ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ. ಈ ಸರ್ಕಾರ ಸಮಾಜದಲ್ಲಿ ಮಕ್ಕಳಿಂದ ಹಿಡಿದು ಎಲ್ಲರಲ್ಲಿಯೂ ಸಂಘರ್ಷ ಉಂಟು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನೇ ಬದಲಿಸಿದ್ದಾರೆ. ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎನ್ನುವ ಮೂಲಕ  ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಿಸುತ್ತಿದೆ ಎಂದು  ಆರೋಪಿಸಿದ್ದಾರೆ.  


COMMERCIAL BREAK
SCROLL TO CONTINUE READING

ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಈ ಕಾರಣಕ್ಕೇ ನಾವು ಖಜಾನೆ ಖಾಲಿ ಇದೆ ಎಂದು ಹೇಳುತ್ತಿದ್ದೇವೆ‌. ರಾಜ್ಯದ ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ. ಮೊದಲು ನಿಮ್ಮ ಶಾಲಾ ಮಕ್ಕಳಿಗೆ ಅನ್ನ ಕೊಡಿ  ವಿದ್ಯೆ ಕೊಡಿ ಎಂದು ಬಸವರಾಜ್ ಬೊಮ್ಮಾಯಿ ಕಿಡಿ ಕಾರಿದ್ದಾರೆ. 


ಇದನ್ನೂ ಓದಿ :ಸ್ಕೇಟಿಂಗ್‌ ಮೂಲಕ ಪುಠಾಣಿ ಮಕ್ಕಳಿಂದ ಸಂವಿಧಾನ ಜಾಗೃತಿ


ಬಡವರಿಗೆ ಅಕ್ಕಿಯನ್ನು ನರೇಂದ್ರ ಮೋದಿ ಸರ್ಕಾರ ನೀಡುತ್ತಿದೆ. ಆದರೆ ಅದನ್ನೂ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ನೀಡುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆಪಾದಿಸಿದ್ದಾರೆ. ರಾಮಮಂದಿರ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಮಮಂದಿರ 500 ವರ್ಷಗಳ ಹಿಂದೆಯೇ ಇದೆ. ಸಂತೋಷ ಲಾಡ್ ಏನು ಹೇಳಿಕೆ ನೀಡಿದ್ದಾರೊ ಗೊತ್ತಿಲ್ಲ. ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂಡು ಹೇಳಿದ್ದಾರೆ. 


ಬಿಜೆಪಿ ಗೆಲ್ಲಿಸಲು ಜನ ತೀರ್ಮಾನಿಸಿದ್ದಾರೆ : 
ಇನ್ನು, ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಎಂಪಿ ಸ್ಥಾನ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ಚುನಾವಣೆ ಫಲಿತಾಂಶ ಬರಲಿದೆ. ಆ ವೇಳೆ ಸತ್ಯ ಎಲ್ಲರಿಗೂ ತಿಳಿಯಲಿದೆ. ಅದಕ್ಕಾಗಿ ಅವರು ಕೇಂದ್ರ ರಾಜ್ಯ ಸರ್ಕಾರದ ನಡುವೆ ಕಂದಕ ಸೃಷ್ಟಿಸಲು ಮುಂದಾಗಿದ್ದಾರೆ ಎಂದಿದ್ದಾರೆ. ಈಗಾಗಲೇ ಭಾರತದ ಜನರು ಬಿಜೆಪಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ನ ನಾಯಕರಾದ ಕಮಲ್ ನಾಥ್ ಸೇರಿದಂತೆ ಅನೇಕ  ಹಿರಿಯ ನಾಯಕರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು  ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 


ಇದನ್ನೂ ಓದಿ :ದಿನಕ್ಕೆ 2 ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮ ಜಾರಿ ತರಲಾಗಿದೆ : ದಿನೇಶ್ ಗುಂಡೂರಾವ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ .