ಕರ್ನಾಟಕದ ಸುರಕ್ಷತೆಗೆ ಡಬಲ್ ಎಂಜಿನ್ ಸರ್ಕಾರ ಅಸ್ತಿತ್ವದಲ್ಲಿರಬೇಕು: ಅಮಿತ್ ಶಾ

ನೀವು ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಮತ ಹಾಕಿದಂತೆ. ಬಿಜೆಪಿಗೆ ಮತ ಹಾಕಿದರೆ ನವಭಾರತ, ನವ ಕರ್ನಾಟಕ ನಿರ್ಮಾಣಕ್ಕಾಗಿ ಮತ ಚಲಾಯಿಸಿದಂತೆ’ ಎಂದು ಅಮಿತ್ ಶಾ ಹೇಳಿದ್ದಾರೆ.

Written by - Puttaraj K Alur | Last Updated : Feb 11, 2023, 09:58 PM IST
  • ಕರ್ನಾಟಕದ ಸುರಕ್ಷತೆಗೆ ಡಬಲ್ ಎಂಜಿನ್ ಸರ್ಕಾರ ಅಸ್ತಿತ್ವದಲ್ಲಿರಬೇಕು
  • ಮಂಗಳೂರು ಬಂದರು ಅಭಿವೃದ್ಧಿಗೆ 2.5 ಸಾವಿರ ಕೋಟಿ ವೆಚ್ಚದ 5 ಯೋಜನೆ
  • ನೀವು ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಮತ ಹಾಕಿದಂತೆ ಎಂದ ಅಮಿತ್ ಶಾ
ಕರ್ನಾಟಕದ ಸುರಕ್ಷತೆಗೆ ಡಬಲ್ ಎಂಜಿನ್ ಸರ್ಕಾರ ಅಸ್ತಿತ್ವದಲ್ಲಿರಬೇಕು: ಅಮಿತ್ ಶಾ title=
ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬೆಂಗಳೂರು: ಕರ್ನಾಟಕದ ಸುರಕ್ಷತೆಗೆ ಡಬಲ್ ಎಂಜಿನ್ ಸರ್ಕಾರ ಅಸ್ತಿತ್ವದಲ್ಲಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕರ್ನಾಟಕ ಪ್ರವಾಸದಲ್ಲಿರುವ ಅಮಿತ್ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ಟ್ವೀಟ್ ಮಾಡಿದೆ.

‘ಭಯೋತ್ಪಾದಕ ಸಂಘಟನೆ ಪಿಎಫ್ಐ ಮೇಲಿದ್ದ 1,700 ಪ್ರಕರಣಗಳನ್ನು ಕಾಂಗ್ರೆಸ್ ಹಿಂತೆಗೆದುಕೊಂಡಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಪ್ರಧಾನಿ ಮೋದಿಯವರು ಪಿಎಫ್ಐ ಸಂಘಟನೆಯನ್ನೇ ನಿಷೇಧ ಮಾಡಿದರು’ ಎಂದು ಕಾಂಗ್ರೆಸ್ ವಿರುದ್ಧ ಅಮಿತ್ ಶಾ ಗುಡುಗಿದ್ದಾರೆ.

ಇದನ್ನೂ ಓದಿ: “ಮಂಡ್ಯಕ್ಕೆ ದೇಶ ಬದಲಾವಣೆ ಮಾಡುವ ಶಕ್ತಿ ಇದೆ”

‘ಮಂಗಳೂರು ಬಂದರಿನ ಅಭಿವೃದ್ಧಿಗೆ ನಾವು ಪಣ ತೊಟ್ಟಿದ್ದೇವೆ. 2.5 ಸಾವಿರ ಕೋಟಿ ರೂ. ವೆಚ್ಚದ 5 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. ಹಾಗಾಗಿ ನೀವು ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಮತ ಹಾಕಿದಂತೆ. ಬಿಜೆಪಿಗೆ ಮತ ಹಾಕಿದರೆ ನವಭಾರತ, ನವ ಕರ್ನಾಟಕ ನಿರ್ಮಾಣಕ್ಕಾಗಿ ಮತ ಚಲಾಯಿಸಿದಂತೆ’ ಎಂದು ಅಮಿತ್ ಶಾ ಹೇಳಿದ್ದಾರೆ.

‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಕರ್ನಾಟಕಕ್ಕೆ ಬಲ ಬಂದಿದೆ. ಗಣನೀಯವಾಗಿ ಅಭಿವೃದ್ಧಿ ಸಾಧಿಸಿದೆ. ಈ ನಾಡಿನ ಕೃಷಿಕರ ಬದುಕನ್ನು ಹಸನು ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೈಗೊಂಡ ಉಪಕ್ರಮಗಳನ್ನು ಇಡೀ ದೇಶವೇ ಸ್ಮರಿಸುತ್ತಿದೆ’ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: 50% ಡಿಸ್ಕೌಂಟ್ ನಲ್ಲಿ ಮುಗಿಬಿದ್ದು ದಂಡ ಕಟ್ಟಿದ ವಾಹನ ಚಾಲಕರು..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News