ಶಿವಮೊಗ್ಗ: ನಾವು ಶ್ರೀರಾಮನ ಮಕ್ಕಳೇ. ಅದೇ ಸಂಸ್ಕೃತಿಯಲ್ಲಿ ಬೆಳೆದು ಬಂದವರು. ನಾನು ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ್, ರಮೇಶ್ ಕುಮಾರ್ ಎಂದು ಎಲ್ಲರೂ ಹೆಸರಿಟ್ಟುಕೊಂಡಿದ್ದೇವೆ. ನಮ್ಮದೂ ಹಿಂದುತ್ವವೇ, ಜೊತೆಗೆ ಮಾನವತ್ವವೂ ನಮ್ಮಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.


COMMERCIAL BREAK
SCROLL TO CONTINUE READING

ಜೈ ಶ್ರೀರಾಮ್(Jai Sriram), ಭಾರತ್​ ಮಾತಾ ಕೀ ಜೈ ಅಂದರೆ ಶಾಸಕ ಸಂಗಮೇಶ್​ ಹಾಗೂ ಅವರ ಮಕ್ಕಳಿಗೆ ಯಾಕೆ ಅಷ್ಟೊಂದು ಕೋಪ? ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರೆ​, ಅಲ್ಲಾಹು ಅಕ್ಬರ್ ಎಂದಿದ್ದರೆ ಅವರಿಗೆ ಸಮಾಧಾನ ಆಗುತ್ತಿತ್ತೇನೋ? ಎಂದು ಪ್ರಶ್ನಿಸಿದ್ದರು.


ಸೆಕ್ಸ್‌ CD ಪ್ರಕರಣ: ಕೊನೆಗೂ ದೂರು ದಾಖಲಿಸಿದ ರಮೇಶ್ ಜಾರಕಿಹೊಳಿ!


ಈ ಬಗ್ಗೆ ಇಂದು ಶಿವಮೊಗ್ಗದ ಕಾಂಗ್ರೆಸ್ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್(DK Shivakumar), ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರ ಹಾಗೂ ಅಧಿಕಾರಿಗಳನ್ನು ಬಳಸಿಕೊಂಡು ಕೇಸ್ ಹಾಕುತ್ತಿದೆ. ಇದನ್ನು ವಿರೋಧಿಸಿ, ನಾವು ಎಲ್ಲರೂ ಇಲ್ಲಿಗೆ ಬಂದಿದ್ದೇವೆ. ಪ್ರತಿಯೊಬ್ಬ ಕಾರ್ಯಕರ್ತರ ರಕ್ಷಣೆಗೆ ಕಾಂಗ್ರೆಸ್ ಪಕ್ಷದ ಇದೆ. ಇದೇ ಸಂದೇಶ ಕೊಡಲು ನಾವು ಶಿವಮೊಗ್ಗಕ್ಕೆ ಬಂದಿದ್ದೇವೆ ಎಂದರು.


By Election: ರಂಗೇರಿದ ಉಪಚುನಾವಣೆ ಕಣ: ಮಸ್ಕಿಗೆ ಚುನಾವಣಾಧಿಕಾರಿ ನೇಮಕ!


ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಾಂಗ್ರೆಸ್(Congress) ಶಾಸಕ ಸಂಗಮೇಶ್ ಪುತ್ರ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ಇದು ರಾಜ್ಯ ನಾಯಕರ ನಡುವೆ ರಾಜಕೀಯ ಆರೋಪ-ಪ್ರತ್ಯಾರೋಪಗಳು ಮಾಡಲಾಗುತ್ತಿದೆ.


ರೈತರಿಗೆ ಸರ್ಕಾರಿದಿಂದ ಸಿಹಿ ಸುದ್ದಿ: KIADBಗೆ ಭೂಮಿ ಕೊಟ್ಟವರಿಗೆ ಪರಿಹಾರ ಹೆಚ್ಚಳ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.