ಕುಮಾರಸ್ವಾಮಿ ಏನ್‌ ಮಾತಾಡ್ತಾರೆ ಅಂತ ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿ ವ್ಯಂಗ್ಯ

ಕುಮಾರಸ್ವಾಮಿ ತಮ್ಮ ಬಳಿ 7 ಸಚಿವರ ಅಕ್ರಮಗಳ ಬಗ್ಗೆ ದಾಖಲೆಗಳಿವೆ ಎಂದು ಹೇಳುತ್ತಿದ್ದಾರೆ ಎಂದು ಕೇಳಿದಾಗ, ಅವರ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಚಂದ್ರಶೇಖರ್ ಅವರನ್ನು ನಾನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Krishna N K | Last Updated : Sep 29, 2024, 06:00 PM IST
    • ಕುಮಾರಸ್ವಾಮಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ.
    • ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ
    • ಚಂದ್ರಶೇಖರ್ ಅವರನ್ನು ನಾನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ,
ಕುಮಾರಸ್ವಾಮಿ ಏನ್‌ ಮಾತಾಡ್ತಾರೆ ಅಂತ ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿ ವ್ಯಂಗ್ಯ title=

ಬೆಂಗಳೂರು : ಕುಮಾರಸ್ವಾಮಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ. ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.

ಲೋಕಾಯುಕ್ತ ಎಸ್ ಐಟಿ ಎಡಿಜಿಪಿ ಚಂದ್ರಶೇಖರ್ ಅವರ ಬಗ್ಗೆ ತಮಗೆ ತಿಳಿದಿದೆ, ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂದು ಕುಮಾರಸ್ವಾಮಿ ಅವರು ಮಾಡಿರುವ ಆರೋಪದ ಬಗ್ಗೆ ಮಾಧ್ಯಮಗಳು ನೆಲಮಂಗಲದಲ್ಲಿ ಭಾನುವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಭಾರತಕ್ಕೆ ಸಿಕ್ರಿಟ್‌ ಆಗಿ ಎಂಟ್ರಿ ಕೊಟ್ಟಿದ್ದ ಪೋರ್ನ್‌ ಸ್ಟಾರ್‌ ರಿಯಾ ಬಂಧನ..!

ನಾನು ನಿನ್ನೆ ಊರಿನಲ್ಲೇ ಇರಲಿಲ್ಲ. ಸಾತನೂರು, ಕನಕಪುರದಲ್ಲಿ ಕ್ಷೇತ್ರದ ಕೆಲಸ ಕಸಂಬಂಧ ಪ್ರವಾಸ ಕೈಗೊಂಡಿದ್ದೆ. ಕುಮಾರಸ್ವಾಮಿ ಅವರು ಕೆಪಿಸಿಸಿ ನೆನೆಸಿಕೊಂಡರೆ ನಾನು ಏನು ತಾನೇ ಮಾತನಾಡಲು ಸಾಧ್ಯ ಎಂದು ಮರುಪ್ರಶ್ನಿಸಿದರು.

ಕುಮಾರಸ್ವಾಮಿ ತಮ್ಮ ಬಳಿ 7 ಸಚಿವರ ಅಕ್ರಮಗಳ ಬಗ್ಗೆ ದಾಖಲೆಗಳಿವೆ ಎಂದು ಹೇಳುತ್ತಿದ್ದಾರೆ ಎಂದು ಕೇಳಿದಾಗ, ಅವರ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಚಂದ್ರಶೇಖರ್ ಅವರನ್ನು ನಾನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ, ನನಗೆ ಅವರು ಸಿಕ್ಕಿಲ್ಲ, ನನಗೆ ಅವರು ಗೊತ್ತೇ ಇಲ್ಲ ಎಂದರು.

ಇದನ್ನೂ ಓದಿ: ತೂಕವನ್ನು ವೇಗವಾಗಿ ಕಳೆದುಕೊಳ್ಳಬೇಕೆ..? ಈ ಸಮಯದಲ್ಲಿ ಪಾನಿಪುರಿ ತಿನ್ನಬೇಡಿ ಗರ್ಲ್ಸ್‌.. 

ಎಲ್ಲ ಯಶಸ್ಸು ಶ್ರೀನಿವಾಸ್ ಗೆ ಸಲ್ಲಬೇಕು : ನೆಲಮಂಗಲ ಅಭಿವೃದ್ಧಿ ವಿಚಾರದ ಬಗ್ಗೆ ಕೇಳಿದಾಗ, ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಅವರು ನೆಲಮಂಗಲವನ್ನು ಬೆಂಗಳೂರಂತೆ ಅಭಿವೃದ್ಧಿಪಡಿಸಬೇಕು ಎಂದು ಶ್ರಮ ಪಡುತ್ತಿದ್ದಾರೆ. ಇಲ್ಲಿನ ಸಂಸದರಾದ ಸುಧಾಕರ್ ಅವರು ತಮ್ಮ ಹೆಸರೂ ಇದರ ಜತೆ ಸೇರಿಕೊಳ್ಳಲಿ ಎಂದು ಏನೇನೋ ಮಾಡುತ್ತಿದ್ದಾರೆ. ಆದರೆ ಇಲ್ಲಿ ಏನೇ ಅಭಿವೃದ್ಧಿ ಕೆಲಸವಾದರೂ ಅದರ ಎಲ್ಲಾ ಯಶಸ್ಸು ಶ್ರೀನಿವಾಸ್ ಅವರಿಗೇ ಸಲ್ಲಬೇಕು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News