ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಆಚರಿಸಿ, ಸಿದ್ದರಾಮಯ್ಯ ಪರ ಹೋರಾಟ ಮಾಡಲು ಹಿಂದುಳಿದ ವರ್ಗಗಳ ಮುಖಂಡರು, ಅಭಿಮಾನಿಗಳು ನಿರ್ಧರಿಸಿದರು.


COMMERCIAL BREAK
SCROLL TO CONTINUE READING

ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶ್ರಮಿಕ ವರ್ಗಗಳ ಒಕ್ಕೂಟವು ಸಭೆ ಸೇರಿ; ಹಿಂದುಳಿದ ವರ್ಗಗಳ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಶಕ್ತಿಯನ್ನು ಅಸ್ಥಿರ ಗೊಳಿಸಲು ಹೊರಟಿರುವ ಪಟ್ಟಭದ್ರ ಶಕ್ತಿಗಳ ವಿರುದ್ಧ ಹೋರಾಟ ರೂಪಿಸಲು ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನಿಸಲಾಯಿತು.


ಇದನ್ನೂ ಓದಿ-ದುಲ್ಕರ್ ಸಲ್ಮಾನ್ ಪತ್ನಿ ಯಾರು ಗೊತ್ತೆ..? ವಿಶ್ವ ಸುಂದರಿಗೆ ಸಮ, ಸ್ಟಾರ್ ಹೀರೋಯಿನ್‌ಗಳೆಲ್ಲ ಲೆಕ್ಕಕ್ಕಿಲ್ಲ ಈಕೆ ಅಂದಕ್ಕೆ


 ಕಾಂಗ್ರೆಸ್ ಮುಖಂಡ  ಪು.ಶ್ರೀನಿವಾಸನಾಯಕ ಮಾತನಾಡಿ, ಹಿಂದುಳಿದ ವರ್ಗಗಳ ನೇತಾರ,ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು ಹಗರಣದಲ್ಲಿ ಸಿಲುಕಿ ರಾಜಕೀಯದಿಂದ ಹೊರ ಹಾಕುವ ಹುನ್ನಾರ ಮಾಡುತ್ತಿದ್ದಾರೆ.ಅಲ್ಲದೆ ಮುಖ್ಯಮಂತ್ರಿ ರಾಜೀನಾಮೆಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ, ಇದರ ವಿರುದ್ದ ಶ್ರಮಿಕ ವರ್ಗಗಳು ಒಗ್ಗೂಡಿ ಪ್ರತಿ ಹೋರಾಟ ರೂಪಿಸುವ ಮೂಲಕ ಸಿದ್ದರಾಮಯ್ಯ  ಅವರನ್ನು ಮುಖ್ಯಮಂತ್ರಿಯಾಗಿ ಉಳಿಸಿಕೊಳ್ಳಬೇಕಿದೆ ಎಂದರು.


ಇದನ್ನೂ ಓದಿ-Sreeleela : ಗ್ಲಾಮರ್‌ ಗೊಂಬೆಯಾಗಿ ಬದಲಾದ ಶ್ರೀಲೀಲಾ...! ವೈರಲ್‌ ಆಗುತ್ತಿವೆ ಕನ್ನಡತಿ ಹಾಟ್‌ ಫೋಟೋಸ್‌


ಸಭೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಆಚರಿಸಲಾಯಿತು.


ಸಭೆಯಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ಜಿಪಂ ಮಾಜಿ ಸದಸ್ಯರಾದ ರಮೇಶ್, ಮಧುವನಹಳ್ಳಿ ಶಿವಕುಮಾರ್, ತಾಪಂ ಸದಸ್ಯ ರಾಜು, ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಸವನಪುರ ರಾಜಶೇಖರ್ ಇತರರು ಇದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.