'SSLC, PUC ವಿದ್ಯಾರ್ಥಿಗಳಿಗೆ 'ಗುಡ್ ನ್ಯೂಸ್' ನೀಡಿದ ಸಚಿವ ಸುರೇಶ್ ಕುಮಾರ್!

ಎಸ್ಸೆಸ್ಸೆಲ್ಸಿ ಮತ್ತು ಎರಡನೇ ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ಹೊರೆಯಾಗದಂತೆ, ಯಾವುದೇ ಒತ್ತಡ ಅವರ ಮೇಲೆ ಬೀಳದಂತೆ, ಆದರೆ ಅವರ ಕಲಿಕೆಗೆ ಲೋಪವಾಗದಂತೆ ಸಿಲಬಸ್ (Syllabus) ಅನ್ನು ರಚಿಸಿ ಇನ್ನು ಒಂದು ವಾರದ ಒಳಗೆ ಪ್ರಕಟ

Last Updated : Dec 20, 2020, 06:48 PM IST
  • ಎಸ್ಸೆಸ್ಸೆಲ್ಸಿ ಪರೀಕ್ಷಾ ಸಂದರ್ಭದಲ್ಲಿ ಆ ನಮ್ಮ ವಿದ್ಯಾರ್ಥಿಗಳು ನಡೆದುಕೊಂಡ ರೀತಿ ಇಡೀ ರಾಜ್ಯಕ್ಕೇ ಮಾದರಿಯಾಗಿತ್ತು. ಅದೇ ರೀತಿ ಈಗ ನಮ್ಮ ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ವರ್ತಿಸುವ ಅಗತ್ಯವಿದೆ.
  • ಎಸೆಸೆಲ್ಸಿ ಮತ್ತು ಎರಡನೇ ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ಹೊರೆಯಾಗದಂತೆ, ಯಾವುದೇ ಒತ್ತಡ ಅವರ ಮೇಲೆ ಬೀಳದಂತೆ, ಆದರೆ ಅವರ ಕಲಿಕೆಗೆ ಲೋಪವಾಗದಂತೆ ಸಿಲಬಸ್ (Syllabus) ಅನ್ನು ರಚಿಸಿ ಇನ್ನು ಒಂದು ವಾರದ ಒಳಗೆ ಪ್ರಕಟ
  • ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯವನ್ನು ಒಮ್ಮೆ ಯೋಚಿಸಿ ಶಾಲೆಗಳಿಗೆ ಮಕ್ಕಳನ್ನು ಕಳಿಸಬೇಕೆಂದು ನನ್ನ ಆಗ್ರಹ
'SSLC, PUC ವಿದ್ಯಾರ್ಥಿಗಳಿಗೆ 'ಗುಡ್ ನ್ಯೂಸ್' ನೀಡಿದ ಸಚಿವ ಸುರೇಶ್ ಕುಮಾರ್! title=

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ ಸಂದರ್ಭದಲ್ಲಿ ಆ ನಮ್ಮ ವಿದ್ಯಾರ್ಥಿಗಳು ನಡೆದುಕೊಂಡ ರೀತಿ ಇಡೀ ರಾಜ್ಯಕ್ಕೇ ಮಾದರಿಯಾಗಿತ್ತು. ಅದೇ ರೀತಿ ಈಗ ನಮ್ಮ ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ವರ್ತಿಸುವ ಅಗತ್ಯವಿದೆ. ಎಸೆಸೆಲ್ಸಿ ಮತ್ತು ಎರಡನೇ ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ಹೊರೆಯಾಗದಂತೆ, ಯಾವುದೇ ಒತ್ತಡ ಅವರ ಮೇಲೆ ಬೀಳದಂತೆ, ಆದರೆ ಅವರ ಕಲಿಕೆಗೆ ಲೋಪವಾಗದಂತೆ ಸಿಲಬಸ್ (Syllabus) ಅನ್ನು ರಚಿಸಿ ಇನ್ನು ಒಂದು ವಾರದ ಒಳಗೆ ಪ್ರಕಟ ಮಾಡಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಇದು ಅತ್ಯಂತ ಸದುದ್ದೇಶದಿಂದ ಮತ್ತು ಸದ್ಭಾವನೆಯಿಂದ ಕೈಗೊಂಡಿರುವ, ಹಾಗೂ ಅತಿ ಅಗತ್ಯ ವಿದ್ದ ನಿರ್ಣಯ. ಈ ಕಾರ್ಯ ಯಶಸ್ವಿಯಾಗಬೇಕೆಂದರೆ ಪೋಷಕರ, ಶಾಲಾ ಅಭಿವೃದ್ಧಿ ಸಮಿತಿ ಗಳ ಮತ್ತು ಶಿಕ್ಷಕರ ಸಮನ್ವಯ ಮತ್ತು ಪೂರ್ಣ ಸಹಕಾರ ಅಗತ್ಯ. ಪೋಷಕರು ತಮ್ಮ ಮಕ್ಕಳ(Children's) ಮುಂದಿನ ಭವಿಷ್ಯವನ್ನು ಒಮ್ಮೆ ಯೋಚಿಸಿ ಶಾಲೆಗಳಿಗೆ ಮಕ್ಕಳನ್ನು ಕಳಿಸಬೇಕೆಂದು ನನ್ನ ಆಗ್ರಹಿದ್ದಾರೆ.

೧.೧.೨೦೨೧ ರಿಂದ ರಾಜ್ಯದಲ್ಲಿ #ಶಾಲೆಗಳು ಹಾಗೂ #ವಿದ್ಯಾಗಮ ಕಾರ್ಯಕ್ರಮ #ಪ್ರಾರಂಭವಾಗುವ #ಕುರಿತು_ನನ್ನ_ಈ_ಕೆಲವು_ಅನಿಸಿಕೆಗಳು. ಮತ್ತು...

