ಮೈಸೂರು: ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖೆ ತೆರೆಯಲು ಶ್ರೀಗಳು ನಿರ್ಧರಿಸಿದ್ದು ಅಭಿನಂದನೀಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs ENG: 3ನೇ ಟೆಸ್ಟ್ ಪಂದ್ಯಕ್ಕೆ ಹೀಗಿರಲಿದೆ ಟೀಂ ಇಂಡಿಯಾದ ಪ್ಲೇಯಿಂಗ್ 11


ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನೆರವೇರಿದ ಬೆನ್ನಲ್ಲೇ ಇಲ್ಲಿನ ಸುತ್ತೂರು ಶ್ರೀಗಳು ಈಗ ಅಲ್ಲಿ ತಮ್ಮ ಶಾಖಾ ಮಠ ತೆರೆಯುವುದು ಸಂತಸ ತಂದಿದೆ ಎಂದು ಹೇಳಿದರು. ಇನ್ನು ಇದೇ ಸಂದರ್ಭದಲ್ಲಿ ಬಾಲ ಶ್ರೀರಾಮನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಅಮಿತ್ ಶಾ ಸನ್ಮಾನಿಸಿದರು.


ಇದನ್ನೂ ಓದಿ: ಬ್ಯೂಟಿಯಲ್ಲಿ ಆಲಿಯಾ ಭಟ್.. ದಿಶಾ ಪಟಾನಿಗೆ ಪೈಪೋಟಿ ನೀಡುತ್ತಾರೆ 64 ವರ್ಷದ ಈ ಸ್ಟಾರ್‌ ನಟಿ!   


ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಪ್ರತಾಪ ಸಿಂಹ, ಬಿಜೆಪಿ ಜಿಲ್ಲಾಧ್ಯಕ್ಷ ಎಲ್. ನಾಗೇಂದ್ರ, ಎಲ್.ಆರ್. ಮಹದೇವಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