ಬೆಂಗಳೂರು: ಧಾರವಾಡ ಜಿಲ್ಲೆಯ ನುಗ್ಗೇಕೇರಿಯಲ್ಲಿ ಮುಸ್ಲಿಂ ವ್ಯಾಪ್ಯಾರಿಗಳ ತಳ್ಳುಗಾಡಿ ಧ್ವಂಸ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ರಾಮಭಕ್ತರ ಸೋಗಿನಲ್ಲಿ ಬಂದು ಕೃತ್ಯವೆಸಗಿದ್ದಾರೆ ಅಂತಾ ಕಿಡಿಕಾರಿದ್ದಾರೆ.  


COMMERCIAL BREAK
SCROLL TO CONTINUE READING

‘ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮು‌ಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು ಹೇಯ & ಪರಮ ಕಿರಾತಕ ಕೃತ್ಯ’ ಅಂತಾ ಹೇಳಿದ್ದಾರೆ.


ಅತೀಹೆಚ್ಚು ಸುಳ್ಳು ಹೇಳಿದ ಬಿಜೆಪಿ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ: ಸಿದ್ದರಾಮಯ್ಯ


ಶ್ರೀರಾಮಚಂದ್ರನಿಂದ ಇವರು ಕಲಿತದ್ದು ಯಾವ ಧರ್ಮ? ಹಾಗೂ ಸೇವೆಯನ್ನೇ ಧರ್ಮವೆಂದು ನಂಬಿದ ಶ್ರೀ ಆಂಜನೇಯನಿಂದ ಇವರು ಕಲಿತ ಆದರ್ಶ ಧರ್ಮ ಇದೇನಾ?’ ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಸೈಮನ್ ರಾಜ್‌ಗೆ ಹಣ ಕೊಟ್ಟು ಸುಳ್ಳು ಹೇಳಿಸಿದ್ದಾರೆ: ಜಮೀರ್ ಅಹ್ಮದ್ ಆರೋಪ


‘ನನ್ನ ಪ್ರಕಾರ ಇವರು ಹಿಂದೂಗಳೇ ಅಲ್ಲ, ಮನಷ್ಯರೂ ಅಲ್ಲ. ಧರ್ಮಾಂದತೆಯ ಮತ್ತಿನಲ್ಲಿ ತೇಲುತ್ತಿರುವ ಕ್ರೂರ ಮೃಗಗಳು. ಅಂಗಡಿಗಳನ್ನು ನಾಶಪಡಿಸಿ, ಕಲ್ಲಂಗಡಿಯನ್ನು ಹಾಳುಗೆಡವಿದ ಎಲ್ಲ ಕಿರಾತಕರ ವಿರುದ್ಧ ಸರ್ಕಾರ ಕೂಡಲೇ ಕ್ರಿಮಿನಲ್ ಕೇಸು ದಾಖಲಿಸಬೇಕು, ರಾಜ್ಯದಿಂದಲೇ ಗಡೀಪಾರು ಮಾಡಬೇಕು. ಇದು ನನ್ನ ಆಗ್ರಹ’ವೆಂದು ಎಚ್‍ಡಿಕೆ ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.