ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ 80 ಲಕ್ಷ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ
Eshwar Khandre: ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು : ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ ಎಂದರು.
ಇದನ್ನೂ ಓದಿ: ರಸ್ತೆ ಗುಂಡಿ ಮೇಲ್ವಿಚಾರಣೆ-ಅನುಷ್ಠಾನಕ್ಕೆ ವಲಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚನೆ
ಕಳೆದ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
2023ರ ಏಪ್ರಿಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದರು. ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಚನ್ನಗಿರಿ ಪೋಲೀಸ್ ಠಾಣೆ ಮೇಲೆ ದಾಳಿ ಪ್ರಕರಣ : ೨೫ ಜನರ ಬಂಧನ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.