HD Revanna: ದೇವಸ್ಥಾನದಲ್ಲಿ ಮಾಜಿ ಸಚಿವ ಎಚ್​.ಡಿ.ರೇವಣ್ಣ ಅವರು ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ಈ ನಡೆದಿದೆ. ರೇವಣ್ಣರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಸದ್ಯ ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಏಕಾದಶಿಯ ಪ್ರಯುಕ್ತ ಉಪವಾಸವಿದ್ದ ರೇವಣ್ಣ ಅವರು ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ವಾಪಸ್ ಬರುವಾಗ‌ ಕಾಲು ಜಾರಿ ಬಿದ್ದಿದ್ದು, ಅವರ ಪಕ್ಕೆಲುಬುಗೆ ಪೆಟ್ಟಾಗಿದೆ. ಎಚ್​.ಡಿ.ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟಗಳ ಮೇಲೆ ಸಂಕಷ್ಟಗಳು ಎದುರಾಗುತ್ತಿವೆ. ಅವರ ಇಬ್ಬರು ಪುತ್ರರೂ ಜೈಲುಪಾಲಾಗಿದ್ದು, ಹೀಗಾಗಿ ರೇವಣ್ಣ ಟೆಂಪಲ್‌ ರನ್‌ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಭೂ ಕುಸಿತಕ್ಕೆ ಸಿಲುಕಿ ಅಗಲಿದವರಿಗಾಗಿ ಸಚಿವರ ಕಂಬನಿ; ಎಚ್ಚರಿಕೆ ವಹಿಸುವಂತೆ ಜನತೆಗೆ ಮನವಿ


ದೇವರು ತಮ್ಮ ಕುಟುಂಬದಕ್ಕೆ ಎದುರಾಗಿರುವ ಕಾನೂನು ಸಂಕಷ್ಟಗಳಿಂದ ಮುಕ್ತಿ ನೀಡಲಿ ಅಂತಾ ರೇವಣ್ಣ ಪ್ರಾರ್ಥಿಸುತ್ತಿದ್ದಾರೆ. ಉಪವಾಸವಿದ್ದ ರೇವಣ್ಣ ಇದೀಗ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಅವರಿಗೆ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.


ಎಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್! 


ಎಚ್.ಡಿ.ರೇವಣ್ಣ ಕಿಡ್ನ್ಯಾಪ್ ಕೇಸ್ ಎದುರಿಸುತ್ತಿದ್ದು, ಅತ್ಯಾಚಾರ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಅಂತಾ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರೇವಣ್ಣ ಸದ್ಯ ಬೇಲ್ ಮೇಲೆ ಹೊರಗಿದ್ದಾರೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ SIT ಅಧಿಕಾರಿಗಳು ತನಿಖೆ ಮುಗಿಸಿ, ಚಾರ್ಜ್​ಶೀಟ್ ಸಲ್ಲಿಕೆಗೆ ತಯಾರಿ ನಡೆಸಿದ್ದಾರೆ. 10 ದಿನ ಜೈಲು ಶಿಕ್ಷೆ ಅನುಭವಿಸಿ ರೇವಣ್ಣ ಹೊರ ಬಂದಿದ್ದಾರೆ. ಪತ್ನಿ ಭವಾನಿ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ದಾಖಲಾಗಿತ್ತು.


ಭವಾನಿ ರೇವಣ್ಣರ ಸೂಚನೆ ಮೇರೆಗೆ ಕಾರು ಚಾಲಕ ಅಜಿತ್‌ ಎಂಬಾತ ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪವಿತ್ತು. ಕಿಡ್ನ್ಯಾಪ್ ಬಗ್ಗೆ ಕೆ.ಆರ್.ನಗರ ಠಾಣೆಯಲ್ಲಿ ಸಂತ್ರಸ್ತೆಯ ಮಗ ದೂರು ನೀಡಿದ್ದ. ವಿಚಾರಣಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಹೈಕೋರ್ಟ್ ಮೆಟ್ಟಿಲೇರಿದ್ದ ಭವಾನಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ಕೆ.ಆರ್​.ನಗರ ಮತ್ತು ಹಾಸನಕ್ಕೆ ಹೋಗುವಂತಿಲ್ಲವೆಂದು ಭವಾನಿಗೆ ಷರತ್ತು ವಿಧಿಸಲಾಗಿತ್ತು.


ಇದನ್ನೂ ಓದಿ: ಸಿದ್ದರಾಮಯ್ಯನವರೇ ಈ ನಾಟಕವೆಲ್ಲಾ ಬಿಟ್ಟು ತೆಪ್ಪಗೆ ರಾಜೀನಾಮೆ ಕೊಟ್ಟು ನಿಮ್ಮ ಮರ್ಯಾದೆ ಉಳಿಸಿಕೊಳ್ಳಿ-ಆರ್ ಅಶೋಕ್


ಜೈಲಿನಲ್ಲಿರುವ ಇಬ್ಬರು ಪುತ್ರರು!


ಇನ್ನು ಎಚ್.ಡಿ.ರೇವಣ್ಣರ ಪುತ್ರರಾದ ಪ್ರಜ್ವಲ್‌ ರೇವಣ್ಣ ಮತ್ತು ಸೂರಜ್‌ ರೇವಣ್ಣ ಸದ್ಯ ಜೈಲಿನಲ್ಲಿದ್ದಾರೆ. ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವನ್ನು ಪ್ರಜ್ವಲ್‌ ರೇವಣ್ಣ ಎದುರಿಸುತ್ತಿದ್ದು, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸೂರಜ್ ರೇವಣ್ಣ ಜೈಲುಪಾಲಾಗಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.