ಕಲಬುರ್ಗಿ: ಅತಿ ಹೆಚ್ಚು ಬಡವರು, ಗುಳೆ ಹೋಗುವವರು ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚಾಗಿದ್ದಾರೆ. ಹೀಗಾಗಿ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಗೋವಿಂದ  ಎಂ‌ ಕಾರಜೋಳ (Govind M Karajola) ಹೇಳಿದರು.


COMMERCIAL BREAK
SCROLL TO CONTINUE READING

ಕಲಬುರಗಿಯಲ್ಲಿ ಇಂದು ನಡೆದ ಕಲ್ಯಾಣ ಕರ್ನಾಟಕ (Kalyana Karnataka) ಉತ್ಸವದಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ಹಿಂದಿನ ಅವಧಿಯಲ್ಲಿ ಕಲಬುರ್ಗಿಯಲ್ಲಿ ಸಂಪುಟ ಸಭೆ ನಡೆಸಿ ಈ ಭಾಗದ ಯೋಜನೆಗಳಿಗೆ ಅನುದಾನ ನೀಡಿದ್ದರು. ಗುಲಾಮಗಿರಿಯ ಸಂಕೇತ ಕಳಚಲು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ವರ್ಷದ ಹಿಂದೆ ನಾಮಕರಣ ಮಾಡಿದ್ದಾರೆ. ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ ಎಂದು ಬಣ್ಣಿಸಿದರು.


ಶಿಕ್ಷಣ, ಧರ್ಮ ಸಂಸ್ಕೃತಿ ಉಳುವಿಗೆ ಮಠ, ಆಶ್ರಮಗಳ ಪರಿಶ್ರಮ ಅಪಾರ: ಡಿಸಿಎಂ ಗೋವಿಂದ ಕಾರಜೋಳ


ಸಮಾಜ ಕಲ್ಯಾಣ ಇಲಾಖೆಯಿಂದ ಈ ಭಾಗದಲ್ಲಿ ₹30 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಿದ್ದು, ಕೆಲವೊಂದು ಪೂರ್ಣಗೊಂಡಿವೆ. ಅವುಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ನೆರವೇರಿಸಿದರು ಎಂದರು.


ಕಳೆದ ವರ್ಷ ರಾಜ್ಯದಲ್ಲಿ ಬರ, ನೆರೆ ಮತ್ತು ಪ್ರವಾಹದ ಸಂಕಷ್ಟ ಇತ್ತು. ಈ ವರ್ಷ ನೆರೆ ಮತ್ತು ಕೊರೊನಾ ಸಂಕಷ್ಟ ಎದುರಾಗಿದೆ. ಈ ಸಂಕಷ್ಟಗಳ ಮಧ್ಯೆಯೂ ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದು ಹೇಳಿದರು.


ಸಾವಯವ ಕೃಷಿಗೆ ಆದ್ಯತೆ ನೀಡಲು ಡಿಸಿಎಂ ಗೋವಿಂದ ಎಂ ಕಾರಜೋಳ ಕರೆ


ಕಲ್ಯಾಣ ಕರ್ನಾಟಕ ಪ್ರದೇಶ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಈ ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.