)
ತುಮಕೂರು: ತುಮಕೂರಿನ ದೇವರಾಯನದುರ್ಗ ದೇವಸ್ಥಾನದ ಅರ್ಚಕರೊಬ್ಬರು ಕುಂಕುಮ ಹಚ್ಚುವಾಗ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಕುಟುಂಬಸ್ಥರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಹೌದು ದೇವಸ್ಥಾನದ ಅರ್ಚಕರೊಬ್ಬರು ಹುಡುಗಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇಲೆ ಆಕೆಯ ಕುಟುಂಬ ಸದಸ್ಯರು ಅವರನ್ನು ಥಳಿಸಿದ್ದಾರೆ. ದೇವಸ್ಥಾನಕ್ಕೆ ಬಂದಿದ್ದ ಯುವತಿಯನ್ನು ಅನುಚಿತವಾಗಿ ಮುಟ್ಟಿ ಬಟ್ಟೆ ತೆಗೆಯುವಂತೆ ಕೇಳಲಾಗಿದೆ ಎಂದು ವರದಿಯಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೋಪಗೊಂಡ ಹುಡುಗಿಯ ಕುಟುಂಬ ಸದಸ್ಯರು ಅರ್ಚಕನನ್ನು ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದು. ಅವನು ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ, ಅವರು ಅವನನ್ನು ಹಿಡಿದು ಕೆಳಗೆ ಎಸೆದು ಹೊಡೆದಿದ್ದಾರೆ.
ಅರ್ಚಕ ನಾಗಭೂಷಣಾಚಾರ್ಯ ಅವರನ್ನು ಮಹಿಳೆಯರು ಮತ್ತು ಇಬ್ಬರು ಯುವಕರು ಕೋಲುಗಳಿಂದ ಹೊಡೆದಿದ್ದಾರೆ. ಈ ಘಟನೆ ನಾಲ್ಕು ದಿನಗಳ ಹಿಂದೆ ನಡೆದಿತ್ತು. ಆದರೆ ಇದೀಗ ಬೆಳಕಿಗೆ ಬಂದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೆಟಿಜನ್ಗಳು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.