ಧರ್ಮಸ್ಥಳ, ಧರ್ಮಾಧಿಕಾರಿಗಳ ವಿರುದ್ಧ ಮಾನಹಾನಿಕರ ವಿಡಿಯೋ ಹರಿಬಿಟ್ಟ ಆರೋಪ: ಕೋರ್ಟ್‌ ಆದೇಶದನ್ವಯ ಸಮೀರ್‌ ಎಂಡಿ ವೀಡಿಯೋ ಡಿಲೀಟ್

ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾ. ಆರ್‌ ದೇವದಾಸ್‌ ಅವರಿದ್ದ ಏಕಸದಸ್ಯ ಪೀಠ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಅವರ ಹಿಂಬಾಲಕರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ಬಗ್ಗೆ ಮಾನಹಾನಿ ಹೇಳಿಕೆಗಳನ್ನ ನೀಡಬಾರದು ಎಂದು ಆದೇಶ ನೀಡಿತ್ತು

Written by - Prashobh Devanahalli | Edited by - Bhavishya Shetty | Last Updated : Mar 21, 2025, 04:59 PM IST
    • ಯೂಟ್ಯೂಬರ್‌ ಸಮೀರ್‌ ಎಂಡಿ ವಿರುದ್ಧ ಕೋರ್ಟ್‌ ಆದೇಶ
    • ಮಾನ್ಯ ಪ್ರಧಾನ ಸಿಟಿ ಸಿವಿಲ್‌ ಕೋರ್ಟ್‌ ಆದೇಶದನ್ವಯ ವೀಡಿಯೋ ಡಿಲೀಟ್
    • ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಈಗಾಗಲೇ ಕಡ್ಡಾಯ ತಡೆಯಾಜ್ಞೆ ನೀಡಿದೆ
ಧರ್ಮಸ್ಥಳ, ಧರ್ಮಾಧಿಕಾರಿಗಳ ವಿರುದ್ಧ ಮಾನಹಾನಿಕರ ವಿಡಿಯೋ ಹರಿಬಿಟ್ಟ ಆರೋಪ: ಕೋರ್ಟ್‌ ಆದೇಶದನ್ವಯ ಸಮೀರ್‌ ಎಂಡಿ ವೀಡಿಯೋ ಡಿಲೀಟ್
File Photo

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್‌ ಸಮೀರ್‌ ಎಂಡಿ ವಿರುದ್ಧ ಕೋರ್ಟ್‌ ಆದೇಶ ನೀಡಿದ್ದು, ಸಮೀರ್‌ ತನ್ನ ಯೂಟ್ಯೂಬ್‌ ಚಾನೆಲ್‌ ನಲ್ಲಿ ಹರಿಬಿಟ್ಟಿದ್ದ ವೀಡಿಯೋ ಮಾನ್ಯ ಪ್ರಧಾನ ಸಿಟಿ ಸಿವಿಲ್‌ ಕೋರ್ಟ್‌ ಆದೇಶದನ್ವಯ ಡಿಲೀಟ್ ಆಗಿದೆ.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಏಕಾಏಕಿ ಭರ್ಜರಿ ಕುಸಿತ! ಬಂಗಾರ ಖರೀದಿಗೆ ಇದಕ್ಕಿಂತ ಉತ್ತಮ ಸಮಯ ಮತ್ತೊಂದಿಲ್ಲ..

ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾ. ಆರ್‌ ದೇವದಾಸ್‌ ಅವರಿದ್ದ ಏಕಸದಸ್ಯ ಪೀಠ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಅವರ ಹಿಂಬಾಲಕರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ಬಗ್ಗೆ ಮಾನಹಾನಿ ಹೇಳಿಕೆಗಳನ್ನ ನೀಡಬಾರದು ಎಂದು ಆದೇಶ ನೀಡಿತ್ತು.

ಯೂಟ್ಯೂಬರ್‌ ಸಮೀರ್‌ ವಿರುದ್ಧ ಪ್ರಧಾನ ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಈಗಾಗಲೇ ಕಡ್ಡಾಯ ತಡೆಯಾಜ್ಞೆ ಇದ್ದು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ಧ ಮಾನಹಾನಿ ಹೇಳಿಕೆಗಳು ಅಪಪ್ರಚಾರದ ವೀಡಿಯೋಗಳನ್ನ ಮಾಡದಂತೆ ಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಜತೆಗೆ ಸಮೀರ್‌ ವೀಡಿಯೋವನ್ನು ಇತರ ಯೂಟ್ಯೂಬ್‌ ಚಾನೆಲ್ಗಳು ಕೂಡ ಶೇರ್‌ ಮಾಡಿಕೊಂಡಿದ್ದು, ಅವುಗಳನ್ನೂ ಕೂಡ ಡಿಲೀಟ್‌ ಮಾಡುವಂತೆ ಕೋರ್ಟ್‌ ಆದೇಶ ನೀಡಿದೆ.

ಇದನ್ನೂ ಓದಿ:  ಶುಗರ್‌ ಇರುವವರು ಎಳನೀರು ಕುಡಿದರೆ ಏನಾಗುತ್ತೆ?

ಅಲ್ಲದೇ ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್‌, ಫೇಸ್‌ ಬುಕ್‌, ಇನ್ಸ್ಟಾಗ್ರಾಂ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಅಪಪ್ರಚಾರ ಹಾಗೂ ಮಾನಹಾನಿ ಹೇಳಿಕೆಗಳಿರುವಂತ ಯಾವುದೇ ವರದಿ ಮತ್ತು ಅಂಶಗಳನ್ನ ಅಪ್ಲೋಡ್ ಮಾಡದಂತೆ ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಕೀಲ ಎಸ್‌ ರಾಜಶೇಖರ್‌ ಹಿಲಿಯಾರು ವಾದ ಮಂಡಿಸಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Trending News