ಆದಿಚುಂಚನಗಿರಿ ಸ್ವಾಮಿಗಳನ್ನ ಪ್ರಶ್ನಿಸಿದ ಡಿ.ಕೆ. ಶಿವಕುಮಾರ್

ಇಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮ ಕ್ಯಾಂಡಿಡೇಟ್ಸ್ ಸ್ವಾಮೀಜಿಗಳ ಬಳಿ ಹೋಗಿದ್ರು, ಇವತ್ತು ಅವರು ಹೋಗಿದ್ದಾರೆ ಎಂದರು. 

Written by - Prashobh Devanahalli | Last Updated : Apr 10, 2024, 01:58 PM IST
  • ಎಚ್‌ಡಿ ಕುಮಾರಸ್ವಾಮಿ ಯಾರಿಗೆ ಟೀಕೆ ಮಾಡಿಲ್ಲ ಹೇಳಿ, ಮೇಕೆದಾಟು ಬಗ್ಗೆಯೂ ಟೀಕೆ ಮಾಡಿದ್ರು.
  • ಈಗ ಮೇಕೆದಾಟು ಬಗ್ಗೆ ಬೆಂಬಲ ಅಂತಾರೆ.
  • ಕುಮಾರಸ್ವಾಮಿ ಮಾತಿನಲ್ಲಿ ಸ್ಟಾಂಡ್ ಇಲ್ಲ- ಡಿಕೆ ಶಿವಕುಮಾರ್
ಆದಿಚುಂಚನಗಿರಿ ಸ್ವಾಮಿಗಳನ್ನ ಪ್ರಶ್ನಿಸಿದ ಡಿ.ಕೆ. ಶಿವಕುಮಾರ್  title=

ಬೆಂಗಳೂರು : ನಮ್ಮ ಒಕ್ಕಲಿಗ ಚೀಫ್ ಮಿನಿಸ್ಟರ್ ಇಳಿಸಿದ್ರಲ್ಲ ಅದನ್ನ ಕೇಳುವ ಶಕ್ತಿ ಸ್ವಾಮೀಜಿಗೆ ಇದ್ಯೋ ಇಲ್ವೋ ಗೊತ್ತಿಲ್ಲ, ಎಂದು ಡಿಸಿಎಂ ಡಿಕೆ ಶಿವಕುಮಾರ್ ನಿರ್ಮಲಾನಂದನಾಥ ಶ್ರೀಗಳಿಗೆ  ಟಾಂಗ್ ನೀಡಿದರು. 

ಇಂದು ಬಿಜೆಪಿ (BJP) ಹಾಗೂ ಜೆಡಿಎಸ್ (JDS) ನಾಯಕರು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನಮ್ಮ ಕ್ಯಾಂಡಿಡೇಟ್ಸ್ ಸ್ವಾಮೀಜಿಗಳ ಬಳಿ ಹೋಗಿದ್ರು, ಇವತ್ತು ಅವರು ಹೋಗಿದ್ದಾರೆ. ಸ್ವಾಮೀಜಿ ಯಾರಿಗೂ ಬೆಂಬಲಿಸಲ್ಲ. ಆಶೀರ್ವಾದ ಮಾಡ್ತಾರೆ, ವಿಭೂತಿ ಇಡ್ತಾರೆ. ನಮ್ಮ ಪರವೂ ಇಲ್ಲ, ಅವರ ಪರವೂ ಇಲ್ಲ. ನಮ್ಮ ಒಕ್ಕಲಿಗ ಚೀಫ್ ಮಿನಿಸ್ಟರ್ ಇಳಿಸಿದ್ರಲ್ಲ ಅದನ್ನ ಕೇಳುವ ಶಕ್ತಿ ಸ್ವಾಮೀಜಿಗೆ ಇದ್ಯೋ ಇಲ್ವೋ ಗೊತ್ತಿಲ್ಲ. ಯಾವುದನ್ನೂ ಮುಚ್ಚಿಡೋದಕ್ಕೆ ಆಗಲ್ವಲ್ಲಾ? ಪೋನ್ ಟ್ಯಾಪಿಂಗ್ ಬಗ್ಗೆ ಮಾತನಾಡಲ್ಲ ಸ್ವಾಮೀಜಿ ಬೇಜಾರು ಆಗ್ತಾರೆ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ- Loksabha Elections: ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ಬಸವರಾಜ ಬೊಮ್ಮಾಯಿ

