ಬೆಂಗಳೂರು: ವಸಂತನರಸಾಪುರದಲ್ಲಿ ಕೈಗಾರಿಕಾ ವಲಯ ನಿರ್ಮಾಣವಾಗುತ್ತಿದ್ದು, ಇಲ್ಲಿಯೇ ಜಪಾನೀಸ್ ಟೌನ್‌ಶಿಪ್ ತೆರೆಯಲು ಸಹ ಮುಂದಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. 


COMMERCIAL BREAK
SCROLL TO CONTINUE READING

ಜಪಾನ ದೇಶದ ಕೌನ್ಸಿಲ್ ಟಕಯುಕಿ ಕಿತಗ್ವ ವಿಧಾನಸೌಧದಲ್ಲಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು. 



ಹಿಂದಿನಿಂದಲೂ ಜಪಾನೀಸ್ ಟೌನ್‌ಶಿಪ್ ನಿರ್ಮಾಣದ ಕನಸು ಇದೆ. ಸಂತನರಸಾಪುರಸಲ್ಲಿ ಈಗಾಗಲೇ ಭೂ ಸ್ವಾಧೀನ ಪ್ರಕ್ರಿಯೆ ಬಹುತೇಕ ನಡೆಯುತ್ತಿದೆ. ಅಲ್ಲಿನ ಮೂಲಸೌಕರ್ಯ ಒದಗಿಸಿಕೊಡುವ ಸಂಬಂಧ ಇನ್ನೆರಡು ದಿನದಲ್ಲಿ ಸಭೆ ಕರೆದಿದ್ದು ಆ ಸಂದರ್ಭದಲ್ಲಿ ಸಭೆಗೆ ತಾವೂ ಬರಬಹುದು ಎಂದು ಆಹ್ವಾನಿಸಿದರು.