವಕುಮಾರ್ ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆಶಿ (DK shivakumar) "ಪ್ರಧಾನಿ ಮೋದಿ ಅವರನ್ನು ವಿಶ್ವಗುರು ಎನ್ನುತ್ತಾರೆ, ಆದರೆ ನಮ್ಮ ದೇಶದ ವಿದೇಶಾಂಗ ನೀತಿಯು ಹಳಿ ತಪ್ಪಿದೆ, ನಮ್ಮಲ್ಲಿ ವೈದ್ಯಕೀಯ ಸೀಟುಗಳ ಕೊರತೆ ಇದೆ,ಹಾಗಾಗಿ ನಮ್ಮ ದೇಶದಿಂದ ವಿದೇಶಕ್ಕೆ ಓದಲು ಹೋಗಿದ್ದಾರೆ"ಎಂದು ಅವರು ಹೇಳಿದರು.


ಇದನ್ನೂ ಓದಿ: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಂಖದಿಂದಲೇ ತೀರ್ಥ ಬರಬೇಕೇ?: ಡಿಕೆಶಿ


"ಶಿಕ್ಷಣ ಪಡೆಯಲು ವಿದೇಶಕ್ಕೆ ಹೋಗಿರುವ ವಿದ್ಯಾರ್ಥಿಗಳಿಗೆ ರಕ್ಷಣೆ ಕೊಟ್ಟು ಕರೆ ತರುವ ಕೆಲಸ ಸರ್ಕಾರದ್ದು ಉಳಿದ ವಿದ್ಯಾರ್ಥಿಗಳನ್ನ ದೇಶಕ್ಕೆ ಕರೆ ತರಬೇಕು.ಈಗ ಸಾವನ್ನಪ್ಪಿರುವ ನವೀನ್ ಅವರು ಸಿಎಂ ಜಿಲ್ಲೆಯವರು, ಅದಕ್ಕಿಂತ ಹೆಚ್ಚಾಗಿ ಅವರು ನಮ್ಮ ಕನ್ನಡಿಗರು ಹಾಗಾಗಿ ಅವರು ಮೊದಲು ಸಾಂತ್ವಾನ ಹೇಳುವ ಕೆಲಸವನ್ನು ಮಾಡಬೇಕು, ಇನ್ನೂ ಉಕ್ರೇನ್ ನಲ್ಲಿರುವ ಎಲ್ಲಾ ಕನ್ನಡಿಗ ವಿದ್ಯಾರ್ಥಿಗಳು ಧೈರ್ಯದಿಂದ ಇರಬೇಕು" ಎಂದು ಡಿಕೆಶಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.