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟೀಕೆ ವಿಚಾರ:
ಎಚ್‌ಡಿ ಕುಮಾರಸ್ವಾಮಿ (HD Kumaraswamy) ಯಾರಿಗೆ ಟೀಕೆ ಮಾಡಿಲ್ಲ ಹೇಳಿ, ಮೇಕೆದಾಟು ಬಗ್ಗೆಯೂ ಟೀಕೆ ಮಾಡಿದ್ರು. ಈಗ ಮೇಕೆದಾಟು ಬಗ್ಗೆ ಬೆಂಬಲ ಅಂತಾರೆ. ಕುಮಾರಸ್ವಾಮಿ ಮಾತಿನಲ್ಲಿ ಸ್ಟಾಂಡ್ ಇಲ್ಲ. ದೇವೇಗೌಡರು ಯಡಿಯೂರಪ್ಪ ಬಗ್ಗೆ ಮಾತನಾಡಿದ್ರು. ಜನರು ಕುಮಾರಸ್ವಾಮಿಯನ್ನ  ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ. ಒಕ್ಕಲಿಗ ಮುಖ್ಯಮಂತ್ರಿ ಇಳಿಸಿದ್ದು ಅವರೇ. ಅಮೇಲೆ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಿದ್ರು. ನಾನು ಸಮಾಜಕ್ಕೆ ಹೇಳಬೇಕಲ್ಲ ಎಂದು ಡಿ‌ಕೆ ಶಿವಕುಮಾರ್ ಹೇಳಿದರು. 

ಇದನ್ನೂ ಓದಿ- Bagalkote Lok Sabha Constituency: ಬಿಜೆಪಿ ಭದ್ರಕೋಟೆ ಛಿದ್ರ ಮಾಡಲು ʻಕೈʼ ನಾನಾ ಕಸರತ್ತು

ಬಾಡೂಟ ಹಾಕಿಸಿದ್ದಾರೆಂಬ ಆರೋಪ ವಿಚಾರ:
ನಾವು ಊಟಕೊಟ್ಟಿದ್ದಕ್ಕೆ ದೂರು ಕೊಡಿಸಿದ್ರು, 500 ಜನರಿಗೆ ನಾವು ಪರ್ಮಿಷನ್ ಪಡೆದಿದ್ವಿ. ಈಗ ಅವರೂ ಕೊಡೋಕೆ ಹೊರಟಿದ್ದಾರಂತೆ. ಬಿಡಿ ಈಗ ಅದೆಲ್ಲಾ ಯಾಕೆ ಮುಂದೆ ಮಾತನಾಡೋಣ. ಒಕ್ಕಲಿಗರು ದಡ್ಡರಲ್ಲ, ಒಕ್ಕಲಿಗ ಸ್ವಾಮೀಜಿಗಳು ದಡ್ಡರಲ್ಲ. ನಾನು ಗಿಫ್ಟ್ ವೋಚರ್ ಹಂಚುತ್ತಿದ್ದೀನೋ ಇಲ್ವೋ, ನಾನು ಬಾಡೂಟ ಹಾಕ್ತಿದ್ದೇನೋ ಇಲ್ವೋ ಗೊತ್ತಿಲ್ಲ. ನಾವು ನಾಲ್ಕು ಕ್ಷೇತ್ರ ಗೆಲ್ತೇವೆ, ಹಾಸನ, ಮಂಡ್ಯ, ಬೆಂ.ಗ್ರಾಮಾಂತರ, ಕೋಲಾರ ಗೆದ್ದೇ ಗೆಲ್ತೇವೆ ಎಂದು ಡಿಕೆ ಭವಿಷ್ಯ ನುಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News