D Roopa Vs Rohini Sindhuri: ಡಿಕೆ ರವಿ ಹೆಸರು ಉಲ್ಲೇಖಿಸಿ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಆರೋಪಗಳ ಸುರಿಮಳೆ

IAS vs IPS Fight: ಐಎಸ್ ಅಧಿಕಾರಿ ರೋಹಿಣಿ ವಿರುದ್ಧ ಕರ್ತವ್ಯ ಲೋಪದ ಬಗ್ಗೆ ಡಿ.ರೂಪಾ ಆರೋಪ ಮಾಡಿದ್ದಾರೆ. ಕರ್ತವ್ಯ ಲೋಪ, ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ದಾಖಲೆಯಿದೆ ಎಂದಿರುವ ಡಿ.ರೂಪಾ 19 ಆರೋಪಗಳ ಪಟ್ಟಿಯನ್ನು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.   

Written by - Puttaraj K Alur | Last Updated : Feb 19, 2023, 01:08 PM IST
  • ಕರ್ನಾಟಕದಲ್ಲಿ ಮಹಿಳಾ ಐಎಎಸ್​​-ಐಪಿಎಸ್​​​ ನಡುವೆ ವಾರ್​​​​ ಶುರುವಾಗಿದೆ
  • IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ IPS​​ ಡಿ.ರೂಪಾರಿಂದ 19 ಆರೋಪ
  • ಸಾ.ರಾ.ಮಹೇಶ್​ ಜೊತೆ ಸಂಧಾನಯತ್ನ ವಿಚಾರ ಬಹಿರಂಗ ಬೆನ್ನಲ್ಲೇ ಸಿಂಧೂರಿ ವಿರುದ್ಧ ಹೊಸ ಬಾಂಬ್​
D Roopa Vs Rohini Sindhuri: ಡಿಕೆ ರವಿ ಹೆಸರು ಉಲ್ಲೇಖಿಸಿ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಆರೋಪಗಳ ಸುರಿಮಳೆ   title=
ಮಹಿಳಾ ಐಎಎಸ್​​-ಐಪಿಎಸ್​​​ ನಡುವೆ ವಾರ್​​​​!

ಬೆಂಗಳೂರು: ಸಾ.ರಾ.ಮಹೇಶ್​ ಜೊತೆಗೆ ಸಂಧಾನ ಯತ್ನ ವಿಚಾರ ಬಹಿರಂಗವಾದ ಬೆನ್ನಲ್ಲೇ ಐಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ​​ ಡಿ.ರೂಪಾ ಆರೋಪಗಳ ಸುರಿಮಳೆಯನ್ನೇ ಮಾಡಿದ್ದಾರೆ. ಡಿ.ಕೆ.ರವಿ ಹೆಸರು ಉಲ್ಲೇಖಿಸಿರುವ ಡಿ.ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳ ಪಟ್ಟಿ ಬಿಡುಗಡೆ ಮಾಡಿ ಹೊಸ ಬಾಂಬ್ ಸಿಡಿಸಿದ್ದಾರೆ.    

ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಆರೋಪವೇನು?

ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಡಿ.ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಅವರ ಪೋಸ್ಟ್‍ನಲ್ಲಿ ಏನಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

‘ಇಂದಿನ ಸುದ್ದಿ ಎಲ್ಲಾ ಕಡೆ viral ಆಗಿರೋದು. ರೋಹಿಣಿ ಸಿಂಧೂರಿ, ಸಾರ ಮಹೇಶ್ ಮತ್ತು ಎಂಎಲ್ಎ ಅವರ ಬಳಿ ಸಂಧಾನಕ್ಕೆ ಹೋಗಿದ್ದರು ಅಂತಾ. ಸಂಧಾನಕ್ಕೆ ಹೋಗುವುದು ಅಂದರೆ ಅರ್ಥ ಏನು? ಯಾವ ಐಎಎಸ್ ಅಧಿಕಾರಿ ಕೂಡ ಎಂಎಲ್ಎ ಅಥವಾ ರಾಜಕೀಯ ವ್ಯಕ್ತಿಗಳ ಜೊತೆ ತಾವು ನಿರ್ವಹಿಸಿದ ಕರ್ತವ್ಯ ನಿಮಿತ್ಯ ಸಂಧಾನಕ್ಕೆ ಹೋಗಿದ್ದು ನಾನು ಇದೇ ಮೊದಲು ಕೇಳಿದ್ದು.  ಹಾಗಾದರೆ ರೋಹಿಣಿ ಸಿಂಧೂರಿ ಐಎಎಸ್ ಸಂಧಾನಕ್ಕೆ ಹೋಗಿದ್ದು ಯಾಕೆ? ಆಕೆ ಏನನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ? ತಮ್ಮ ಕರ್ತವ್ಯ ಲೋಪದ ಬಗ್ಗೆಯೋ? ಅಥವಾ ತಮ್ಮ ಭ್ರಷ್ಟಾಚಾರ ಬಗ್ಗೆಯೋ ಏನು?

