)
Rain Holiday :ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಅಲ್ಲಲ್ಲಿ ನೀರು ನಿಂತು ಸಮಸ್ಯೆ ಎದುರಾಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿವೆ.
ಧಾರವಾಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಅಂದರೆ ಆಗಸ್ಟ್ 20 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಮಕ್ಕಳಿಗೆ ಯಾವುದೇ ಹಾನಿಯಾಗದಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.
ಈ ಆಗಸ್ಟ್ 20ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ತರಗತಿ ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ಆದೇಶದಲ್ಲಿ ನಿರ್ದೇಶಿಸಲಾಗಿದೆ.
ಇದನ್ನೂ ಓದಿ : ಇಂದು ವಿಶೇಷ ಸಚಿವ ಸಂಪುಟ ಸಭೆ ಕರೆದ ಸಿಎಂ