Posted by Suresh Kumar S on Saturday, December 19, 2020

ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆಯಾದ್ರೆ ಪಕ್ಷ ತೊರೆಯುತ್ತೇನೆ'

2020ರ ಎಸೆಸೆಲ್ಸಿ ಪರೀಕ್ಷೆಯ ಪರೀಕ್ಷಾ ಕೇಂದ್ರಗಳಿಂದ ಹೇಗೆ ಸೋಂಕು ಹರಡದಂತೆ ನೋಡಿಕೊಂಡಿದ್ದೆವೋ, ಅದೇ ರೀತಿ ಈಗ ಶಾಲೆಗಳಿಂದ ಸೋಂಕು ಬರದಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಇದಕ್ಕಾಗಿ ಸರ್ಕಾರದ ವಿವಿಧ ಇಲಾಖೆಗಳ ಸಹಕಾರ ನಮಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ಸಂದರ್ಭದಲ್ಲಿ ಆ ನಮ್ಮ ವಿದ್ಯಾರ್ಥಿಗಳು ನಡೆದುಕೊಂಡ ರೀತಿ ಇಡೀ ರಾಜ್ಯಕ್ಕೇ ಮಾದರಿಯಾಗಿತ್ತು. ಅದೇ ರೀತಿ ಈಗ ನಮ್ಮ ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ವರ್ತಿಸುವ ಅಗತ್ಯವಿದೆ. ಎಸೆಸೆಲ್ಸಿ ಮತ್ತು ಎರಡನೇ ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ಹೊರೆಯಾಗದಂತೆ, ಯಾವುದೇ ಒತ್ತಡ ಅವರ ಮೇಲೆ ಬೀಳದಂತೆ, ಆದರೆ ಅವರ ಕಲಿಕೆಗೆ ಲೋಪವಾಗದಂತೆ ಪಠ್ಯ (Syllabus) ವನ್ನು ರಚಿಸಿ ಇನ್ನು ಒಂದು ವಾರದ ಒಳಗೆ ಪ್ರಕಟ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

Voter ID Lis t: ಗ್ರಾ. ಪಂ. ಚುನಾವಣೆ: ನಿಮ್ಮೂರಿನ ವೋಟರ್ ಲಿಸ್ಟ್ ನೋಡೋದು ಹೇಗೆ ಗೊತ್ತಾ?

ಶಾಲೆಗಳನ್ನು ಆರಂಭಿಸುತ್ತಿರುವುದು ಒಂದು ದೊಡ್ಡ ಸವಾಲು. ಕಳೆದ ಜೂನ್ - ಜುಲೈ ತಿಂಗಳುಗಳಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆಗಳೂ ಒಂದು ದೊಡ್ಡ ಸವಾಲಾಗಿದ್ದವು. ಆದರೆ ಆಗ ನಮ್ಮ ಎಲ್ಲ ಜನಪ್ರತಿನಿಧಿಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ನೀಡಿದ ಸಹಕಾರದಿಂದ ದೊಡ್ಡ ಸವಾಲನ್ನು ಎದುರಿಸಲು ಸಾಧ್ಯವಾಯಿತು. ಅದೇ ರೀತಿ ಈಗಿನ ಶಾಲೆಗಳನ್ನು ನಡೆಸುವ ಸವಾಲನ್ನೂ ಸಹ ಯಶಸ್ವಿಯಾಗಿ ಎದುರಿಸಲು ಜನಪ್ರತಿನಿಧಿಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ಎಲ್ಲಾ ಸಹಕಾರ ನೀಡುತ್ತಾರೆಂಬುದು ನನ್ನ ನಂಬಿಕೆ ಎಂದಿದ್ದಾರೆ.

ಖಾಸಗಿ ಶಾಲಾ ವಿದ್ಯಾರ್ಥಿಗಳಿಗೊಂದು 'ಶಾಕಿಂಗ್ ನ್ಯೂಸ್'..!

ಎಸೆಸೆಲ್ಸಿ ಪರೀಕ್ಷೆಗಳು ನಡೆದಾಗ ನಾಡಿನ ಎಲ್ಲಾ ಪತ್ರಿಕೆಗಳು ಹಾಗೂ ಸುದ್ದಿ ಚಾನೆಲ್ ಗಳು ನೀಡಿದ ಬೆಂಬಲ ಮರೆಯುವಂತಿಲ್ಲ. ನಮ್ಮ ಮಕ್ಕಳ ಆರೋಗ್ಯ ಹಾಗೂ ಅವರ ಶೈಕ್ಷಣಿಕ ಭವಿಷ್ಯ ಎರಡನ್ನು ಜೊತೆಜೊತೆಯಾಗಿ ಇಂದು ಜೋಪಾನವಾಗಿ ಗಮನಿಸಿ ಅಗತ್ಯ ವ್ಯವಸ್ಥೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಈ ಕಾರ್ಯ ಯಶಸ್ವಿಯಾಗಲು ಎಲ್ಲರ ಸಹಕಾರ ಸಹಾಯ ಕೋರುತ್ತೇನೆ ಎಂದು ಹೇಳಿದ್ದಾರೆ.

ಈ ಸಾಲಿನಲ್ಲಿ ರಾಜ್ಯಕ್ಕೆ 2000 ಕಿ.ಮೀ.ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಲು ತಾತ್ವಿಕ ಒಪ್ಪಿಗೆ'

Trending News