ಬೆಂಗಳೂರು: ಎಲೆಕ್ಟೊರಲ್ ಬಾಂಡ್ ಗಳು ಅಸಾಂವಿಧಾನಿಕ ಮತ್ತು ಕೂಡಲೇ ಇದನ್ನು ಸ್ಥಗಿತಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಬಾಂಡ್ ಯೋಜನೆ ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದ್ದು, ಪರೋಕ್ಷ ಭ್ರಷ್ಟಾಚಾರವಾಗಿತ್ತು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ದೇಣಿಗೆ ಕೊಟ್ಟವರ ಹೆಸರು ಗೌಪ್ಯವಾಗಿಡುವುದು, ಆಡಳಿತದಲ್ಲಿರುವ ಒಂದು ಪಕ್ಷ ಇದರ ಸಂಪೂರ್ಣ ಪ್ರಯೋಜನ ಪಡೆಯುವುದು ಪ್ರಜಾಪ್ರಭುತ್ವ ಮತ್ತು ಚುನಾವಣಾ ವ್ಯವಸ್ಥೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತಿತ್ತು. ಇದನ್ನು ಕಾಂಗ್ರೆಸ್ ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಫೆ.17ರಂದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೆಂಗಳೂರು ಚಲೋ 


ಸುಪ್ರೀಂಕೋರ್ಟ್ ನ ಈ ತೀರ್ಪು ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರು ಇಟ್ಟಿದ್ದ ನಂಬಿಕೆ ಮತ್ತು ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರೂ ಆದ ಈಶ್ವರ ಖಂಡ್ರೆ ಹೇಳಿದ್ದಾರೆ. 


ಸತ್ಯಮೇವ ಜಯತೆ – ಸತ್ಯಕ್ಕೆ ಯಾವತ್ತೂ ಸಾವಿಲ್ಲ. ಕೊನೆಗೂ ನ್ಯಾಯ ದೊರೆತಿದೆ. ಈವರೆಗೆ ನೀಡಲಾಗಿರುವ ಎಲ್ಲ ಎಲೆಕ್ಟ್ರೋಲ್ ಬಾಂಡ್ ಗಳ ಮಾಹಿತಿ ಬಹಿರಂಗ ಪಡಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.