ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಎಲ್ಲಾ ಭಾಗ್ಯಗಳನ್ನೂ ಕೊಟ್ಟಿದೆ. ಅದೇ ರೀತಿ ಕಾಂಟ್ರ್ಯಾಕ್ಟರ್ ಭಾಗ್ಯವನ್ನೂ ನೀಡಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಆಗ್ರಹಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಾದ್ಯಂತ 25 ಸಾವಿರ ಕೋಟಿ ರೂ. ಬಾಕಿ ಉಳಿದಿದೆ’ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕಳೆದ 7 ತಿಂಗಳಿನಿಂದ ಗುತ್ತಿಗೆದಾರರ ಬಾಕಿ ಬಿಡುಗಡೆಯಾಗಿಲ್ಲ. ಚುನಾವಣೆ ಮತ್ತು ನೀತಿ ಸಂಹಿತೆ ಕಾರಣದಿಂದ ಬಾಕಿ ಮೊತ್ತ ಬಿಡುಗಡೆಯಾಗಿಲ್ಲ. ಚುನಾವಣೆ ಮುಗಿದು ಹೊಸ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 20ಕ್ಕೆ  3 ತಿಂಗಳಾಗಿದೆ. ಕಮಿಷನ್ ಬೇಡಿಕೆ ಬಗ್ಗೆ ನನಗೆ ಗೊತ್ತಿಲ್ಲ. ಆಗಸ್ಟ್  31ರೊಳಗೆ ಗುತ್ತಿಗೆದಾರರ ಬಾಕಿ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.


ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು 3 ತಿಂಗಳಲ್ಲಿ 2 ಬಾರಿ ಭೇಟಿಯಾಗಿದ್ದೇವೆ. ಆದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೂ ಮನವಿ ಸಲ್ಲಿಸಿದ್ದೇವೆ. ಮುಂದಿನ ವಾರ ಅಂತಾ ಎಲ್ಲರೂ ಸಬೂಬು ಹೇಳ್ತಿದ್ದಾರೆ. ಆಗಸ್ಟ್ 31ರ ವೇಳೆಗೆ ಹಣ ಬಿಡುಗಡೆ ಆಗಬೇಕು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಆಗಸ್ಟ್ 27ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ


ರಾಜ್ಯ ಸರ್ಕಾರ ಈಗಾಗಲೇ ಜೂನ್ 28 ಹಾಗೂ ಜುಲೈ 30ರಂದು ಬಾಕಿ ಮೊತ್ತ ಬಿಡುಗಡೆಗೆ ಆದೇಶ ಹೊರಡಿಸಿದೆ. ಆದರೂ ಈವರೆಗೂ ಯಾವುದೇ ಹಣ ಬಿಡುಗಡೆಯಾಗಿಲ್ಲ. ಜಿಲ್ಲಾ ಸಂಘಗಳಿಂದಲೂ ಈಗಾಗಲೇ ಸಚಿವರಿಗೆ ಮನವಿ ಮಾಡಲಾಗಿದೆ. ಹೀಗಾಗಿ ಆಗಸ್ಟ್‌‌ 31ರೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು. ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಬಿಬಿಎಂಪಿ, ಈ ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಸಂಸ್ಥೆಗಳಿಂದ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗುವುದು ಬಾಕಿ ಇದೆ ಎಂದು ಕೆಂಪಣ್ಣ ಹೇಳಿದ್ದಾರೆ.


ಸಾಲ ಮಾಡಿ ಕೋಟಿ ಕೋಟಿ ಕಾಮಗಾರಿ ಮಾಡಿದ್ದೇವೆ. ಮನೆ, ಚಿನ್ನ, ನಿವೇಶನ ಪತ್ರ ಅಡವಿಟ್ಟು ಕಾಮಗಾರಿ ಮಾಡಲಾಗಿದೆ. ಕೆಲ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಅಂತಲೇ ಹಣ ಮೀಸಲಿಡಲಾಗಿದೆ. ಸರ್ಕಾರ ಬಿಬಿಎಂಪಿಗೆ 657 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಆದ್ರೆ ಬಿಬಿಎಂಪಿ ಆಯುಕ್ತರು ಸರ್ಕಾರದಿಂದ ಆದೇಶ ಬಂದಿಲ್ಲವೆಂದು ಸಬೂಬು ಹೇಳ್ತಿದ್ದಾರೆ. ಅಲ್ಪಸ್ವಲ್ಪ ಹಣ ಬಿಡುಗಡೆ ಮಾಡಿದ್ದಾರೆ. ನೀವು ಎಲ್ಲಾ ಭಾಗ್ಯವನ್ನು ಕೊಟ್ಡಿದ್ದೀರಿ, ಕಾಂಟ್ರ್ಯಾಕ್ಟರ್ ಭಾಗ್ಯವನ್ನೂ ನಮಗೆ ಕೊಡಿ ಅಂತಾ ಸಿಎಂ ಮತ್ತು ಡಿಸಿಎಂ ಬಳಿ ಕೇಳಿಕೊಂಡಿದ್ದೀವಿ ಎಂದು ಕೆಂಪಣ್ಣ ಹೇಳಿದ್ದಾರೆ.  


ಇದನ್ನೂ ಓದಿ: bbmp ಗುತ್ತಿಗೆದಾರರಿಂದ ಕಮಿಷನ್ ಆರೋಪ ವಿಚಾರ


ಕಳೆದ 3 ತಿಂಗಳಿಂದ ಯಾವುದೇ ಕಂಪ್ಲೇಟ್ ಇಲ್ಲ. ನಮಗೆ ಯಾವ ಗುತ್ತಿಗೆದಾರರ ಬಂದು ಇಷ್ಟು ಪರ್ಸೆಂಟ್ ಅಂತಾ ದೂರು ಕೊಟ್ಟಿಲ್ಲ. ಥರ್ಡ್ ಪಾರ್ಟಿಯವರು ಕಮಿಷನ್ ಕೇಳಿದ್ರೆ ಅದು ನಮಗೆ ಸಂಬಂಧ ಇಲ್ಲ. ಈ ಸರ್ಕಾರದ ಯಾವ ಸಚಿವರೂ ಕಮಿಷನ್ ಕೇಳಿಲ್ಲವೆಂದು ಕೆಂಪಣ್ಣ ಅವರು ಕಾಂಗ್ರೆಸ್ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.