Dakshina Kannada Lok Sabha Election Result: ಬಿಜೆಪಿ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಮತ್ತೆ ಅರಳಿದ ಕಮಲ: ಕ್ಯಾ.ಬ್ರಿಜೇಶ್ ಚೌಟಗೆ ಭರ್ಜರಿ ಗೆಲುವು

Dakshina Kannada Loksabha Constituency Election Result 2023: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈ ಹಿಂದೆ ಇದ್ದ ಹೆಸರು ಮಂಗಳೂರು ಲೋಕಸಭಾ ಕ್ಷೇತ್ರ. 2008ರಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಭೂಭಾಗಗಳನ್ನು ಒಳಗೊಂಡ ಈ ಹೊಸ ಕ್ಷೇತ್ರ ಅಸ್ತಿತ್ವಕ್ಕೆ ಬಂದಿತ್ತು. ಈ ಕ್ಷೇತ್ರದಲ್ಲಿ ಪಾರುಪತ್ಯ ಇರೋದು ಬಿಜೆಪಿಯದ್ದೇ.

Written by - Bhavishya Shetty | Last Updated : Jun 4, 2024, 04:49 PM IST
    • ಬಿಜೆಪಿ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ದಕ್ಷಿಣ ಕನ್ನಡ
    • ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟಗೆ ಭರ್ಜರಿ ಗೆಲುವು
    • 1,49,208 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು
Dakshina Kannada Lok Sabha Election Result: ಬಿಜೆಪಿ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಮತ್ತೆ ಅರಳಿದ ಕಮಲ: ಕ್ಯಾ.ಬ್ರಿಜೇಶ್ ಚೌಟಗೆ ಭರ್ಜರಿ ಗೆಲುವು title=
Brijesh Chowta

Dakshina Kannada Loksabha Constituency Election Result 2023: ಬಿಜೆಪಿ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದಾರೆ. 7,64,132 ಮತಗಳನ್ನು ಪಡೆದ ಚೌಟ ಜಯ ಕಂಡಿದ್ದರೆ, 6,14,924 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್.ಆರ್ ಪೂಜಾರಿ ಸೋಲು ಅನುಭವಿಸಿದ್ದಾರೆ. ಒಟ್ಟಾರೆಯಾಗಿ 1,49,208 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಕಂಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಪರಿಶ್ರಮ, ಜನರ ಆಶೀರ್ವಾದದಿಂದ ಗೆದ್ದಿದ್ದೇವೆ: ಎಚ್‌ಡಿ‌ಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈ ಹಿಂದೆ ಇದ್ದ ಹೆಸರು ಮಂಗಳೂರು ಲೋಕಸಭಾ ಕ್ಷೇತ್ರ. 2008ರಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಭೂಭಾಗಗಳನ್ನು ಒಳಗೊಂಡ ಈ ಹೊಸ ಕ್ಷೇತ್ರ ಅಸ್ತಿತ್ವಕ್ಕೆ ಬಂದಿತ್ತು. ಈ ಕ್ಷೇತ್ರದಲ್ಲಿ ಪಾರುಪತ್ಯ ಇರೋದು ಬಿಜೆಪಿಯದ್ದೇ. ಇಲ್ಲಿ ಬಿಜೆಪಿಯ ಗೆಲುವಿನ ಓಟಕ್ಕೆ ತಡೆ ಬಿದ್ದೇ ಇಲ್ಲ. ಇದೀಗ ಮತ್ತೆ ಬಿಜೆಪಿ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಕಮಲ ಅರಳಿದೆ.

ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಿಜೆಪಿಯ ಅತ್ಯಂತ ಭದ್ರ ಲೋಕಸಭೆ ಕ್ಷೇತ್ರವೆಂದೇ ಕರೆಯಲಾಗುತ್ತದೆ. ಈ ಹಿಂದೆ ಮಂಗಳೂರು ಆಗಿದ್ದಾಗಲೂ, ಈಗ ದಕ್ಷಿಣ ಕನ್ನಡ ಆಗಿರುವಾಗಲೂ ಬಿಜೆಪಿಗೆ ಇಲ್ಲಿ ಸೋಲಿಲ್ಲ. ಸತತ ಗೆಲುವಿನ ನಗೆ ಬೀರುತ್ತಾ ಬಂದಿದೆ.

1957ರಿಂದ 1989ರವರೆಗೆ ಈ ಕ್ಷೇತ್ರ ಕಾಂಗ್ರೆಸ್ ಕೈಯಲ್ಲಿತ್ತು. ಅದರಲ್ಲೂ ಸತತ ನಾಲ್ಕು ಚುನಾವಣೆಗಳಲ್ಲಿ ಗೆದ್ದಿದ್ದ ಬಿ. ಜನಾರ್ಧನ ಪೂಜಾರಿ ಈ ಕ್ಷೇತ್ರವನ್ನು ತಮ್ಮ ಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿದ್ದರು. ಆದರೆ ಜನಾರ್ಧನ ಪೂಜಾರಿಗೆ 1991ರ ಲೋಕಸಭೆ ಚುನಾವಣೆಯಲ್ಲಿ ಸೋಲು ಉಣಿಸಿದವರು ಬಿಜೆಪಿಯ ವಿ. ಧನಂಜಯ ಕುಮಾರ್. ಈ ಮೂಲಕ ಇಲ್ಲಿ ಮೊದಲ ಬಾರಿಗೆ ಕಮಲ ಅಧಿಕಾರಕ್ಕೇರಿತು.

ಕರ್ನಾಟಕದ ಹಿಂದುತ್ವದ ಪ್ರಯೋಗಶಾಲೆ ಎಂದೇ ಹೆಸರಾದ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರವನ್ನು ಕಮಲ ಪಾಳಯ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಅಲ್ಲಿಂದ ಇಲ್ಲಿಯವರೆಗೆ ಸತತ 9 ಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ. ಅಭ್ಯರ್ಥಿಗಳು ಬದಲಾದರೂ ಬಿಜೆಪಿಯ ನಾಗಾಲೋಟದಲ್ಲಿ ಮಾತ್ರ ಇಲ್ಲಿ ಬದಲಾಗಿಲ್ಲ.

ಇದನ್ನೂ ಓದಿ: Dharwad Lokasabha Election Result 2024: ಜೋಶಿ vs ಅಸೂಟಿ, ಯಾರಿಗೆ ಸಿಗಲಿದೆ ಧಾರವಾಡ ಪೇಡಾ?

ಇನ್ನು ಈ ಬಾರಿ ಬಿಜೆಪಿ ಮಾಜಿ ಸೈನಿಕ ಕ್ಯಾಪ್ಟನ್ ಬೃಜೇಶ್ ಚೌಟರಿಗೆ ಮಣೆ ಹಾಕಿದರೆ, ಕಾಂಗ್ರೆಸ್ ಆರ್ ಪದ್ಮರಾಜ್ ಪೂಜಾರಿರಿಗೆ ಟಿಕೆಟ್ ನೀಡಿತ್ತು. ಕಳೆದ 32 ವರ್ಷಗಳಿಂದ ಕ್ಷೇತ್ರದಲ್ಲಿ ಗೆಲುವು ಕಾಣದೆ ಕಂಗಾಲಾಗಿದ್ದ ಕಾಂಗ್ರೆಸ್ ಈ ಬಾರಿಯೂ ಸೋಲು ಕಂಡಿದೆ. ಒಟ್ಟಾರೆ ಬಿಜೆಪಿ ಅಲೆ ಕರಾವಳಿಯಲ್ಲಿ ಮತ್ತೆ ಮನೆಮಾಡಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews

 

Trending News