ಇದನ್ನೂ ಓದಿ: Shiva Temple: ಧರ್ಮ ಮೀರಿ ಶಿವ ದೇವಾಲಯ ನಿರ್ಮಿಸಿದ ಕ್ರಿಶ್ಚಿಯನ್ ಅಧಿಕಾರಿ!

1) ಡಿಕೆ Ravi ias ಸಂಭಾವಿತ ವ್ಯಕ್ತಿ. ಸಿಬಿಐ ರಿಪೋರ್ಟ್ ನಲ್ಲಿ ಅವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ limit cross ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.

2) ಮುಂದೆ ಸಿಇಒ ಮಂಡ್ಯ ಆದಾಗ ಈಕೆ ಕಟ್ಟಿಸಿದ toilets ಗಿಂತ ಹೆಚ್ಚು ತೋರಿಸಿ figures fudge ಮಾಡಿ ಕೇಂದ್ರ ಸರ್ಕಾರದ ಪ್ರಶಸ್ತಿ ತೆಗೆದುಕೊಂಡರು ಎಂಬ ಆರೋಪ ಕೇಳಿ ಬಂತು. ಅದರ ಬಗ್ಗೆಯೂ ತನಿಖೆಯೇ ಆಗಲಿಲ್ಲ.

3) ಚಾಮರಾಜನಗರದಲ್ಲಿ 24 ಜನರು Oxygen ಇಲ್ಲದೇ ಸತ್ತಾಗ ಆಪಾದನೆಗಳು ಇವರ ಮೇಲೇ ನೇರವಾಗಿ ಬಂತು. ಅದರಿಂದ ಹೇಗೋ ಪಾರಾದರು.

4) ಕನ್ನಡದ ಹುಡುಗಿ ಶಿಲ್ಪಾ ನಾಗ್ ಐಎಎಸ್ ಅವರ ಜೊತೆ ಜಗಳ-ರಂಪ ಏತಕ್ಕಾಗಿ? ಅಲ್ಲಿ ಯಾವುದೇ ಮೌಲ್ಯಾಧಾರಿತ ವಸ್ತು ವಿಷಯ ಇರಲಿಲ್ಲ. ಕೇವಲ ಕೋಳಿ ಜಗಳ. ಶಿಲ್ಪಾಗೆ ಹೆಚ್ಚು ಕೆಲಸ ಮಾಡಿದ್ದು, ಹೆಚ್ಚು ಅವರ ಬಗ್ಗೆ ಪಾಸಿಟಿವ್ ಆಗಿ ಬರೆಯಲಾಯಿತು. ಅದನ್ನು ಸಹಿಸಿಕೊಳ್ಳಲಾಗದೆ ಶಿಲ್ಪಾಗೆ harrassment ಮಾಡಿದರು ಎಂದು ಕೆಲವರು ಹೇಳಿದರು. ಕಡೆಗೆ ಮೈಸೂರಲ್ಲಿ ಗೌಡ journalists ಶಿಲ್ಪಾ ನಾಗ್ ಅವರಿಗೆ ಜಾತಿ ಬೆಂಬಲ ನೀಡುತ್ತಿದ್ದಾರೆಂಬ ಮಟ್ಟಿಗೆ ಸ್ವತಃ ಇಲ್ಲದ ಜಾತೀಯತೆ ಮೈಸೂರಿನ ಜರ್ನಲಿಸ್ಟ್ಸ್ ಗಳಲ್ಲಿ ಬಿತ್ತಿದರು ಈಕೆ ಎಂದು ಅನೇಕರು ಹೇಳುತ್ತಾರೆ.

