ವಾಟರ್‌ ಟ್ಯಾಂಕರ್‌ನಲ್ಲಿ ಕೊಳೆತ ಶವ ಪತ್ತೆ; ಅದೇ ನೀರು ಕುಡಿದ ಗ್ರಾಮಸ್ಥರು!

Dead Body Found in Water Tank: ನೀರಿನ ಟ್ಯಾಂಕರ್‌ನಲ್ಲಿ ಎಷ್ಟು ದಿನದಿಂದ ಈ ಶವವಿತ್ತು? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಅಂತಾ ಇನ್ನೂ ತಿಳಿದುಬಂದಿಲ್ಲ. ಗ್ರಾಮಸ್ಥರು ಹಲವು ದಿನಗಳಿಂದ ಶವ ಬಿದ್ದಿದ್ದ ಈ ಟ್ಯಾಂಕರ್‌ನ ನೀರನ್ನೇ ಕುಡಿದಿದ್ದಾರೆ.

Written by - Puttaraj K Alur | Last Updated : Mar 29, 2024, 06:25 PM IST
  • ಕುಡಿಯುವ ನೀರಿನ ಟ್ಯಾಂಕರ್‌ನಲ್ಲಿ ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
  • ಬೀದರ್‌ ಜಿಲ್ಲೆಯ ಆಣದೂರ ಗ್ರಾಮದ ಟ್ಯಾಂಕರ್‌ನಲ್ಲಿ ಶವ ಪತ್ತೆಯಾಗಿದೆ
  • ಕಳೆದ ಕೆಲವು ದಿನಗಳಿಂದ ಅದೇ ಟ್ಯಾಂಕಿನ ನೀರು ಕುಡಿದಿರುವ ಜನರು
ವಾಟರ್‌ ಟ್ಯಾಂಕರ್‌ನಲ್ಲಿ ಕೊಳೆತ ಶವ ಪತ್ತೆ; ಅದೇ ನೀರು ಕುಡಿದ ಗ್ರಾಮಸ್ಥರು!  title=
ಟ್ಯಾಂಕರ್‌ನಲ್ಲಿ ಶವ ಪತ್ತೆ(ಸಾಂದರ್ಭಿಕ ಚಿತ್ರ)

ಬೀದರ್: ಕುಡಿಯುವ ನೀರಿನ ಟ್ಯಾಂಕರ್‌ನಲ್ಲಿ ಶವವೊಂದು ಪತ್ತೆಯಾಗಿ ಗ್ರಾಮಸ್ಥರೇ ಬೆಚ್ಚಿ ಬಿದ್ದಿರುವ ಘಟನೆ ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಆಣದೂರ ಗ್ರಾಮದಲ್ಲಿಯೇ ಈ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಈ ಊರಿನ ಗ್ರಾಮಸ್ಥರು ಇದೇ ಟ್ಯಾಂಕರ್‌ನ ನೀರನ್ನು ಕುಡಿಯುತ್ತಿದ್ದರಂತೆ.

ಆಣದೂರ ಗ್ರಾಮದ ಮನೆ ಮನೆಗೆ ಸರಬರಾಜು ಮಾಡುತ್ತಿದ್ದ ನೀರು ಕಳೆದ ಕೆಲವು ದಿನಗಳಿಂದ ಗಬ್ಬು ನಾರುತ್ತಿತ್ತು. ಈ ಬಗ್ಗೆ ಗ್ರಾಮದ ಜನರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರಂತೆ. ಮೊದಮೊದಲು ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿರಬೇಕು ಅಂತಾ ಶಂಕಿಸಲಾಗಿತ್ತು. ಕೆಲ ದಿನಗಳ ಹಿಂದಷ್ಟೇ ನೀರಲ್ಲಿ ಕೂದಲು ಸಹ ಬರುತ್ತಿದ್ದವಂತೆ.

ಇದನ್ನೂ ಓದಿ: ಚಲಿಸುವ ರೈಲಿನಲ್ಲಿ ಕಳ್ಳತನ ಮಾಡಿ ಜಿಗಿದು ಪಾರಾದ ಕಳ್ಳ..! ವಿಡಿಯೋ ವೈರಲ್‌

ಈ ಬಗ್ಗೆ ದೂರು ಬಂದ ಕಾರಣ ವಾಟರ್ ಟ್ಯಾಂಕ್ ಪರಿಶೀಲನೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಅವರಿಗೆ ಶಾಕ್‌ ವುಂಟಾಗಿದೆ. ಯಾಕಂದರೆ ಟ್ಯಾಂಕರ್‌ನಲ್ಲಿ ವ್ಯಕ್ತಿಯೊಬ್ಬರ ಕೊಳೆತ ಶವ ಪತ್ತೆಯಾಗಿದೆ. ಇದನ್ನು ಕಂಡ ಟ್ಯಾಂಕರ್‌ ಪರಿಶೀಲನೆಗೆ ಬಂದಿದ್ದ ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. 

ನೀರಿನ ಟ್ಯಾಂಕರ್‌ನಲ್ಲಿ ಎಷ್ಟು ದಿನದಿಂದ ಈ ಶವವಿತ್ತು? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಅಂತಾ ಇನ್ನೂ ತಿಳಿದುಬಂದಿಲ್ಲ. ಗ್ರಾಮಸ್ಥರು ಹಲವು ದಿನಗಳಿಂದ ಶವ ಬಿದ್ದಿದ್ದ ಈ ಟ್ಯಾಂಕರ್‌ನ ನೀರನ್ನೇ ಕುಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ಗಂಡು ಮಗು ಹೆರಲಿಲ್ಲವೆಂದು ಚಿತ್ರಹಿಂಸೆ: ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ..!

ಕುಡಿಯುವ ನೀರು ಗಬ್ಬು ವಾಸನೆ ಬರುತ್ತಿದ್ದ ಹಿನ್ನೆಲೆ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ ಎಂದು ಗ್ರಾಮ ಪಂಚಾಯತಿ ಪಿಡಿಓ ಮಾಹಿತಿ ನೀಡಿದ್ದಾರೆ. ಮೊದಮೊದಲು ನೀರಿನೊಟ್ಟಿಗೆ ಕೂದಲು ಬಂದಿದೆ. ಜೊತೆಗೆ ಕುಡಿಯಲು ಆಗದಷ್ಟು ನೀರು ಗಬ್ಬು ನಾರುತ್ತಿತ್ತು. ಇದೀಗ ನಿಜವಾದ ವಿಷಯವನ್ನು ತಿಳಿದು ಗ್ರಾಮಸ್ಥರೇ ಬೆಚ್ಚಿ ಬಿದ್ದಿದ್ದಾರೆ. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News