ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯು ಸನಿಹದಲ್ಲಿರುವ ಈ ಶುಭ ಸಂದರ್ಭದಲ್ಲಿ , ಆರ್ಕಿಡ್ಸ್‌ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ಹಬ್ಬವನ್ನು  ಅರ್ಥಪೂರ್ಣವಾಗಿ ಆಚರಿಸಲು  #ShineYourCity (ನಿಮ್ಮ ನಗರವನ್ನು ಬೆಳಗಿಸಿ)  ಅಭಿಯಾನವನ್ನು ಕೈಗೊಂಡರು.


COMMERCIAL BREAK
SCROLL TO CONTINUE READING

ಈ ವರ್ಷ ಪರಿಸರಸ್ನೇಹಿ ದೀಪಾವಳಿಯನ್ನು ಆಚರಿಸಲು ನಾಗರೀಕರನ್ನು ಉತ್ತೇಜಿಸಲು, ಆರ್ಕಿಡ್ಸ್‌ ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.ಬೆಂಗಳೂರಿನ ಬಿಟಿಎಂ ಲೇಔಟಿನ ನಂದಿನಿ ಮೈದಾನದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಖ್ಯಾತ ಪರಿಸರವಾದಿ, ಹಿರಿಯ ನಟ ಹಾಗೂ ಎಕೋ ವಾಚ್‌ ಸಂಸ್ಥಾಪಕ ಸುರೇಶ ಹಬ್ಳೀಕರ್‌ ಚಾಲನೆ ನೀಡಿದರು.ಸದ್ಗುರು ವಿರುದ್ಧ ಹೇಳಿಕೆ : ಕಾಂಗ್ರೆಸ್‌ ಮಾಜಿ ಎಂಎಲ್‌ಸಿ ವಿರುದ್ಧ ಲೀಗಲ್ ನೋಟಿಸ್‌


ಸುರೇಶ ಹೆಬ್ಳೀಕರ್ ಅವರು ವಿದ್ಯಾರ್ಥಿಗಳಿಗೆ ಜೀವವೈವಿಧ್ಯದ ಮಹತ್ವ ಮತ್ತು ಪರಿಸರ ಉಳಿಸುವ ಅಗತ್ಯತೆಯ ಕುರಿತು ಮಾತನಾಡಿದರು. ನಗರೀಕರಣಕ್ಕೆ ಆದ್ಯತೆ ನೀಡುವ ಮೂಲಕ ಮನುಜ ಸಮೂಹ ಪ್ರಕೃತಿಯ  ವಿನಾಶಕ್ಕೆ ಕಾರಣರಾಗಿದ್ದಾರೆ.ಆದ್ದರಿಂದ ಪರಿಸರ ಉಳಿಸುವುದು ನಮಗೆ ಬಹುಮುಖ್ಯವಾಗಿದ್ದು, ಯುವ ಮನಸ್ಸುಗಳು ಪ್ರಾಥಮಿಕವಾಗಿ ಇದರ ಕಡೆ  ಗಮನಹರಿಸಬೇಕು. ಅಳಿದಿರುವ ಪ್ರಕೃತಿಯನ್ನು ಪೋಷಿಸಿ ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.


ಇದನ್ನೂ ಓದಿ : Diwali 2022 : ದೀಪಾವಳಿ ಸಂದರ್ಭದಲ್ಲಿ ಶರೀರ ನಿರ್ವಿಷಗೊಳಿಸಿ ತೂಕ ಇಳಿಸಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ


ಆರ್ಕಿಡ್ಸ್‌ ಆಂತಾರಾಷ್ಡ್ರೀಯ ಶಾಲೆ, ಬಿಟಿಎಂ ಲೇಔಟ್‌ನ ಪ್ರಾಂಶುಪಾಲೆ  ಜಾಸ್ಮಿನ್ ಕೆ. ಜೆ ಮಾತನಾಡಿ, “ ವಿದ್ಯಾರ್ಥಿಗಳಿಗೆ ಪರಿಸರ ಶಿಕ್ಷಣವು  ಅಗತ್ಯವಾಗಿದ್ದು, ಸಂಕೀರ್ಣ ಪರಿಸರ ಸಮಸ್ಯೆಗಳನ್ನು ಪರಿಹರಿಸಿ ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಜ್ಞಾನ ಮತ್ತು ಕೌಶಲ್ಯವನ್ನು ಬೆಳೆಸಲು ಇದು ಸಹಾಯ ಮಾಡುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ, ಎಳವೆಯಲ್ಲಿಯೇ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದರೆ ಅವರು ಮುಂದಕ್ಕೆ ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ” ಎಂದರು.


ಪರಿಸರವನ್ನು ಸ್ವಚ್ಛವಾಗಿರಿಸಿ, ಪಟಾಕಿ ಮುಕ್ತ ದೀಪಾವಳಿಯನ್ನು ಆಚರಿಸುವಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಭಾ ಕಾರ್ಯಕ್ರಮದ ನಂತರ ಸುರೇಶ್‌ ಹೆಬ್ಳೀಕರ್‌ ಅವರೊಂದಿಗೆ ಸಂವಾದ ನಡೆಯಿತು


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.