ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್: ಅಶ್ವಥ್ ನಾರಾಯಣ್‌ಗೆ ಡಿಸಿಎಂ ತಿರುಗೇಟು

ಅಶ್ವತ್ಥ್ ನಾರಾಯಣ ಅವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ ವಿಚಾರವನ್ನು ಬಿಚ್ಚಿಟ್ಟಿಲ್ಲ. ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ಅವರ ಎಲ್ಲಾ ಅಕ್ರಮಗಳನ್ನು ಬಿಚ್ಚಿಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Aug 14, 2023, 01:00 PM IST
  • ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ನಿರ್ನಾಮ ಸಚಿವರು.
  • ಅಶ್ವಥ್‌ ನಾರಾಯಣ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆಶಿ ಪ್ರತಿಕ್ರಿಯೆ.
  • ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್ ಎಂದ ಡಿಸಿಎಂ.
ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್: ಅಶ್ವಥ್ ನಾರಾಯಣ್‌ಗೆ ಡಿಸಿಎಂ ತಿರುಗೇಟು title=

ಬೆಂಗಳೂರು : ಇವರು ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ಅಶ್ವಥ್ ನಾರಾಯಣ ಅವರು ನಿಮ್ಮನ್ನು ಬೆಂಗಳೂರು ನಿರ್ನಾಮ ಸಚಿವರು ಎಂದು ಟೀಕಿಸಿದ್ದಾರಲ್ಲ ಎಂದು ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಸೋಮವಾರ ಗಮನ ಸೆಳೆದಾಗ ಡಿ ಕೆ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು. “ಅಶ್ವಥ್ ನಾರಾಯಣ್ ಅವರಿಗೆ ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆ ಬಗ್ಗೆ ಚಿಂತೆ ಇಲ್ಲ. ಇದ್ದಿದ್ದರೆ ಅವರ ಕಾಲದಲ್ಲೇ ಬಿಲ್ ಪಾವತಿ ಮಾಡುತ್ತಿದ್ದರು. ಈಗ ತಮ್ಮದೇ ಆದ ಕೆಲವು ಬಿಜೆಪಿ ಗುತ್ತಿಗೆದಾರರನ್ನು ಎತ್ತಿ ಕಟ್ಟಿ ನಕಲಿ ಗುತ್ತಿಗೆದಾರರು, ಬೇನಾಮಿ ಕಳ್ಳರ ರಕ್ಷಣೆಗೆ ನಿಂತಿದ್ದಾರೆ. ಅಶ್ವಥ್ ನಾರಾಯಣ ಕೃಪಾಪೋಷಿತ ನಾಟಕ ಮಂಡಳಿ ಆಟ ಜಾಸ್ತಿ ದಿನ ನಡೆಯಲ್ಲ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಏನು ಬೇಕಾದರೂ ಮಾಡಲಿ. ಸದ್ಯದಲ್ಲೇ ದಾಖಲೆ ಸಮೇತ ಬಣ್ಣ ಬಯಲು ಮಾಡುತ್ತೇನೆ.

ಇದನ್ನೂ ಓದಿ: ರಾಯಚೂರು ಜಿಲ್ಲೆ ನೀರಮಾನ್ವಿಯ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ!

ಅಕ್ರಮ ಬಿಚ್ಚಿಡುತ್ತೇವೆ : ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದವರು, ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು. ಆ ಮಾನಸಿಕ ಖಿನ್ನತೆಯಲ್ಲಿ ಅವರಿದ್ದಾರೆ. ಅಶ್ವತ್ಥ್ ನಾರಾಯಣ ಅವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ ವಿಚಾರವನ್ನು ಬಿಚ್ಚಿಟ್ಟಿಲ್ಲ. ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ಅವರ ಎಲ್ಲಾ ಅಕ್ರಮಗಳನ್ನು ಬಿಚ್ಚಿಡುತ್ತೇವೆ ಎಂದರು.

