ಗುತ್ತಿಗೆದಾರರ ಬಿಲ್ ಪಾಸು ಮಾಡಲು ತೊಂದರೆ… ದೂರು ನೀಡಿದರೆ ತನಿಖೆ- ಮುಖ್ಯಮಂತ್ರಿ ಸಿದ್ದರಾಮಯ್ಯ

Chief Minister Siddaramaiah: ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಕೂಡ ಒಬ್ಬ ಟಿಕೆಟ್  ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.

Written by - Prashobh Devanahalli | Edited by - Bhavishya Shetty | Last Updated : Feb 3, 2024, 02:57 PM IST
    • ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸ್
    • ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು
    • ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಗುತ್ತಿಗೆದಾರರ ಬಿಲ್ ಪಾಸು ಮಾಡಲು ತೊಂದರೆ… ದೂರು ನೀಡಿದರೆ ತನಿಖೆ- ಮುಖ್ಯಮಂತ್ರಿ ಸಿದ್ದರಾಮಯ್ಯ title=
Chief Minister Siddaramaiah

ಬೆಂಗಳೂರು: ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ   10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. 

ಇದನ್ನೂ ಓದಿ:Daily GK Quiz: ಭಾರತದ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದವರು ಯಾರು?

ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ  ಅಂತಿಮಗೊಳಿಸಲಾಗುವುದು. ಸಮೀಕ್ಷೆ ನಡೆಯುತ್ತಿದೆ ಎಂದರು.  

ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಕೂಡ ಒಬ್ಬ ಟಿಕೆಟ್  ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.

ಬಾಗೂರು ಚನ್ನಕೇಶವ ದೇವಸ್ಥಾನದೊಳಗೆ  ಈಶ್ವರಾನಂದ ಸ್ವಾಮೀಜಿ ಅವರನ್ನು ಬಿಟ್ಟಿಲ್ಲ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿ. ಗೊತ್ತಿಲ್ಲದ ವಿಚಾರದ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡುವುದು ಎಂದರು.

ಇದನ್ನೂ ಓದಿ:  Shubman Gill: ಶುಭ್ಮನ್ ಗಿಲ್ ಸತತ ವೈಫಲ್ಯ! ಈತನಿಗೆ ಸ್ಥಾನ ನೀಡುವ ಎಚ್ಚರಿಕೆ ಕೊಟ್ಟ ರವಿಶಾಸ್ತ್ರಿ

 ಅಡ್ವಾಣಿಯವರಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಮಾತನಾಡಿ ಕೊಡಲಿ,  ಬೇಡ ಎಂದು ನಾವು ಹೇಳಿಲ್ಲ. ನಾನು ತುಮಕೂರು ಸಿದ್ಧಗಂಗಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News