ಬಡ್ಡಿ ಸಮೇತ ಠೇವಣಿ ಹಣ ಹಿಂದಿರುಗಿಸದ ಧಾರವಾಡದ ಸಹಕಾರಿ ಸಂಘಕ್ಕೆ ದಂಡ

ಆಕಾಶವಾಣಿ ರಸ್ತೆಯ ನಿವಾಸಿ ಸುಮೀತ್ರಾ ಶೇಠ್ ಅನ್ನುವವರು 2018-19ರಲ್ಲಿ ಧಾರವಾಡದ ದೈವಜ್ಞ ಪತ್ತಿನ ಸಹಕಾರಿ ಸಂಘದಲ್ಲಿ ರೂ.3,90,000/- ಠೇವಣಿ ಇಟ್ಟಿದ್ದರು. ಅದರ ಮೇಲೆ ಶೇ.8.5 ರಂತೆ ಬಡ್ಡಿ ಕೊಡಲು ಎದುರುದಾರರ ಸಂಘದವರು ಒಪ್ಪಿದ್ದರು.

Written by - Manjunath N | Last Updated : Jan 2, 2024, 06:21 PM IST
  • ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ.ಭೂತೆ, ಸದಸ್ಯರುಗಳಾದ ವಿಶಾಲಾಕ್ಷಿ.
  • ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.
 ಬಡ್ಡಿ ಸಮೇತ ಠೇವಣಿ ಹಣ ಹಿಂದಿರುಗಿಸದ ಧಾರವಾಡದ ಸಹಕಾರಿ ಸಂಘಕ್ಕೆ ದಂಡ title=
ಸಾಂಧರ್ಭಿಕ ಚಿತ್ರ

ಧಾರವಾಡ: ಆಕಾಶವಾಣಿ ರಸ್ತೆಯ ನಿವಾಸಿ ಸುಮೀತ್ರಾ ಶೇಠ್ ಅನ್ನುವವರು 2018-19ರಲ್ಲಿ ಧಾರವಾಡದ ದೈವಜ್ಞ ಪತ್ತಿನ ಸಹಕಾರಿ ಸಂಘದಲ್ಲಿ ರೂ.3,90,000/- ಠೇವಣಿ ಇಟ್ಟಿದ್ದರು. ಅದರ ಮೇಲೆ ಶೇ.8.5 ರಂತೆ ಬಡ್ಡಿ ಕೊಡಲು ಎದುರುದಾರರ ಸಂಘದವರು ಒಪ್ಪಿದ್ದರು.

ಅಲ್ಲದೇ ದೂರುದಾರರ ಉಳಿತಾಯ ಖಾತೆಯಲ್ಲಿ ರೂ.56,568/- ಹಣ ಬಾಕಿ ಇತ್ತು. ಅವಧಿ ಮುಗಿದರೂ ಎದುರುದಾರ ಸಂಘದವರು ದೂರುದಾರರಿಗೆ ಠೇವಣಿ ಹಣ ಅಥವಾ ಅದರ ಮೇಲೆ ಬಡ್ಡಿ ಕೊಟ್ಟಿರಲಿಲ್ಲ. ಉಳಿತಾಯ ಖಾತೆಯ ಹಣವನ್ನು ಪಡೆಯಲು ಅವರು ಅನುಮತಿಸಿರಲಿಲ್ಲ. ಈ ಬಗ್ಗೆ ಹಲವು ಬಾರಿ ಎದುರದಾರ ಸಂಘದವರಿಗೆ ದೂರುದಾರರು ವಿನಂತಿಸಿದರೂ ಏನೂ ಪ್ರಯೋಜನ ಆಗಿರಲಿಲ್ಲ. ಅಂತಹ ಎದುರುದಾರದೈವಜ್ಞ ಪತ್ತಿನ ಸಹಕಾರಿ ಸಂಘದ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತ ಹೇಳಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರರು ದಿ.29/05/2023 ರಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: Sevasindhu Application Guide; ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆಯಿರಿ

ಎದುರುದಾರ ದೈವಜ್ಞ ಪತ್ತಿನ ಸಹಕಾರಿ ಸಂಘದವರು ವಕೀಲರ ಮೂಲಕ ಹಾಜರಾಗಿ ತಮ್ಮ ಮೇಲಿನವರ ಸೂಚನೆಯಂತೆ ತಮ್ಮ ಸಂಘದಲ್ಲಿರುವ ಎಲ್ಲಾ ಸದಸ್ಯರ ಠೇವಣಿ ಮತ್ತು ಇತರೆ ಹಣವನ್ನು ಪಿ.ಎಮ್.ಸಿ. ಬ್ಯಾಂಕ್‍ನಲ್ಲಿ ಇಟ್ಟಿರುವುದಾಗಿ ಸದರಿ ಬ್ಯಾಂಕು ನಂತರ ಯುನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಲ್ಲಿ ವಿಲೀನವಾಗಿದೆ. ಹೀಗಾಗಿ ತಾವು ಇಟ್ಟಿರುವ ಹಣವನ್ನು ಸದರಿ ಬ್ಯಾಂಕಿನಿಂದ ವಾಪಸ್ಸು ಪಡೆದು ಗ್ರಾಹಕರಾದ ದೂರುದಾರರಿಗೆ ಹಿಂದಿರುಗಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ತಮ್ಮಿಂದ ಯಾವುದೇ ರೀತಿ ಸೇವಾ ನ್ಯೂನ್ಯತೆ ಆಗಿಲ್ಲ ಅಂತಾ ಎದುರುದಾರ ದೈವಜ್ಞ ಪತ್ತಿನ ಸಹಕಾರಿ ಸಂಘದವರು ಹೇಳಿ ದೂರನ್ನು ವಜಾ ಮಾಡುವಂತೆ ಕೋರಿದ್ದರು.

ಇದನ್ನೂ ಓದಿ: Kaatera Collections: ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿರುವ ದರ್ಶನ್ ಅಭಿನಯದ 'ಕಾಟೇರ'.. ನಾಲ್ಕು ದಿನದ ಕಲೆಕ್ಷನ್ ಎಷ್ಟು?

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ.ಭೂತೆ, ಸದಸ್ಯರುಗಳಾದ ವಿಶಾಲಾಕ್ಷಿ.ಅ. ಬೋಳಶೆಟ್ಟಿ ಹಾಗೂ ಪ್ರಭು ಸಿ. ಹಿರೇಮಠ ಅವರು ದೂರುದಾರರು ಮತ್ತು ಎದುರುದಾರ ಸಂಘದವರ ಮಧ್ಯೆ ಆಗಿರುವ ಒಪ್ಪಂದದಂತೆ ಬಡ್ಡಿ ಸಮೇತ ಠೇವಣಿ ಹಣವನ್ನು ಅವಧಿ ಮುಗಿದ ನಂತರ ವಾಪಸ್ಸು ಕೊಡುವುದು ಎದುರುದಾರರ ಸಂಘದವರ ಕರ್ತವ್ಯವಾಗಿದೆ. ಆದರೆ ದೂರುದಾರರ ಠೇವಣಿ ಹಣ ಹಿಂದಿರುಗಿಸದೇ ಇರುವುದು ಮತ್ತು ಅವರ ಉಳಿತಾಯ ಖಾತೆಯ ಹಣವನ್ನು ಪಡೆಯಲು ನಿರಾಕರಿಸಿರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದೆ. ತೀರ್ಪು ನೀಡಿದ 3 ತಿಂಗಳ ಒಳಗಾಗಿ ಯುನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನೊಂದಿಗೆ ವ್ಯವಹರಿಸಿ ದೂರುದಾರರ ಠೇವಣಿ ಹಣ ಮತ್ತು ಉಳಿತಾಯ ಖಾತೆಯ ಹಣ ರೂ.6,12,154/- ಮತ್ತು ಅದರ ಮೇಲೆ ಶೇ.8.05 ರಂತೆ ಬಡ್ಡಿ ಸಮೇತ ಲೆಕ್ಕ ಹಾಕಿ ಹಿಂದಿರುಗಿಸುವಂತೆ ಆಯೋಗ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ ರೂ.25,000/- ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ಅಂತಾ ರೂ.10,000/- ನೀಡುವಂತೆ ಎದುರುದಾರ ಧಾರವಾಡದ ದೈವಜ್ಞ ಪತ್ತಿನ ಸಹಕಾರಿ ಸಂಘಕ್ಕೆ ಆಯೋಗ ನಿರ್ದೇಶಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News