5) ಹರ್ಷ ಗುಪ್ತ ಐಎಎಸ್. ಅತ್ಯಂತ ಪ್ರಾಮಾಣಿಕ ಅಧಿಕಾರಿ. ಅವರ ಜೊತೆ ಜಗಳ. ಎಲ್ಲಾ ಐಎಎಸ್ ಅಧಿಕಾರಿಗಳಿಗೆ ಈ ವಿಷಯ ಗೊತ್ತಿದೆ.

6) ಮಣಿವಣ್ಣನ್ ಐಎಎಸ್ ಜೊತೆ ಲೇಬರ್/ ಕಾರ್ಮಿಕ ಇಲಾಖೆಯಲ್ಲಿ ಇದ್ದಾಗ ಜಗಳ ಮಾಡಿದ್ದು ಜಗಜನಿತ. ಮಣಿವಣ್ಣನ್ ಒಂದು ರೀತಿ ಅಜಾತಶತ್ರು. ಅಂಥದರಲ್ಲಿ...ಅವರ ಜೊತೆ ಜಗಳ.

7) ಡಿಕೆ ರವಿ ತೀರಿದ ಕೆಲ ತಿಂಗಳು ಮುಂಚೆ ಕನ್ನಡದ ಹುಡುಗ N ಹರೀಶ್ ಐಪಿಎಸ್ ಈಕೆಯ batchmate. ಮದ್ವೆ ಆಗಿರಲಿಲ್ಲ, ಆತ ಈಕೆಗೆ ಕಾದು ಕಾದು ಆತ ಆತ್ಮಹತ್ಯೆ ಮಾಡಿಕೊಂಡದ್ದು ಎಂದು ಹಲವರು ಹೇಳಿದರೂ, ನಾನು ಅದನ್ನು ನಂಬಲಿಲ್ಲ, ಈಗೂ ನಂಬಿಲ್ಲ.

8) ಸಾರಾ Mahesh ಮತ್ತು ಎಂಎಲ್ಎ ಅವರ ಮೇಲೆ ಅನೇಕ ಆಪಾದನೆಗಳನ್ನು ಮಾಡಿದ ಈಕೆ ಒಂದನೂ prove ಮಾಡಲಿಲ್ಲ. ಅದಕ್ಕೇ ಸಂಧಾನಕ್ಕೆ ಹೋದರಾ?

9) ಮೈಸೂರು ಸಂಸದ ಪ್ರತಾಪ್ ಸಿಂಹ ಮೇಲೆ ಕೂಡ ಅನೇಕರ ಬಳಿ ಈಕೆ prove ಮಾಡಲಾರದ allegations ಮಾಡಿದರು. ಅಂದರೆ ಪ್ರತಾಪ್ ಸಿಂಹ ಅವರು private clinicsಗೆ Oxygen ಕೇಳುತ್ತಾ ತಮ್ಮ ಸ್ವಂತ ಲಾಭಕ್ಕೆ ನಿಂತಿದ್ದಾರೆಂಬ ನಿರಾಧಾರ ಆರೋಪ ಮಾಡಿದರು. ನಿಜ ಇದ್ದಿದ್ದೇ ಆದರೆ ಅದನ್ನು prove ಯಾಕೆ ಮಾಡಲಿಲ್ಲ?

10) ಹಾಸನದಲ್ಲಿ ತನ್ನನ್ನು 1 ವರ್ಷದೊಳಗೆ ಎತ್ತಂಗಡಿ ಮಾಡಿದ ಸರ್ಕಾರದ ವಿರುದ್ಧ CAT(Central administrative tribunal) ಇಲ್ಲಿ ದಾವೆ ಹೂಡಿದರು. ಆ ದಾವೆಗೆ application ಬರೆದು ಕೊಟ್ಟಿದ್ದೇ ನನ್ನ ಪತಿ, Munish moudgil ias. ನನ್ನೆದುರಿಗೆ ಬರೆದು ಬರೆದು ಆಕೆಗೆ, ಆಕೆಯ ತಂದೆಗೆ ಮತ್ತು ಲಾಯರ್ ಗೆ ಕಳಿಸಿದ್ದರು.

