ಕಾವೇರಿ ವಿವಾದ : ನಾಳೆ ಜಲಶಕ್ತಿ ಸಚಿವರ ಭೇಟಿ - ಡಿಸಿಎಂ ಡಿ.ಕೆ.ಶಿವಕುಮಾರ್

Kaveri Dispute : ಕಾರಣಾಂತರಗಳಿಂದ ಕೇಂದ್ರ ಜಲಶಕ್ತಿ ಸಚಿವರನ್ನು ಇಂದಿನ ಬದಲು ನಾಳೆ (ಗುರುವಾರ) ಬೆಳಿಗ್ಗೆ ಭೇಟಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.  

Written by - Prashobh Devanahalli | Last Updated : Sep 20, 2023, 05:18 PM IST
  • ನಾಳೆ ಕೇಂದ್ರ ಜಲಶಕ್ತಿ ಸಚಿವರ ಭೇಟಿ
  • ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲು ರಾಜ್ಯದ ಕಾನೂನು ತಂಡ ಸಿದ್ದ
  • ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ
ಕಾವೇರಿ ವಿವಾದ : ನಾಳೆ ಜಲಶಕ್ತಿ ಸಚಿವರ ಭೇಟಿ - ಡಿಸಿಎಂ ಡಿ.ಕೆ.ಶಿವಕುಮಾರ್ title=

ನವದೆಹಲಿ: ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಇಂದು (ಬುಧವಾರ) ಸಂಜೆ ಭೇಟಿ ಮಾಡಿಸುವುದಾಗಿ ಹೇಳಿದ್ದರು. ಅವರು ರಾಜಸ್ಥಾನದಿಂದ ಬರುವುದು ತಡವಾಗುವ ಕಾರಣ ಭೇಟಿ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ : ಚಾಮರಾಜನಗರದಲ್ಲಿ ತಮಿಳುನಾಡು ವಿರುದ್ಧ ಆಕ್ರೋಶ 

ನಾನು, ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ದೆಹಲಿಯಲ್ಲೇ ಇರಲಿದ್ದು, ಮಧ್ಯರಾತ್ರಿಯಾದರೂ ಸರಿ  ಸಚಿವರನ್ನು ಭೇಟಿ ಮಾಡಲು ತಯಾರಿದ್ದೇವೆ. ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲು ರಾಜ್ಯದ ಕಾನೂನು ತಂಡ ಸಿದ್ದವಾಗಿದ್ದು, ಸಮರ್ಥವಾಗಿ ವಾದ ಮಾಡಲಿದೆ ಎಂದು ಹೇಳಿದರು.

ಗುರುವಾರ ಬೆಳಿಗ್ಗೆ ಸರ್ವಪಕ್ಷ ಸಂಸದರ ಸಭೆಯಲ್ಲಿ ಕಾವೇರಿ ವಿಚಾರವಾಗಿ ಪಕ್ಷಾತೀತವಾಗಿ ರಾಜ್ಯಕ್ಕೆ ಬೆಂಬಲ ನೀಡಲಾಗುವುದು ಎಂದು ತೀರ್ಮಾನಕ್ಕೆ ಬರಲಾಗಿತ್ತು. ಹಾಗೂ ಬುಧವಾರ ಸಂಜೆ 4.30 ಕ್ಕೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಲು ವೇಳಾಪಟ್ಟಿ ಸಿದ್ದವಾಗಿತ್ತು. ಆದರೆ ಇದು ಬದಲಾಗಿದೆ.

ಇದನ್ನೂ ಓದಿ : ಕಾವೇರಿ ನೀರಿಗಾಗಿ ಜೈಲಿಗೆ ಹೋಗೋಣ, ನಿಮ್ಮೊಂದಿಗೆ ನಾವಿದ್ದೇವೆ: ರಾಜ್ಯ ಸರ್ಕಾರಕ್ಕೆ ಮು.ಚಂದ್ರು ಕರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Trending News