ಬೆಂಗಳೂರು:  “ರಾಜ್ಯಸಭೆ ಚುನಾವಣೆ ಮತದಾನದ ವೇಳೆಗೆ ಬರುತ್ತೇನೆ ಎಂದು ಹೇಳಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ವಿಧಿ ನಮ್ಮಿಂದ ದೂರ ಮಾಡಿದೆ" ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.


COMMERCIAL BREAK
SCROLL TO CONTINUE READING

ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿ ಸಂತಾಪ ಸೂಚಿಸಿದರು.


ಇದನ್ನೂ ಓದಿ: ಈ ಆಟಗಾರನ ಸೂಪರ್ ಬೌಲಿಂಗ್’ಗೆ ಇರ್ಫಾನ್ ಪಠಾಣ್ ಫಿದಾ! ಫ್ಯಾನ್ ಆಗ್ಬಿಟ್ಟೆ ಎಂದ ಕ್ರಿಕೆಟರ್


"ಇಂದು ನನ್ನ ಜೀವನದ ದುಃಖದ ದಿನ. ಮೂರ್ನಾಲ್ಕು ದಿನಗಳ ಹಿಂದೆ ನಾನು, ಜಿ.ಸಿ ಚಂದ್ರಶೇಖರ್, ಸೋಮಶೇಖರ್ ಅವರ ಜತೆಗೂಡಿ ಆಸ್ಪತ್ರೆಗೆ ಬಂದು ರಾಜಾ ವೆಂಕಟಪ್ಪ ನಾಯಕ ಅವರ ಆರೋಗ್ಯ ವಿಚಾರಿಸಿದ್ದೆ. ಅವರು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಆಗಿದ್ದರು. ಅವರು ಕಾಗದದ ಮೇಲೆ ಬರೆದು ನನ್ನ ಜತೆ ಮಾತನಾಡಿದ್ದರು. ರಾಜ್ಯಸಭೆ ಮತದಾನದ ವೇಳೆಗೆ ಬರುತ್ತೇನೆ ಎಂದು ಹೇಳಿದ್ದರು” ಎಂದಿದ್ದಾರೆ.


“ಅವರು ವಾಪಸ್ ಬರುತ್ತಾರೆ ಎಂದು ಭಾವಿಸಿದ್ದೆ. ಆದರೆ ಇಂದು ಮಧ್ಯಾಹ್ನ ಭಗವಂತ ಅವರನ್ನು ಕರೆದುಕೊಂಡಿದ್ದಾನೆ. ನಾವು ಮಾಡಿದ ಸಮೀಕ್ಷೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಇವರೇ ಮೊದಲ ಅಭ್ಯರ್ಥಿ ಎಂದು ಕೂಡ ವರದಿಯಲ್ಲಿ ವ್ಯಕ್ತವಾಗಿತ್ತು. ವಿಧಿಲೀಲೆ ಅವರನ್ನು ನಮ್ಮಿಂದ ದೂರ ಮಾಡಿದೆ” ಎಂದರು.


ಇದನ್ನೂ ಓದಿ: ಶಾಸಕ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನ ಪಡೆದ ಸಿಎಂ


“ಬಹಳ ಸರಳತೆಯ ನಾಯಕರಾಗಿದ್ದ ಅವರು ಯಾರ ಮನಸ್ಸನ್ನೂ ನೋಯಿಸುತ್ತಿರಲಿಲ್ಲ. ಆಮೂಲಕ ಜನರ ಮನ ಗೆದ್ದಿದ್ದರು. ನನಗೆ ಆತ್ಮೀಯ ಸ್ನೇಹಿತರೂ ಆಗಿದ್ದರು. ಅವರನ್ನು ನಾವು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಕ್ಷೇತ್ರದ ಜನರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.