ಆದರೆ ಈಕೆ ಮೈಸೂರು ಡಿಸಿ ಆಗಿ ಹೋದದ್ದು ಹೇಗೆ? ತನಗಿಂತ ಕೇವಲ 29 ದಿನ ಮುಂಚೆ  ಮೈಸೂರಿಗೆ ಡಿಸಿ ಎಂದು transfer ಆಗಿದ್ದ ಕನ್ನಡ ಹುಡುಗ ಶರತ್ ಅವರನ್ನು ಒಕ್ಕಲೆಬ್ಬಿಸಿದ್ದು ನ್ಯಾಯವೇ? ತನ್ನಂತೆ ಪರರೆಂಬ ಭಾವನೆ ಇಲ್ಲವೇಕೆ? 29 ದಿನದಲ್ಲಿ ಯಾವುದೇ ಕಳಂಕ-ಆರೋಪ ಇಲ್ಲದ ಶರತ್ ರನ್ನು replace ಮಾಡಿದ್ದು ಈಕೆ ಯಾವ high level influenceನಿಂದಾ?

11) Dr Ravishankar IAS ಈಕೆಯ ಮೇಲೆ ಪ್ರಿಲಿಮಿನರಿ inquiry ಯಲ್ಲಿ ತಪ್ಪುಮಾಡಿರುವುದು ಸಾಬೀತಾಗಿದೆ. ಮೈಸೂರಿನ ಡಿಸಿ ಮನೆ, ಹೆರಿಟೇಜ್ building ಅಂತಾ ಇದ್ದರೂ ಅಲ್ಲಿ ಟೈಲ್ಸ್ ಹಾಕಿದ್ದು, ಸ್ವಿಮ್ಮಿಂಗ್ ಪೂಲ್ ಮಾಡಿದ್ದು. ಮನುಷ್ಯತ್ವ ಇರೋರು covid ಸಮಯದಲ್ಲಿ ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ?

John was fiddling when Rome was burning ಅಂದ ಹಾಗೆ. Marie Antoinette ಎಂಬ ರಾಣಿ ಜನರು bread ಇಲ್ಲದೆ ಸಾಯ್ತಿದ್ದಾರೆ ಅಂತಾ ಕೇಳಿಸಿಕೊಂಡಾಗ, bread ಇಲ್ಲದಿದ್ದರೆ ಏನು, ಜನರು cake ತಿನ್ನಲಿ ಅಂದಳಂತೆ. ಆ ರಾಣಿಯ ನೆನಪಾಯ್ತು.

12) ಹಿಂದೆ ನನಗೆ ಒಬ್ಬರು whatsapp ಮೆಸೇಜ್ ಮಾಡಿ ತಾವು ಇವರ ಪರವಾಗಿ ನಡೆಸುವ social media handling agency ಒಂದರಲ್ಲಿ ಕೆಲಸ ಮಾಡಿದ್ದು, ಈಗ ಆ ಕೆಲಸ ಬಿಟ್ಟಿದ್ದೇನೆಂದು ಹೇಳುತ್ತಾ ಹೇಗೆ ಅಲ್ಲಿ  ಈಕೆಯ ಪರವಾಗಿ ಸುದ್ದಿ, photos ಮತ್ತು videos create ಮಾಡುತ್ತಾರೆ, ಹೇಗೆ ಈಕೆಯ ವಿರುದ್ಧ ಇರುವವರ ಟ್ರೋಲ್ ಮಾಡುವ content ಹಾಗೂ ಹ್ಯಾಂಡಲ್ ಗಳು ತಯಾರಾಗುತ್ತವೆ ಎಂಬುದು ಹೇಳಿದ್ದರು. ನಾನು ಅದನ್ನು ಫೇಸ್ಬುಕ್ ನಲ್ಲಿಯೂ ಹಾಕಿದ್ದೆ.

