ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಸೋಮವಾರ ಬೆಂಗಳೂರು ಬಂದ್‍ಗೆ ಕರೆ ನೀಡಿವೆ. ಸೆ.29ರಂದು ಕರ್ನಾಟಕ ಬಂದ್‍ಗೂ ಕರೆ ನೀಡಲಾಗಿದೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕನ್ನಡಿಗರಿಗೆ ಮತ್ತೊಂದು ಶಾಕ್ ಉಂಟಾಗಿದೆ. ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ.


COMMERCIAL BREAK
SCROLL TO CONTINUE READING

ಕಾವೇರಿ ನದಿ ನೀರು ಹಂಚಿಕೆ ವಿವಾದ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಅವರು, ‘ಡಿಎಂಕೆ ಯೋಗಕ್ಷೇಮಕ್ಕೆ ಕರ್ನಾಟಕದ ಹಿತವನ್ನು ಸಂಪೂರ್ಣವಾಗಿ ಬಲಿ ಕೊಟ್ಟಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ಬಂಡೆ ಎಳೆದಿದೆ ಎಂದು ಕಿಡಿಕಾರಿದ್ದಾರೆ. ‘ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3,000 ಕ್ಯೂಸೆಕ್ಸ್ ನೀರು ಹರಿಸಲು ಕರ್ನಾಟಕಕ್ಕೆ ಇಂದು ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ, ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣಶಾಸನ.


ಇದನ್ನೂ ಓದಿ: ಕಾವೇರಿ ಪ್ರತಿಭಟನೆಯಲ್ಲಿ ಊಟ ತಿಂಡಿಯ ವ್ಯವಸ್ಥೆ


ಕಾವೇರಿ ಕೊಳ್ಳ ಮತ್ತು ಬೆಂಗಳೂರು ನಗರದ ಜನರ ಕತ್ತು ಹಿಚುಕುವುದಕ್ಕೆಂದೇ ಕಾಂಗ್ರೆಸ್ ಸರ್ಕಾರ ಬಂದಿದೆಯೇನೋ ಎಂದು ಬಹಳ ನೋವಿನಿಂದ ಹೇಳಲೇಬೇಕಾಗಿದೆ. ಕೆಆರ್‍ಎಸ್ ಜಲಾಶಯಕ್ಕೆ ನಿತ್ಯವೂ 10,000 ಕ್ಯೂಸೆಕ್ಸ್ ಒಳಹರಿವು ಇದೆ ಎನ್ನುತ್ತಾರೆ ಜಲಸಂಪನ್ಮೂಲ ಸಚಿವರು. ಇದಕ್ಕೆ ತದ್ವಿರುದ್ಧವಾಗಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು "ನಮ್ಮಲ್ಲಿ ನೀರೇ ಇಲ್ಲ" ಎಂಬ ಮಾಹಿತಿ ನೀಡುತ್ತಾರೆ. ಇನ್ನೊಂದೆಡೆ ಹಿರಿಯ ಅಧಿಕಾರಿಯೊಬ್ಬರು "ಈ ಆದೇಶದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಉಳಿತಾಯವಾಗಿದೆ" ಎನ್ನುತ್ತಾರೆ. 'ಎತ್ತು ಏರಿಗೆ, ಕೋಣ ನೀರಿಗೆ' ಎನ್ನುವಂತಿದೆ ಜಲಸಂಪನ್ಮೂಲ ಇಲಾಖೆ ಮತ್ತು ಸರ್ಕಾರದ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ಅನರ್ಥಗಳನ್ನೇ ಮಾಡುತ್ತಿರುವ ಈ ಸರ್ಕಾರದ ವೈಫಲ್ಯದ ಲಾಭವನ್ನು ತಮಿಳುನಾಡು ಅತ್ಯಂತ ಜಾಣತನದಿಂದ ಪಡೆದುಕೊಳ್ಳುತ್ತಿದೆ’ ಎಂದು ಎಚ್‍ಡಿಕೆ ಟೀಕಿಸಿದ್ದಾರೆ.


‘ನಾವು ಕುಡಿಯಲು ನೀರು ಕೇಳುತ್ತಿದ್ದೇವೆ, ತಮಿಳುನಾಡು ಅಕ್ರಮವಾಗಿ ಮಿತಿಮೀರಿದ ವಿಸ್ತೀರ್ಣದಲ್ಲಿ ಬೆಳೆದ ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಅಲ್ಲಿ ಸ್ವಾರ್ಥ ಇದೆ, ಇಲ್ಲಿ ಜನರ ಬದುಕಿದೆ. ಮಾನವೀಯ ನ್ಯಾಯಕ್ಕೆ ವಿರುದ್ಧವಾದ ತಮಿಳುನಾಡು ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಆ ರಾಜ್ಯದ ಇಂಥ ಮನಃಸ್ಥಿತಿಯ ವಿರುದ್ಧ ಪ್ರಬಲ ಹೋರಾಟ ಮಾಡುವ ಇಚ್ಛಾಶಕ್ತಿ ಈ ಸರ್ಕಾರಕ್ಕೆ ಇಲ್ಲದಾಗಿದೆ. ಕೇವಲ ಪಾಲುದಾರ ಪಕ್ಷ ಡಿಎಂಕೆಯ ಯೋಗಕ್ಷೇಮವನ್ನೇ ಕೈ ಸರ್ಕಾರ ನೋಡುತ್ತಾ, ಕರ್ನಾಟಕದ ಹಿತವನ್ನು ಸಂಪೂರ್ಣ ಬಲಿ ಕೊಟ್ಟಿದೆ. ಕನ್ನಡಿಗರ ಮೇಲೆ 'ಬಂಡೆ' ಎಳೆದಿದೆ’ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.


ಸಂಕಷ್ಟ ಹಂಚಿಕೆ ಸೂತ್ರ ರೂಪಿಸಿದ ಹೊರತು ತಮಿಳುನಾಡಿಗೆ ನೀರು ಹರಿಸಬೇಡಿ


‘ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ಈಗಾಗಲೇ ಕಾವೇರಿ ನೀರು ಹಂಚಿಕೆಯನ್ನು ನ್ಯಾಯಾಧಿಕರಣ ಅಖೈರುಗೊಳಿಸಿದ್ದು, ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಆದರೆ ಸಂಕಷ್ಟ ಕಾಲದಲ್ಲಿ ಪರಿಹಾರವೇನು? ಮಾತೆತ್ತಿದರೆ ನೀರು ಬಿಡಿ ಎಂದು ಆದೇಶಿಸುವ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) & ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಈ ಕೂಡಲೇ 'ಸಂಕಷ್ಟ ಹಂಚಿಕೆ ಸೂತ್ರ'ವನ್ನು ರೂಪಿಸಲೇಬೇಕು. ಆ ನಿಟ್ಟಿನಲ್ಲಿ ಸರ್ಕಾರ ಒತ್ತಡ ಹೇರಿ, ಆ ಸೂತ್ರ ರೂಪಿಸದ ಹೊರತು ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲವೆಂದು ಕಡ್ಡಿ ತುಂಡು ಮಾಡಿದಂತೆ ಸ್ಪಷ್ಟವಾಗಿ ಹೇಳಲೇಬೇಕು. ಯಾವುದೇ ಕಾರಣಕ್ಕೂ ಈಗ ನೀರು ಹರಿಸಬಾರದು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.