ಧಾರವಾಡ : ಹುಬ್ಬಳ್ಳಿಯ ಪ್ರಾವಿಡೆಂಟ್ ಫಂಡ್ ಇಲಾಖೆಯ 6 ಜನ ನಿವೃತ್ತ ಪಿಂಚಣಿದಾರರು ತಮ್ಮ ನಿವೃತ್ತಿ ನಂತರದ ಪಿಂಚಣಿ ನಿಗದಿಪಡಿಸುವಾಗ ತಪ್ಪು ಲೆಕ್ಕ ಹಾಕಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಜಿಲಾ ್ಲಗ್ರಾಹಕರ ಆಯೋಗಕ್ಕೆ ದೂರುಗಳನ್ನು ಸಲ್ಲಿಸಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮರುಕಳಿಸಿದ ಪ್ರಕರಣ: ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ


ಈ ದೂರುಗಳ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ ಅ. ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಅವರು ತಮಗೆ ಸಂಬಂಧಿಸಿದ ಪಿಂಚಣಿ ವ್ಯಾಜ್ಯವನ್ನು ಪಿ.ಎಫ್. ಇಲಾಖೆಯಿಂದ ಪ್ರತಿ ತಿಂಗಳು ನಡೆಸುವ ಪಿಂಚಣಿ ಲೋಕ್‍ಅದಾಲತ್‍ನಲ್ಲಿದೂರುದಾರ ಭಾಗವಹಿಸಿ ಪರಿಹಾರ ಕಂಡುಕೊಳ್ಳದೇ ಅನಗತ್ಯವಾಗಿ ಗ್ರಾಹಕರ ಆಯೋಗಕ್ಕೆ ದೂರುಗಳನ್ನು ಸಲ್ಲಿಸಿದ್ದು ತಪು ಅಂತಾ ಹೇಳಿ ಅವುಗಳನ್ನು ವಜಾಗೊಳಿಸಬೇಕು ಎಂದು ಪಿ.ಎಫ್. ಇಲಾಖೆಯವರು ಆಕ್ಷೇಪಿಸಿದ್ದರು.


ಎಲ್ಲ ದೂರುದಾರರ ಪಿಂಚಣಿ ನಿಗದಿಪಡಿಸುವಾಗ ಪಿ.ಎಫ್.ಇಲಾಖೆ ಸರಿಯಾಗಿ ಲೆಕ್ಕ ಹಾಕದೇ ತಪ್ಪೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅವರು ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಆಯೋಗ ಅಭಿಪ್ರಾಯಪಟ್ಟು ಪಿ.ಎಫ್.ಇಲಾಖೆಯವರ ವಾದವನ್ನು ತಳ್ಳಿಹಾಕಿದೆ.


ಇದನ್ನೂ ಓದಿ: ಸ್ವಾವಲಂಬಿ ಜೀವನಕ್ಕಾಗಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ


ದೂರುದಾರರಿಗೆ ಅವರ ಪಿಂಚಣಿ ನಿಗದಿಪಡಿಸಿದ ದಿನಾಂಕದಿಂದ ಆಯೋಗ ಆದೇಶ ಹೊರಡಿಸಿದ ದಿನಾಂಕದವರೆಗೆ 6 ಜನ ದೂರುದಾರರಿಗೆ ಒಟ್ಟು ರೂ.6 ಲಕ್ಷ 42 ಸಾವಿರ 68 ರೂಪಾಯಿ ಬಾಕಿ ಹಣ ಮತ್ತು ಅದರ ಮೇಲೆ ಶೇ.10 ರಂತೆ ಬಡ್ಡಿ ಲೆಕ್ಕ ಹಾಕಿ ನೀಡುವಂತೆ ಆದೇಶಿಸಿದೆ. ಜೊತೆಗೆ ಪ್ರತಿಯೊಬ್ಬ ದೂರುದಾರರಿಗೆ ಮಾನಸಿಕ ತೊಂದರೆಗಾಗಿ ತಲಾ ರೂ.20 ಸಾವಿರ ಪರಿಹಾರ ಹಾಗೂ ತಲಾ ರೂ.10 ಸಾವಿರ ಪ್ರಕರಣದ ಖರ್ಚು ವೆಚ್ಚವನ್ನು ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡಲು ಆಯೋಗ ಆದೇಶಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.