13) ಈಕೆಯ ಮೇಲೆ ಅಗ್ಗದ ಬ್ಯಾಗ್ ಗಳನ್ನೂ ಅತಿಹೆಚ್ಚು ಬೆಲೆಗೆ ಮಾರಾಟ ಮಾಡಿರುವ ಕಂಪ್ಲೈಂಟ್ ಲೋಕಾಯುಕ್ತದಲ್ಲಿ register ಆಗಿದ್ದು, ಅದರ ತನಿಖೆ ಕೈಗೆತ್ತಿಕೊಳ್ಳಲು ಲೋಕಾಯುಕ್ತ ಈಗಾಗಲೇ ಸರ್ಕಾರಕ್ಕೆ ಬರೆದಿದ್ದರೂ ಸರ್ಕಾರ ಮಟ್ಟದಲ್ಲಿ ಕಾರಣ ಕೊಡದೆ ಆಕೆಯನ್ನು ತನಿಖೆಗೊಳಪಡಿಸಲು ಅನುಮತಿ reject/ ನಿರಾಕರಣೆ ಮಾಡಲಾಗಿದೆ. ಅದರ copy ನನ್ನ ಬಳಿ ಇದೆ. ಸಾಮಾನ್ಯವಾಗಿ ಅಧಿಕಾರಿಗಳಿಗೆ ಈ ರೀತಿಯ support ಇರುತ್ತದೆಯೇ?

14) ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ ಒಂದಲ್ಲ, ಎರಡಲ್ಲ ಅನೇಕರಿಗೆ ತನ್ನ not so decent ಚಿತ್ರಗಳನ್ನು ಕಳಿಸಿರುವ ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಪಿಕ್ಸ್ ಗಳು ನನಗೆ ಸಿಕ್ಕಿವೆ. ಇದು private vishaya ಆಗುವುದಿಲ್ಲ. All India service conduct rules ಪ್ರಕಾರ ಹಿರಿಯ ಅಧಿಕಾರಿಗಳು ಈ ರೀತಿಯ ಪಿಕ್ಸ್ , ಸಂಭಾಷಣೆ ಮಾಡುವುದು ಅಪರಾಧ. ಈ ಆಪಾದನೆಗಳನ್ನು ಸರ್ಕಾರ ತನಿಖೆ ಮಾಡುವುದೇ, ನೋಡಬೇಕಿದೆ. ಏಕೆಂದರೆ ಸತ್ಯಾ ಸತ್ಯತೆ ಹೊರ ಬರಬೇಕಿದೆ.

15) ಮೊನ್ನೆ ಇವರ ಭಾವ ಮಧುಸೂಧನ್ ರೆಡ್ಡಿ ಅವರು, lucky Ali ಎಂಬ ಗಾಯಕರ ಜಾಗಕ್ಕೆ 20-30 ಜನ ಕರೆದುಕೊಂಡು ಹೋಗಿ ರೌಡಿಸಂ ಮಾಡಿರುವ ವಿಷಯ ಮಾಧ್ಯಮಗಳಲ್ಲಿ ಬಂತು. ಈಕೆಯು ತನ್ನ ಐಎಎಸ್ ಪ್ರಭಾವ ಬಳಸಿ ದುರುಪಯೋಗ ಮಾಡಿಕೊಂಡು ಇರುವುದಾಗಿ lucky Ali ಆರೋಪ ಮಾಡಿದರು. ವ್ಯಾಜ್ಯದ ಜಮೀನಿಗೆ 20-30 ಜನ ಕರೆದುಕೊಂಡು ಹೋಗಿ ಕಾನೂನು ಕೈಗೆ ತೆಗೆದುಕೊಳ್ಳಬಹುದಾ? ಈ ರೀತಿಯ ಭಂಡ ಧೈರ್ಯ ಎಲ್ಲಿಂದ ಬರುತ್ತದೆ? ಐಎಎಸ್ ಅಧಿಕಾರದಿಂದ?

