ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ 'ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ಎಂದು ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದೇ ವೇಳೆ ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ 'ಅಗ್ನಿಪಥ್' ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ, ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.


ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ? 


ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?ಎಂದು ಅವರು ಪ್ರಶ್ನಿಸಿದ್ದಾರೆ.‘ವಿಕ್ರಾಂತ್ ರೋಣ’ಗೆ ಸಲ್ಮಾನ್ ಸಾಥ್ : ಬಾಲಿವುಡ್ ಅಂಗಳದಲ್ಲಿ ಕಿಚ್ಚನ ಹವಾ!


ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ಎಂದು ತಿಳಿ ಹೇಳಿದ್ದಾರೆ.


ಹೊಸಸೇನಾ ನೇಮಕಾಗಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ ಎಂದಿದ್ದಾರೆ.


ಪ್ರೀತಿ, ಕಂಬನಿ, ಭಾವನೆಗಳ ಬೆಲೆ ಹೇಳಲಿದ್ದಾನೆ ನಮ್ಮ 'ಚಾರ್ಲಿ'..!


ಎಚ್ಚೆತ್ತುಕೊಳ್ಳಲು ಇದು ಸಕಾಲ..!


ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.