"ಇಂಡಿಯಾ"ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ..!

ನಾವು ಬಿಜೆಪಿಯವರಂತೆ ಮಾತು ತಪ್ಪುವವರಲ್ಲ, ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Krishna N K | Last Updated : Aug 2, 2023, 10:54 PM IST
  • ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ.
  • ನಾವು ಬಿಜೆಪಿಯವರಂತೆ ಮಾತು ತಪ್ಪುವವರಲ್ಲ, ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ.
  • ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆ.
"ಇಂಡಿಯಾ"ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ..! title=

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕದ ಕಾಂಗ್ರೆಸ್ ನಾಯಕರ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ನಾವು ಬಿಜೆಪಿಯವರಂತೆ ಮಾತು ತಪ್ಪುವವರಲ್ಲ, ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಇಡೀ ದೇಶಕ್ಕೆ ಕರ್ನಾಟಕ ಮಾದರಿಯನ್ನು ಹುಟ್ಟು ಹಾಕಿದ್ದೇವೆ ಎಂದರು.

ಇದನ್ನೂ ಓದಿ: ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೆ ಹೆದರ್ತಿದ್ದ: ಹಣೆಬರಹದಲ್ಲಿ ಬರೆದಿತ್ತು ಸಿಎಂ ಆಗ್ಬಿಟ್ಟ!

ಅಲ್ಲದೆ, ಮಾನ್ಯ ಪ್ರಧಾನಿಗಳು ಮಾತನಾಡುತ್ತಾ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ದಿವಾಳಿಯಾಗಲಿದೆ ಎಂದು ಹೇಳಿದ್ದಾರೆ. ರಾಜ್ಯದ ಆರ್ಥಿಕತೆಗೆ ಏನೂ ಆಗಿವುದಿಲ್ಲ, ಸಿದ್ದರಾಮಯ್ಯ ಅವರು ನೀಡಿರುವ ಅತ್ಯುತ್ತಮ ಬಜೆಟ್ ಕರ್ನಾಟಕವನ್ನು ಎಂದಿಗೂ ದಿವಾಳಿ ಮಾಡುವುದಿಲ್ಲ. "ಇಂಡಿಯಾ" ಕರ್ನಾಟಕದಲ್ಲಿ ಜನ್ಮ ಪಡೆದಿದೆ. ನಾವು ಒಗ್ಗಟ್ಟಾಗಿ ಇದ್ದೇವೆ, ಹಾಗೂ ಸಾಮೂಹಿಕವಾಗಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದರು.

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗೆಲುವು ಖಂಡಿತ ಎನ್ನುವ ಸಂದೇಶವನ್ನು ಈಗಾಗಲೇ ನೀಡಿದ್ದೇವೆ. ಕರ್ನಾಟಕ ಮಾದರಿಯ ಗೆಲುವು ನಮ್ಮ ಉತ್ಸಾಹ ಇಮ್ಮಡಿಗೊಳಿಸಿದೆ, ಇದರಂತೆ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವ ಕುರಿತು ಸಭೆಯಲ್ಲಿ 50 ನಾಯಕರ ಉಪಸ್ಥಿತಿಯಲ್ಲಿ ಚರ್ಚೆ ನಡೆಸಲಾಯಿತು.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ತನ್ನ ಪಟಾಲಂ ಸಾಕಲು ಧನಸಂಗ್ರಹಿಸುತ್ತಿರುವ ಕಾಂಗ್ರೆಸ್: ಬಿಜೆಪಿ ಆರೋಪ

ನಾವು ಚುನಾವಣೆಗು ಮುಂಚೆ ನೀಡಿದ 5 ಗ್ಯಾರಂಟಿಗಳಲ್ಲಿ ಈಗಾಗಲೇ 4 ಗ್ಯಾರಂಟಿಗಳನ್ನು ಈಡೇರಿಸಿದ್ದು, ಅಭೂತಪೂರ್ವ ಯಶಸ್ಸು ಕಂಡಿವೆ. ಪ್ರತಿದಿನ 15 ಲಕ್ಷ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆಯುತ್ತಿದ್ದಾರೆ, 10 ಕೆ.ಜಿ ಅಕ್ಕಿ ಯೋಜನೆ ಜಾರಿ ಆಗಿದೆ. ಆಗಸ್ಟ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಹಾಗೂ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರಲಿದೆ. ಕರ್ನಾಟಕ ಮಾದರಿಯನ್ನು ಜನತೆಗೆ ನೀಡಿ ನಾವು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ. ಈ ಗೆಲುವಿಗೆ ಕಾರಣರಾದ ಎಲ್ಲರಿಗೂ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಲಾಯಿತು ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News