ರಾಷ್ಟ್ರಪತಿ ಬಳಿಗೂ ಹೋಗಲಿ :  ಯಾರು ಎಷ್ಟು ಕೆಲಸ ಮಾಡಿದ್ದಾರೆ? ಹೇಗೆ ಮಾಡಿದ್ದಾರೆ? ಯಾರು ಯಾರನ್ನು ಹೇಗೆ ಎತ್ತಿಕಟ್ಟುತ್ತಿದ್ದಾರೆ? ಎಂಬುದು ಬಯಲಾಗಲಿದೆ. ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆಗೆಂದೇ ಪ್ರಾಥಮಿಕ ತನಿಖೆ ಮಾಡಲೇಬೇಕು. ಅದನ್ನು ಸರ್ಕಾರ ಮಾಡುತ್ತಿದೆ. ಇದನ್ನು ತಪ್ಪಿಸಲು ಅವರು ಇಷ್ಟೆಲ್ಲಾ ಆಟವಾಡುತ್ತಿದ್ದಾರೆ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಏನು ಬೇಕಾದರೂ ಮಾಡಲಿ. ರಾಜ್ಯಪಾಲರಿಗೆ ಮಾತ್ರವಲ್ಲ ರಾಷ್ಟ್ರಪತಿ ಬಳಿಗೂ ಹೋಗಲಿ. ಯಾವುದೇ ಅಭಿಯಾನ ಮಾಡಲಿ ಎಂದರು.

ಇದನ್ನೂ ಓದಿ: ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ದೇಶದ ಹಣ ಲೂಟಿ ಹೊಡೆಯುವ ಚಿಂತೆ: ಎಚ್.ಡಿ.ಕುಮಾರಸ್ವಾಮಿ ಆಕ್ರೋಶ!

ನಾನು ಈ ವಿಚಾರವಾಗಿ ಮೊನ್ನೆಯೇ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿತು. ಇಂದು ಪಕ್ಷದ ಸಭೆ ಇದೆ. ನಾಳೆ ಸ್ವಾತಂತ್ರ ದಿನಾಚರಣೆ ಇದೆ. ಹೀಗಾಗಿ ಈಗ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ.” ಒತ್ತಡದಿಂದಾಗಿ ಕೆಲವು ಗುತ್ತಿಗೆದಾರರು ನಿಮ್ಮ ವಿರುದ್ಧ ಮಾತನಾಡುತ್ತಿದ್ದಾರೆಯೇ ಎಂಬ ಪ್ರಶ್ನೆ ಕೇಳಿದಾಗ, “ಅದು ಸತ್ಯ. ನಾನು ಯಾರಿಗೂ ಗುತ್ತಿಗೆಯನ್ನೇ ನೀಡಿಲ್ಲ. ಹೀಗಿರುವಾಗ ನಾನು ಕಮಿಷನ್ ಕೇಳಲು ಹೇಗೆ ಸಾಧ್ಯ? ಗುತ್ತಿಗೆದಾರರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಗಳ ಬಿಲ್ ಪಾವತಿ ಬಗ್ಗೆ ಮನವಿ ಮಾಡಲು ನನ್ನನ್ನು ಭೇಟಿ ಮಾಡಿದ್ದಾರೆ. ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಯಾಕೆ ಈ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ? ಇಂದಿನ ಪಕ್ಷದ ಸಭೆ, ಸ್ವಾತಂತ್ರ್ಯ ದಿನ ಮುಗಿಯಲಿ. ನಂತರ ಬಿಜೆಪಿ ಸರ್ಕಾರದ ಅವಧಿಯ ಕಾಮಗಾರಿಗಳ ಬಗ್ಗೆ ಅಘಾತಕಾರಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಬಿಜೆಪಿ ನಾಯಕರು ಗುತ್ತಿಗೆದಾರರನ್ನು ಹೇಗೆಲ್ಲಾ ಬಳಸಿಕೊಂಡು, ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂಬುದನ್ನು ನೋಡಿದರೆ ಬೇಸರವಾಗುತ್ತದೆ” ಎಂದು ತಿಳಿಸಿದರು.

ಸಿ.ಟಿ. ರವಿಗೆ ಬುದ್ಧಿ ಭ್ರಮಣೆ : ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡುವ ವಿಚಾರವಾಗಿ ಸಿ.ಟಿ ರವಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಸಿ.ಟಿ. ರವಿಗೆ ಬುದ್ಧಿ ಭ್ರಮಣೆ ಆಗಿದೆ. ಅವರಿಗೆ ಈಗ ಬೇಕಿರೋದು ಉತ್ತಮ ಚಿಕಿತ್ಸೆ. ಅದನ್ನು ಕೊಡಿಸೋಣ.” ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News