DCM DK Shivakumar: ರಾಜ್ಯದಲ್ಲಿ ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿರುವ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೂಡಾ ವಿಚಾರದಲ್ಲಿ ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ. 


COMMERCIAL BREAK
SCROLL TO CONTINUE READING

ಮೂಡಾ ಹಗರಣದ (MUDA Scam) ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar),  "ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ" ಎಂದು  ತಿಳಿಸಿದರು. 


ಇದನ್ನೂ ಓದಿ- ಪುಟ್ಟ ಕಂದ ಆರ್ಯನ್ ಗೆ ಆಸರೆಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್


ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ ವಿಚಾರಣೆ ನಡೆಸುತ್ತಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, "ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್ಐಟಿ ವಿಚಾರಣೆ ನಡೆಸುತ್ತಿದೆ. ಇ.ಡಿ ವಿಚಾರಣೆ ಅವಶ್ಯಕತೆ ಇರಲಿಲ್ಲ. ಅವರ ತನಿಖೆ ಬಗ್ಗೆ ತಿಳಿದು ನಂತರ ಮಾತನಾಡುತ್ತೇನೆ" ಎಂದು ಹೇಳಿದರು.


ಇದನ್ನೂ ಓದಿ- ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ; ಪರಾಮರ್ಶಿಸಿ ತಪ್ಪು, ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್


ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವ ಪ್ರಾಧಿಕಾರದ ತೀರ್ಮಾನದ ವಿಚಾರವಾಗಿ ಮಾಧ್ಯಮಗಳು  ಪ್ರಶ್ನಿಸಿದಾಗ ಉತ್ತರಿಸಿದ ಶಿವಕುಮಾರ್ ಅವರು, "ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ. ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕು ಎಂದು ಅನಿಲ್ ದಿವಾನ್, ಮೋಹನ್ ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡ ಜತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸುತ್ತೇವೆ" ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.