ಬೆಂಗಳೂರು : 2021-22ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಕನ್ನಡ ಪ್ರವೇಶ, ಕಾವ್ಯ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್-19ರ ಮಾರ್ಗಸೂಚಿಯಂತೆ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪ್ರಸಕ್ತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು  ಫೆಬ್ರವರಿ 18, 19 ಹಾಗೂ 20 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : High Court : 'ತೀರ್ಪು ಬರುವವರೆಗೂ ಧಾರ್ಮಿಕ ಉಡುಗೆ ತೊಡಬಾರದು' : ಹೈಕೋರ್ಟ್‌ ಖಡಕ್ ಸೂಚನೆ


ಸಂಬಂಧಪಟ್ಟ  ವಿದ್ಯಾರ್ಥಿಗಳಿಗೆ ಬದಲಾದ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಫೆಬ್ರವರಿ 10 ರ ನಂತರವೂ ವೇಳಾಪಟ್ಟಿ ತಲುಪದಿರುವ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ, ಬೆಂಗಳೂರು-18 ಸಂಪರ್ಕಿಸಬಹುದು.


ಇದನ್ನೂ ಓದಿ : ಹ್ಯಾಂಡ್ ಸಮ್ ಅಲ್ಲು ಅರ್ಜುನ್ ಪುಷ್ಪಾದ ರಗಡ್ ಲುಕ್ ಗೆ ಬದಲಾದಾಗ.. ಇಲ್ಲಿದೆ ನಟನ Transforming ವಿಡಿಯೋ


ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 080-26623584, 26612991 ಹಾಗೂ ಕಛೇರಿಯ ವೆಬ್ ಸೈಟ್ WWW.kasapa.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.