16) ಇವರ ಗಂಡ ಹಾಗೂ ಇವರ ಮಾವನವರು (ಈಗ ತೀರಿ ಹೋಗಿದ್ದಾರಂತೆ) real estate ಬ್ಯುಸಿನೆಸ್ ನಡೆಸುತ್ತಾರೆ. ಅನೇಕ ಬಾರಿ ಸರ್ವೇ ಹಾಗೂ ಭೂದಾಖಲೆ ಕಚೇರಿಯ ಮೂಲಕ ತನ್ನ family businessಗೆ ಅಗತ್ಯವಿರುವ ಅನೇಕ land related ಮಾಹಿತಿ, ಅಂದರೆ ಒಂದು ಭೂಮಿಯ ಫೋಡಿ, ಇನ್ನೊಂದರ ಬಗ್ಗೆ ಅದು ವ್ಯಾಜ್ಯ ಇರುವ ಭೂಮಿಯೇ ಅಥವಾ ಖರೀದಿಸಲು ಯೋಗ್ಯವೇ ಎಂಬಂತಹ ಮಾಹಿತಿಗಳನ್ನು ತಮ್ಮ ಐಎಎಸ್ ಸ್ಥಾನ ಅಧಿಕಾರದಿಂದ ಪಡೆದುಕೊಂಡಿರುವ ಮಾಹಿತಿ ದಾಖಲೆ ಸಮೇತ ಇದ್ದು, ಇದರ ಮೇಲೆ ಕ್ರಮ ಆಗುತ್ತದೆಯೇ? ನೋಡಬೇಕು.

17) ಅನೇಕ ಬಾರಿ ಸರ್ಕಾರ ಅಧಿಕಾರಿಗಳನ್ನು transfer ಮಾಡಿದಾಗ ಆ ಜಾಗದಲ್ಲಿ ಇದ್ದವರು ಕ್ಯಾಟ್/ಕೋರ್ಟ್ ಗೆ ಹೋಗುವುದು ಸಹಜ. ನಾನು 3 ವರ್ಷ ದೂರದ ಯಾದಗಿರಿಯಲ್ಲಿ ಕೆಲಸ ಮಾಡಿ(senior most sp in the state, 2013ರಲ್ಲಿ) ಬೆಂಗಳೂರಿಗೆ ನನಗೆ ವರ್ಗವಾದಾಗ ಆ ಜಾಗದಲ್ಲಿದ್ದ ಅಧಿಕಾರಿ ಪವಾರ್ ನನ್ನ ವರ್ಗಾವಣೆ ಪ್ರಶ್ನಿಸಿ ಕ್ಯಾಟ್ ಗೆ ಹೋದರು. ಆದರೆ ರೋಹಿಣಿ ಸಿಂಧೂರಿಗೆ ಸಾಕ್ಷಾತ್ ಅಡ್ವೊಕೇಟ್ ಜನರಲ್ ಅವರೇ ಬಂದು ವಾದ ಮಾಡಿದರಲ್ಲ. ಮೈಸೂರು ಡಿಸಿ ವರ್ಗಾವಣೆ ವಿಷಯದಲ್ಲಿ ಆ ಸೌಲಭ್ಯ ನನಗೇಕೆ ಸಿಗಲಿಲ್ಲ? ನನ್ನಂತಹ ಕನ್ನಡಿಗ ಅಧಿಕಾರಿಗಳನ್ನು ಹೇಗೆ ನಡೆಸಿಕೊಂಡರೂ ಸುಮ್ಮನೆ ಇರ್ತಾರೆ ಅಂತಲೇ? ಸ್ವತಃ ಅಡ್ವೊಕೇಟ್ ಜನರಲ್ ಹಾಜರಾಗಿ ವಾದ ಮಾಡಿದ್ದು ಈಕೆಗಲ್ಲದೆ ಮತ್ಯಾವ ಅಧಿಕಾರಿಗೂ ಈ ಸೌಲಭ್ಯ ಸಿಕ್ಕಿಲ್ಲ. ಯಾಕೆ ಈ ಮಲತಾಯಿ ಧೋರಣೆ?

