ಬೆಂಗಳೂರು: ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು ಬೇಸರ ತಂದಿದೆ ಎಂದು ಡಿಸಿಎಂ ಜಿ.ಪರಮೇಶ್ವರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆಗಳೂ ಇತ್ತು.  ಕಳೆದ ಬಾರಿ ಆ ಕ್ಷೇತ್ರದಿಂದ ಮುದ್ದಹನುಮೇಗೌಡ ಗೆಲುವು ಸಾಧಿಸಿದ್ದರು. ಅದರಂತೆ ಕಳೆದ ಬಾರಿ ಚುನಾವಣೆಯಲ್ಲಿ ಗೆದ್ದಿರುವ ಅಭ್ಯರ್ಥಿಗಳ ಬದಲಾವಣೆ ಮಾಡುವುದು ಬೇಡ ಎಂದು ಸ್ಕ್ರೀನಿಂಗ್ ಕಮಿಟಿಯಲ್ಲಿಯೂ ನಿರ್ಧರಿಸಲಾಗಿತ್ತು. ಆದರೂ ಅಂತಿಮ ಕ್ಷಣದಲ್ಲಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು ಅಸಮಾಧಾನ ಮೂಡಿಸಿದೆ ಎಂದು ಹೇಳಿದ್ದಾರೆ. 


ಈ ಬಗ್ಗೆ ಜೆಡಿಎಸ್ ನಾಯಕರೊಂದಿಗೆ ಮಾತನಾಡಿ ಕ್ಷೇತ್ರ ಬಿಟ್ಟುಕೊಡುವಂತೆ ಮನವಿ ಮಾಡಲಾಗಿದೆ. ಕ್ಷೇತ್ರ ಹಂಚಿಕೆಯಲ್ಲಿ ಪರಮೇಶ್ವರ್​ ಅವರ ಪ್ರಶ್ನೆ ಬರಲ್ಲ. ಮೈತ್ರಿ ಮುಂದುವರೆಯಬೇಕು. ಹಾಗೆಯೇ ಹೊಂದಾಣಿಕೆಯಲ್ಲಿ ಸುಲಭವಾಗಿ ಗೆಲ್ಲುವ ಸೀಟುಗಳನ್ನು ಬುದ್ಧಿವಂತಿಕೆಯಿಂದ ಹಂಚಿಕೊಂಡರೆ ಗೆಲುವು ಖಚಿತ ಎಂದು ಪರಮೇಶ್ವರ್ ಹೇಳಿದ್ದಾರೆ.