ಬಿಜೆಪಿ ಸರ್ಕಾರದಿಂದ ದಲಿತರಿಗೆ ದ್ರೋಹವಾಗಿದೆ: ಸಿದ್ದರಾಮಯ್ಯ ಆಕ್ರೋಶ

ರಾಜ್ಯದಲ್ಲಿ ಶೇ.24.1ರಷ್ಟಿರುವ SC/ST ಜನಸಂಖ್ಯೆಗನುಗುಣವಾಗಿ ಯೋಜನಾ ವೆಚ್ಚದ ಶೇ.24.1ರಷ್ಟು ಹಣವನ್ನು ಕಾನೂನುಬದ್ಧವಾಗಿ ಮೀಸಲಿಟ್ಟಿದ್ದು ನಮ್ಮ ಬದ್ದತೆ. ನಿಮ್ಮ ಬದ್ದತೆ ಏನು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Puttaraj K Alur | Last Updated : Nov 20, 2022, 01:16 PM IST
  • ಬಿಜೆಪಿ ಸರ್ಕಾರವು ದಲಿತ ಸಮುದಾಯಕ್ಕೆ ದ್ರೋಹ ಮಾಡಿದೆ
  • ಬಿಜೆಪಿ ಸರ್ಕಾರವು ದಲಿತ ಸಮುದಾಯದ ಬೆನ್ನಿಗೆ ಇರಿದಿದೆ
  • ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ
ಬಿಜೆಪಿ ಸರ್ಕಾರದಿಂದ ದಲಿತರಿಗೆ ದ್ರೋಹವಾಗಿದೆ: ಸಿದ್ದರಾಮಯ್ಯ ಆಕ್ರೋಶ title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿದ್ದSCSP-TSP ಯೋಜನೆಯ ಕ್ರಾಂತಿಕಾರಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರುವ ಮೂಲಕ ಪರಿಶಿಷ್ಟ ಪಂಗಡದ ‘ನವಶಕ್ತಿ ಸಮಾವೇಶ’ದ ಕಾಳಜಿ ಪ್ರಾಮಾಣಿಕವಾಗಿದೆ ಎನ್ನುವುದನ್ನು ಬಿಜೆಪಿ ಸಾಬೀತುಪಡಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.  

#ದಲಿತವಿರೋಧಿಬಿಜೆಪಿ ಹ್ಯಾಶ್‍ಟ್ಯಾಗ್ ಬಳಸಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಬಿಜೆಪಿ ಸರ್ಕಾರದಿಂದ ದಲಿತರಿಗೆ ದ್ರೋಹವಾಗಿದೆ’ ಎಂದು ಕಿಡಿಕಾರಿದ್ದಾರೆ. ‘ರಾಜ್ಯದಲ್ಲಿ ಶೇ.24.1ರಷ್ಟಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗನುಗುಣವಾಗಿ ಯೋಜನಾ ವೆಚ್ಚದ ಶೇ.24.1ರಷ್ಟು ಹಣವನ್ನು ಕಾನೂನುಬದ್ಧವಾಗಿ ಮೀಸಲಿಟ್ಟಿದ್ದು ನಮ್ಮ ಬದ್ದತೆ. ನಿಮ್ಮ ಬದ್ದತೆ ಏನು? ಭಾಷಣಗಳ ಸಮಾವೇಶವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವೋಟರ್ ಗೇಟ್ ಹಗರಣ ಕಿಂಗ್ ಪಿನ್ ಸಿಎಂ ಬೊಮ್ಮಾಯಿ ತಕ್ಷಣ ರಾಜೀನಾಮೆ ನೀಡಲಿ; ಕಾಂಗ್ರೆಸ್ ಆಗ್ರಹ 

‘2008-09ರಿಂದ 2012-13ರ ಅವಧಿಯ 5 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಪರಿಶಿಷ್ಟಜಾತಿ/ ಪಂಗಡದ ಕಲ್ಯಾಣಕ್ಕೆ ನೀಡಿದ್ದ ಹಣ ಕೇವಲ 22,261 ಕೋಟಿ ರೂ. ಆದರೆ, ನಮ್ಮ ಸರ್ಕಾರ 5 ವರ್ಷಗಳ ಅವಧಿಯಲ್ಲಿ ನೀಡಿದ್ದು 88,395 ಕೋಟಿ ರೂ. ಇದು ನಮ್ಮ ಕಾಳಜಿ. SCSP-TSP ಕಾಯ್ದೆಯಡಿ  ಯೋಜನೆಯ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದು ಅಪರಾಧ. ಬಿಜೆಪಿ ಸರ್ಕಾರ 2021-22ರ ನಿಗದಿತ 26,695 ಕೋಟಿ ರೂ. ಹಣದಲ್ಲಿ 7,885 ಕೋಟಿ ರೂ. ಹಣವನ್ನು ಮೂಲಸೌಕರ್ಯ ಅಭಿವೃದ್ಧಿಗೆ ವರ್ಗಾವಣೆ ಮಾಡಿರುವುದು ದಲಿತರಿಗೆ ಬಗೆದಿರುವ ದ್ರೋಹ’ವೆಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘2012-13ರಲ್ಲಿ ಬಿಜೆಪಿ ಸರ್ಕಾರ SC/ST ಕಲ್ಯಾಣಕ್ಕೆ ನೀಡಿದ್ದು ಕೇವಲ 7200 ಕೋಟಿ ರೂ. 2014-15ರಲ್ಲಿ ನಮ್ಮ ಸರ್ಕಾರ ನೀಡಿದ್ದ ಹಣ 15,832 ಕೋಟಿ ರೂ. 2018-19ರಲ್ಲಿ ನಮ್ಮ ಕೊನೆಯ ಬಜೆಟ್‍ನಲ್ಲಿ SCSP-TSPಗೆ ನೀಡಿದ್ದ ಹಣ 29,691 ಕೋಟಿ ರೂ.’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Mangaluru Blast: ರಾಜ್ಯ ಗುಪ್ತಚರ ವಿಭಾಗ & ಗೃಹ ಇಲಾಖೆಯ ವೈಫಲ್ಯ ಮತ್ತೊಮ್ಮೆ ಸಾಬೀತಾಗಿದೆ

‘ಕಳೆದ 4 ವರ್ಷಗಳ ಅವಧಿಯಲ್ಲಿ SCSP-TSP ಯೋಜನೆಗೆ ಮೀಸಲಿರಿಸಿದ್ದ ಹಣದಲ್ಲಿ 7885.32 ಕೋಟಿ ರೂ.ವನ್ನು ನೀರಾವರಿ, ನಗರಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ವ್ಯಯ ಮಾಡಿರುವ ಬಿಜೆಪಿ ಸರ್ಕಾರ ದಲಿತ ಸಮುದಾಯದ ಬೆನ್ನಿಗೆ ಇರಿದಿದೆ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News