18) ಈಕೆ ಪ್ರೊಬೇಷನರಿ ಅಂತಾ ಇದ್ದಾಗ ಅಲ್ಲಿಯ ಡಿಸಿ ಹಾಗೂ ಅವರ ಪತ್ನಿ ನೆರೆಯ ಜಿಲ್ಲೆಯ ಡಿಸಿ. ಇವರಿಬ್ಬರ ಸಂಸಾರದಲ್ಲಿ ಹುಳಿ ಬಿದ್ದು ಅವರು ಬೇರ್ಪಟ್ಟಿದ್ದಾರೀಗ ಹಾಗೂ ಇದು ಈಕೆಯ ದೆಸೆಯಿಂದ ಎಂಬ ಮಾತು ಅನೇಕರ ಬಾಯಲ್ಲಿ ಕೇಳಿದ್ದೇನೆ.

19) ಜಾಲಹಳ್ಳಿ ಯಲ್ಲಿ ಈಕೆಯ(ಪತಿಯದ್ದು ಇದ್ದರೂ ಈಕೆಯದೂ ಆಗುತ್ತದೆ) ದೊಡ್ಡ ಮನೆ ಒಂದು ಕಟ್ಟುತ್ತಿದ್ದು, ಐಎಎಸ್ ಅಧಿಕಾರಿ ಸಲ್ಲಿಸಬೇಕಾದ immovable property returnsನಲ್ಲಿ ಈ ಮನೆಯ ಉಲ್ಲೇಖ ಇರದೆ, ಬೇರೆಲ್ಲಾ ಲಂಗು ಲೊಟ್ಟು property ಬಗ್ಗೆ ವರದಿ ಕೊಟ್ಟಿದ್ದಾರೆ. ಆ ಮನೆಗೆ ಕೋಟಿಗಟ್ಟಲೆ ಇಟಲಿ ಫರ್ನೀಚರ್, 26 ಲಕ್ಷದ ಜರ್ಮನ್ appliances (ಅದನ್ನು duty free ಮಾಡಿಸಿಕೊಳ್ಳುವ ಬಗ್ಗೆ ಚರ್ಚೆ ಇರುವ, 6 lakhs ಕೇವಲ ಬಾಗಿಲಿನ hingesಗೆ ಖರ್ಚ್ ಮಾಡಿರುವ ಬಗ್ಗೆ ಈಕೆ ಮಾಡಿರುವ ಚಾಟ್ ಗಳ ಮಾಹಿತಿ ಸರ್ಕಾರಕ್ಕೆ ಸಿಕ್ಕಿದೆ) ಇದರ ಮೇಲೆ ಕೂಲಂಕುಷ ತನಿಖೆ ಆಗುವುದೇ ನೋಡಬೇಕಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸರ್ಕಾರದಲ್ಲಿ ಭಯೋತ್ಪಾದನೆ, ದಂಗೆ, ಹಿಂಸಾಚಾರ ಶೇ.80ರಷ್ಟು ಇಳಿಕೆ: ಅಮಿತ್ ಶಾ

ಇಷ್ಟೆಲ್ಲಾ ಆದರೂ ಯಾರು ಪ್ರತಿಬಾರಿ ಈಕೆಯನ್ನು ತನಿಖೆಗೂ ಒಳಪಡಿಸದೇ ಬಚಾವ್ ಮಾಡುತ್ತಿರುವುದು. ಈಕೆ ಕೆಮ್ಮಿದ್ದೂ ಕ್ಯಾಕರಿಸಿದ್ದೂ ತಮ್ಮ TRPಗೋಸ್ಕರ ಹಾಕುವ ಮೀಡಿಯಾಗಳೇ ಈಕೆಯನ್ನು ಹೀರೋ/ ಹೀರೋಯಿನ್ ಮಾಡುವ ಮೂಲಕ ಈಕೆ ಯಾವುದೇ ಶಿಕ್ಷೆಯಿಲ್ಲದೆ ಪ್ರತಿಬಾರಿ ಬಚಾವ್ ಆಗಿರುವುದೇ? ಅಥವಾ ಕಿಂದರಿ ಜೋಗಿ ಮಾಡಿದ ರೀತಿಯಲ್ಲಿ ಸರ್ಕಾರದಲ್ಲಿರುವ ಪ್ರಭಾವಿಗಳು ಕಿಂದರಿ ಜೋಗಿಯ ಪಾಶಕ್ಕೆ ಸಿಲುಕಿದರೆ? ಎಂದು ಡಿ.ರೂಪಾ ಅವರು ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News